ಜೆಡಿಎಸ್ಗೆ ರಾಜೀನಾಮೆ ನೀಡಿದ ಕಾಂಗ್ರೆಸ್ನ ಪ್ರಮೋದ್ ಮಧ್ವರಾಜ್!
ಬೆಂಗಳೂರು, ಸೆಪ್ಟೆಂಬರ್ 03: ಕಾಂಗ್ರೆಸ್ ಮಾಜಿ ಸಚಿವ, ಹಾಲಿ ಮುಖಂಡ ಪ್ರಮೋದ್ ಮಧ್ವರಾಜ್ ಅವರು ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ನಿಂದ ಚುನಾವಣೆ ಗೆದ್ದು ಮಂತ್ರಿಯಾಗಿದ್ದ ಪ್ರಮೋದ್ ಮಧ್ವರಾಜ್ ಜೆಡಿಎಸ್ ಯಾವಾಗ ಸೇರಿದ್ದರು ಎಂದು ಹುಬ್ಬೇರಿಸಬೇಡಿ. ಅವರು ಜೆಡಿಎಸ್ ಪಕ್ಷ ಸೇರಿದ್ದರು, ಆದರೆ ಕಾಂಗ್ರೆಸ್ ತೊರೆದಿರಲಿಲ್ಲ. ತಾಂತ್ರಿಕ ಕಾರಣಕ್ಕಾಗಿ ಅವರು ಜೆಡಿಎಸ್ ಪಕ್ಷ ಸೇರಿದ್ದರು.
ಕಳೆದ ಲೋಕಸಭೆ ಚುನಾವಣೆ ವೇಳೆ ಪ್ರಮೋದ್ ಮಧ್ವರಾಜ್ ಅವರು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಚುನಾವಣೆ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದ ಕಾರಣ, ಜೆಡಿಎಸ್ ಪಕ್ಷದಿಂದ ಪ್ರಮೋದ್ ಮಧ್ವರಾಜ್ಗೆ ಟಿಕೆಟ್ ನೀಡಲಾಗಿತ್ತು.

ಜೆಡಿಎಸ್ ಬಿ-ಫಾರಂ ಇಂದ ಸ್ಪರ್ಧಿಸಿದ್ದ ಪ್ರಮೊದ್
ಜೆಡಿಎಸ್ ಪಕ್ಷದಿಂದ ಪ್ರಮೋದ್ ಮಧ್ವರಾಜ್ಗೆ ಟಿಕೆಟ್ ನೀಡಿದ್ದ ಕಾರಣ, ಜೆಡಿಎಸ್ ಬಿ-ಫಾರಂ ಪಡೆಯಲೆಂದು ಪ್ರಮೋದ್ ಅವರು ಜೆಡಿಎಸ್ ಪಕ್ಷ ಸೇರಿದ್ದರು. ಕೇವಲ ತಾಂತ್ರಿಕ ಕಾರಣಕ್ಕಾಗಿ ಮಾತ್ರವೇ ಅವರು ಜೆಡಿಎಸ್ ಪಕ್ಷ ಸೇರಿದ್ದರು. ಆದರೆ ಈಗ ಅವರು ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ಪ್ರಮೋದ್ ಮಧ್ವರಾಜ್ ಪತ್ರ
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಅವರಿಗೆ ರಾಜೀನಾಮೆ ಪತ್ರ ರವಾನಿಸಿರುವ ಪ್ರಮೋದ್ ಮಧ್ವರಾಜ್, ಆಗ ರಾಜಕೀಯ ಕಾರಣ ಹಾಗೂ ಜೆಡಿಎಸ್ ಬಿ-ಫಾರಂ ಪಡೆಯಲೆಂದು ನಾನು ಜೆಡಿಎಸ್ ಸೇರಿದ್ದೆ. ಈಗ ಜೆಡಿಎಸ್-ಕಾಂಗ್ರೆಸ್ ಪಕ್ಷಗಳು ಒಟ್ಟಿಗೆ ಇಲ್ಲವಾಗಿರುವ ಕಾರಣ ನಾನು ಜೆಡಿಎಸ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ಹೇಳಿದರು.

ಮೈತ್ರಿ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದ ಪ್ರಮೋದ್
ಲೋಕಸಭೆ ಚುನಾವಣೆ ಸಮಯದಲ್ಲಿ ಪ್ರಮೋದ್ ಮಧ್ವರಾಜ್ ಅವರಿಗೆ ಜೆಡಿಎಸ್ ಪಕ್ಷದಿಂದ ಟಿಕೆಟ್ ನೀಡಲಾಗಿತ್ತು. ಅವರು ಮೈತ್ರಿ ಅಭ್ಯರ್ಥಿಯಾಗಿ ಬಿಜೆಪಿಯ ಶೋಭಾ ಕರಂದ್ಲಾಜೆ ವಿರುದ್ಧ ಸ್ಪರ್ಧಿಸಿದ್ದರು. ಆದರೆ 27,018 ಮತಗಳ ಅಂತರದಿಂದ ಸೋಲುಂಡರು.

ಸಚಿವರಾಗಿದ್ದ ಪ್ರಮೋದ್ ಮಧ್ವರಾಜ್
ಪ್ರಮೋದ್ ಮಧ್ವರಾಜ್ ಅವರು ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಕ್ರೀಡಾ ಮತ್ತು ಯುವಜನ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಆದರೆ 2018 ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸೋಲುಂಡರು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications