Breaking: ಕಾಂಗ್ರೆಸ್ನಿಂದ ದೇಶ ಲೂಟಿ: ರಮೇಶ್ ಕುಮಾರ್ ಹೇಳಿಕೆಯೇ ಸಾಕ್ಷಿ
ಬೆಂಗಳೂರು ಜುಲೈ 21: ಕಾಂಗ್ರೆಸ್ ಪಕ್ಷ ದೇಶವನ್ನು ಹೇಗೆ ಕೊಳ್ಳೆ ಹೊಡೆದಿದೆ ಎಂಬ ನಿಜವನ್ನು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರೇ ಹೇಳಿದ್ದಾರೆ ಎಂದು ರಾಜ್ಯ ಬಿಜೆಪಿ ಲೇವಡಿ ಮಾಡಿದೆ.
ಬೆಂಗಳೂರಿನಲ್ಲಿ ಗುರುವಾರ ಕೆಪಿಸಿಸಿ ವತಿಯಿಂದ ನಡೆದ ಪ್ರತಿಭಟನೆ ವೇಳೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಕಾಂಗ್ರೆಸ್ ನಿಂದ ಸಾಕಷ್ಟು ಮಾಡಿಕೊಂಡಿದ್ದೇವೆ ಎಂದು ಹೇಳಿದ್ದರು. ಆ ಕುರಿತು ವಿಡಿಯೋವನ್ನು ಜವಳಿ ಖಾತೆ ಸಚಿವ ಶಂಕರ್ ಪಾಟೀಲ್ ಮುನೇನ್ ಕೊಪ್ಪ ಅವರು ಮಾಡಿರುವ ಟ್ವಿಟ್ ಅನ್ನು ರಾಜ್ಯ ಬಿಜೆಪಿ ಮರ ಟ್ವಿಟ್ ಮಾಡಿ ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದೆ. ದೇಶದಲ್ಲಿ ಕಾಂಗ್ರೆಸ್ ಲೂಟಿ ಹೊಡಿದಿದ್ದಕ್ಕೆ ರಮೇಶ್ ಕುಮಾರ್ ಅವರ ಈ ಹೇಳಿಕೆಯೆ ಸಾಕ್ಷಿ ಎಂದು ಬಿಜೆಪಿ ತಿಳಿಸಿದೆ.
ಪ್ರಧಾನಿಯಾಗಿದ್ದ ಜವಾಹರ್ ಲಾಲ್ ನೆಹರು ಅವರ ಕಾಲದಿಂದಲೂ ಭಾರತೀಯ ಕಾಂಗ್ರೆಸ್ ಪಕ್ಷ (ಐಎನ್ಸಿ) ದೇಶವನ್ನು ಅಪಾರ ಪ್ರಮಾಣದಲ್ಲಿ ಕೊಳ್ಳೆ ಹೊಡೆದಿದೆ. ವರ್ಷಗಳಿಂದಲೂ ದೇಶದ ಜನರ ಸಂಪತ್ತನ್ನು ಹೇಗೆ ದೋಚಲಾಗಿದೆ ಎಂದು ರಮೇಶ್ ಕುಮಾರ್ ಅವರೇ ಸ್ಪಷ್ಟವಾಗಿ ಹೇಳಿದ್ದಾರೆ. ಕಾಂಗ್ರೆಸ್ ಈ ಹಗಲು ದರೋಡೆ ಕಾರಣದಿಂದಲೇ ಕಾಂಗ್ರೆಸ್ ಮುಕ್ತ ಭಾರತ ಮಾಡುವ ಪರಿಸ್ಥಿತಿ ಬಂದೊಗಿದೆ. ಅದೇ ಆಗಿತ್ತಿದೆ ಎಂದು ಬಿಜೆಪಿ ಹೇಳಿದೆ.

ಕಾಂಗ್ರೆಸ್ ಪಕ್ಷ ದೇಶದಲ್ಲಿ ಹೊಡೆದ ಲೂಟಿಯ ಲೆಕ್ಕ ಕೊಟ್ಟ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಎಂದು ಶಿರ್ಷಿಕೆ ಮತ್ತು ರಮೇಶ್ ಕುಮಾರ್ ಫೋಟೊ ಸಹಿತಿ ಟ್ವಿಟ್ ಮಾಡಲಾಗಿದೆ.
ಹೌದು. @KRRameshKumar1 ಅವರು ನಿಜವನ್ನೇ ಹೇಳಿದ್ದಾರೆ. ದೇಶವನ್ನು ನೆಹರೂ ಕಾಲದಿಂದ ಸತತವಾಗಿ @INCKarnataka ಪಕ್ಷ ಹೇಗೆ ಕೊಳ್ಳೆ ಹೊಡೆದಿದೆ, ಜನರ ಸಂಪತ್ತನ್ನು ಹೇಗೆ ದೋಚಿದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಈ ಹಗಲು ದರೋಡೆಯ ಕಾರಣದಿಂದಲೇ ಇಂದು ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣವಾಗುವ ಪರಿಸ್ಥಿತಿ ಬಂದಿದೆ. pic.twitter.com/ltpkEQmmgR
— Shankar Patil Munenakoppa (@munenakoppa_mla) July 21, 2022
ನ್ಯಾಷನಲ್ ಹೆರಾಲ್ಡ್ ಹಗರಣ ಸಂಬಂಧಿಸಿದಂತೆ ಸೋನಿಯಾ ಗಾಂಧಿ ಇಡಿ ಅಧಿಕಾರಿಗಳ ವಿಚಾರಣೆ ಎದುರಿಸಿದ್ದರು. ಈ ವೇಳೆ ಸೋನಿಯಾ ಗಾಂಧಿ ಬೆಂಬಲಿಸಿ ಹಮ್ಮಿಕೊಂಡಿದ್ದ ಕೆಪಿಸಿಸಿ ನೇತೃತ್ವದ ಪ್ರತಿಭಟನೆಯಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಮಾತನಾಡುವ ಭರದಲ್ಲಿ ಯಡವಟ್ಟು ಹೇಳಿಕೆ ನೀಡಿದರು. ಕಾಂಗ್ರೆಸ್ ನಾಯಕರಾದ ನಾವು ಇಷ್ಟು ವರ್ಷ ಕಾಂಗ್ರೆಸ್ ಹೆಸರಿನಲ್ಲಿ ಸಾಕಷ್ಟು ಹಣ, ಆಸ್ತಿ ಮಾಡಿಕೊಂಡಿದ್ದೇವೆ. ಇದೀಗ ಗಾಂಧಿ ಕುಟುಂಬದ ಋಣ ತೀರಿಸುವ ಕಾಲ ಬಂದಿದೆ ಎಂದು ಹೇಳಿದ್ದರು. ಇದನ್ನು ಈಗ ಬಿಜೆಪಿಯವರು ಅಸ್ತ್ರವಾಗಿ ಬಳಸಿಕೊಂಡು ಕಾಂಗ್ರೆಸ್ ಕಾಲೆಳೆಯುತ್ತಿದ್ದಾರೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications