ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಶ್ವಾಸಮತಕ್ಕೂ ಮುನ್ನಾ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

|
Google Oneindia Kannada News

ಬೆಂಗಳೂರು, ಜುಲೈ 14: ನಾಳೆ (ಜುಲೈ 15) ಕಾಂಗ್ರೆಸ್ ಪಕ್ಷವು ಶಾಸಕಾಂಗ ಸಭೆ ನಡೆಸಲಿದ್ದು, ವಿಶ್ವಾಸಮತ ಯಾಚನೆಗೂ ಮುನ್ನ ಕರೆಯಲಾಗಿರುವ ಈ ಸಭೆಯು ಅತ್ಯಂತ ಮಹತ್ವ ಪಡೆದುಕೊಂಡಿದೆ.

ಕಾಂಗ್ರೆಸ್ ಶಾಸಕರು ಪ್ರಸ್ತುತ ಯಶವಂಪುರದ ತಾಜ್ ವಿವಾಂತಾ ಹೊಟೆಲ್‌ನಲ್ಲಿ ಇದ್ದು, ನಾಳೆ ಅಲ್ಲಿಂದಲೇ ಅಧಿವೇಶನಕ್ಕೆ ಹಾಜರಾಗಲಿದ್ದಾರೆ.

ಸೋಮವಾರವೇ ವಿಶ್ವಾಸಮತಯಾಚನೆಗೆ ಬಿಜೆಪಿ ಒತ್ತಡಸೋಮವಾರವೇ ವಿಶ್ವಾಸಮತಯಾಚನೆಗೆ ಬಿಜೆಪಿ ಒತ್ತಡ

ಆದರೆ ಅಧಿವೇಶನಕ್ಕೂ ಮುನ್ನವೇ ಕಾಂಗ್ರೆಸ್ ಪಕ್ಷವು ಅದೇ ತಾಜ್ ವಿವಾಂತಾ ಹೊಟೆಲ್‌ನಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಲಿದ್ದಾರೆ.

Congress legislative party meeting on July 15

ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಅಧಿವೇಶನ ಮತ್ತು ವಿಶ್ವಾಸಮತ ಯಾಚನೆಯ ಬಗ್ಗೆ ಅತ್ಯಂತ ಮಹತ್ವದ ಸೂಚನೆಗಳನ್ನು ನಾಳಿನ ಶಾಸಕಾಂಗ ಸಭೆಯಲ್ಲಿ ನೀಡಲಾಗುತ್ತದೆ.

ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶಾಸಕಾಂಗ ಸಭೆ ನಡೆಯಲಿದ್ದು, ಎಲ್ಲ ಮುಖಂಡರು ಸಭೆಯಲ್ಲಿ ಹಾಜರಿರಲಿದ್ದಾರೆ. ನಾಳೆ ಬೆಳಿಗ್ಗೆ 9 ಗಂಟೆಗೆ ಸಭೆ ನಡೆಯಲಿದೆ.

ಸಿದ್ದರಾಮಯ್ಯಗೆ ಕೈ ಕೊಟ್ಟು ಮುಂಬೈಗೆ ವಿಮಾನ ಹತ್ತಿದ ಎಂಟಿಬಿ ನಾಗರಾಜುಸಿದ್ದರಾಮಯ್ಯಗೆ ಕೈ ಕೊಟ್ಟು ಮುಂಬೈಗೆ ವಿಮಾನ ಹತ್ತಿದ ಎಂಟಿಬಿ ನಾಗರಾಜು

ಕಳೆದ ವಾರ ಕಾಂಗ್ರೆಸ್ ಶಾಸಕಾಂಗ ಸಭೆ ಆಯೋಜಿಸಲಾಗಿತ್ತು. ಅದರಲ್ಲಿ ಶಾಸಕಾಂಗ ಸಭೆಗೆ ರಾಜೀನಾಮೆ ನೀಡಿರುವವರೂ ಸೇರಿದಂತೆ ಸುಮಾರು 16 ಮಂದಿ ಗೈರು ಹಾಜರಾಗಿದ್ದರು.

English summary
Congress legislative party meeting on July 15 morning 9 AM at Taj Vivantha hotel. Congress will give instructions to its MLAs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X