ಕಾಂಗ್ರೆಸ್ ಮುಖಂಡ 'ಪೆಟ್ರೋಲ್' ನಾರಾಯಣಸ್ವಾಮಿ ಪೊಲೀಸರಿಗೆ ಶರಣು
ಬೆಂಗಳೂರು, ಫೆಬ್ರವರಿ 23: ಪಾಲಿಕೆ ಕಚೇರಿಗೆ ನುಗ್ಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವುದಾಗಿ ಬೆದರಿಸಿದ್ದ ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ಪೊಲೀಸರ ಮುಂದೆ ಶರಣಾಗಿದ್ದಾರೆ.
ಫೆಬ್ರವರಿ 16ರಂದು ಹೊರಮಾವು ಪಾಲಿಕೆ ಕಚೇರಿಗೆ ನುಗ್ಗಿ ಕಚೇರಿಯ ಪೀಠೋಪಕರಣ, ದಾಖಲೆಗಳು, ಬೀರುಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವುದಾಗಿ ಹೆದರಿಸಿದ್ದ ಕೆ.ಆರ್.ಪುರಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾರಾಯಣಸ್ವಾಮಿಯನ್ನು ರಾಮಮೂರ್ತಿ ನಗರ ಪೊಲೀಸರ ಮುಂದೆ ಶರಣಾಗಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಫೆಬ್ರವರಿ 19ರಂದು ನಾರಾಯಣಸ್ವಾಮಿ ಮೇಲೆ ರಾಮಮೂರ್ತಿನಗರ ಪೊಲೀಸರು 6 ಕೇಸುಗಳನ್ನು ದಾಖಲಿಸಿಕೊಂಡಿದ್ದರು. ಅಂದಿನಿಂದ ನಾರಾಯಣಸ್ವಾಮಿ ಅವರು ತಲೆ ಮರೆಸಿಕೊಂಡಿದ್ದರು. ನಾರಾಯಣಸ್ವಾಮಿಯ ಪತ್ತೆಗಾಗಿ ನಾಲ್ಕು ತಂಡಗಳ ರಚನೆ ಮಾಡಿದ್ದರು.

ನಾರಾಯಣಸ್ವಾಮಿ ರಾಮಮೂರ್ತಿನಗರದ ಬಂಜಾರ ಬಡಾವಣೆಯಲ್ಲಿ ತಮ್ಮ ಸಂಬಂಧಿಗಳ ಮನೆಯಲ್ಲಿ ತಂಗಿದ್ದರು ಎನ್ನಲಾಗಿದೆ. ಇಂದು ವಿಚಾರಣೆ ಬಳಿಕ ನಾರಾಯಣಸ್ವಾಮಿಯನ್ನು ನ್ಯಾಯಾಲಯಕ್ಕೆ ಹಾಜರು ಮಾಡಲಾಗುವುದು ಎಂದು ರಾಮಮೂರ್ತಿನಗರ ಪೊಲೀಸ್ ಸಿದ್ದಂದಿ ಹೇಳಿದ್ದಾರೆ.
ನಾರಾಯಣಸ್ವಾಮಿ ಮೇಲೆ ಐಪಿಸಿ ಸೆಕ್ಷನ್ 353,427, 341,504, 506 ಅಡಿ ಕೇಸುಗಳನ್ನು ದಾಖಲಿಸಲಾಗಿದೆ.
-
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
Cabinet Reshuffle: ಶಾಸಕರ ದೆಹಲಿಗೆ ಭೇಟಿ ತಪ್ಪಿಲ್ಲ, ಸಂಪುಟ ಪುನರ್ರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಿದ್ದರಾಮಯ್ಯ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್












Click it and Unblock the Notifications