Breaking: ಕಾಂಗ್ರೆಸ್ನಿಂದ ದೇಶ ಲೂಟಿ: ರಮೇಶ್ ಕುಮಾರ್ ಹೇಳಿಕೆಯೇ ಸಾಕ್ಷಿ
ಬೆಂಗಳೂರು ಜುಲೈ 21: ಕಾಂಗ್ರೆಸ್ ಪಕ್ಷ ದೇಶವನ್ನು ಹೇಗೆ ಕೊಳ್ಳೆ ಹೊಡೆದಿದೆ ಎಂಬ ನಿಜವನ್ನು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರೇ ಹೇಳಿದ್ದಾರೆ ಎಂದು ರಾಜ್ಯ ಬಿಜೆಪಿ ಲೇವಡಿ ಮಾಡಿದೆ.
ಬೆಂಗಳೂರಿನಲ್ಲಿ ಗುರುವಾರ ಕೆಪಿಸಿಸಿ ವತಿಯಿಂದ ನಡೆದ ಪ್ರತಿಭಟನೆ ವೇಳೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಕಾಂಗ್ರೆಸ್ ನಿಂದ ಸಾಕಷ್ಟು ಮಾಡಿಕೊಂಡಿದ್ದೇವೆ ಎಂದು ಹೇಳಿದ್ದರು. ಆ ಕುರಿತು ವಿಡಿಯೋವನ್ನು ಜವಳಿ ಖಾತೆ ಸಚಿವ ಶಂಕರ್ ಪಾಟೀಲ್ ಮುನೇನ್ ಕೊಪ್ಪ ಅವರು ಮಾಡಿರುವ ಟ್ವಿಟ್ ಅನ್ನು ರಾಜ್ಯ ಬಿಜೆಪಿ ಮರ ಟ್ವಿಟ್ ಮಾಡಿ ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದೆ. ದೇಶದಲ್ಲಿ ಕಾಂಗ್ರೆಸ್ ಲೂಟಿ ಹೊಡಿದಿದ್ದಕ್ಕೆ ರಮೇಶ್ ಕುಮಾರ್ ಅವರ ಈ ಹೇಳಿಕೆಯೆ ಸಾಕ್ಷಿ ಎಂದು ಬಿಜೆಪಿ ತಿಳಿಸಿದೆ.
ಪ್ರಧಾನಿಯಾಗಿದ್ದ ಜವಾಹರ್ ಲಾಲ್ ನೆಹರು ಅವರ ಕಾಲದಿಂದಲೂ ಭಾರತೀಯ ಕಾಂಗ್ರೆಸ್ ಪಕ್ಷ (ಐಎನ್ಸಿ) ದೇಶವನ್ನು ಅಪಾರ ಪ್ರಮಾಣದಲ್ಲಿ ಕೊಳ್ಳೆ ಹೊಡೆದಿದೆ. ವರ್ಷಗಳಿಂದಲೂ ದೇಶದ ಜನರ ಸಂಪತ್ತನ್ನು ಹೇಗೆ ದೋಚಲಾಗಿದೆ ಎಂದು ರಮೇಶ್ ಕುಮಾರ್ ಅವರೇ ಸ್ಪಷ್ಟವಾಗಿ ಹೇಳಿದ್ದಾರೆ. ಕಾಂಗ್ರೆಸ್ ಈ ಹಗಲು ದರೋಡೆ ಕಾರಣದಿಂದಲೇ ಕಾಂಗ್ರೆಸ್ ಮುಕ್ತ ಭಾರತ ಮಾಡುವ ಪರಿಸ್ಥಿತಿ ಬಂದೊಗಿದೆ. ಅದೇ ಆಗಿತ್ತಿದೆ ಎಂದು ಬಿಜೆಪಿ ಹೇಳಿದೆ.

ಕಾಂಗ್ರೆಸ್ ಪಕ್ಷ ದೇಶದಲ್ಲಿ ಹೊಡೆದ ಲೂಟಿಯ ಲೆಕ್ಕ ಕೊಟ್ಟ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಎಂದು ಶಿರ್ಷಿಕೆ ಮತ್ತು ರಮೇಶ್ ಕುಮಾರ್ ಫೋಟೊ ಸಹಿತಿ ಟ್ವಿಟ್ ಮಾಡಲಾಗಿದೆ.
ಹೌದು. @KRRameshKumar1 ಅವರು ನಿಜವನ್ನೇ ಹೇಳಿದ್ದಾರೆ. ದೇಶವನ್ನು ನೆಹರೂ ಕಾಲದಿಂದ ಸತತವಾಗಿ @INCKarnataka ಪಕ್ಷ ಹೇಗೆ ಕೊಳ್ಳೆ ಹೊಡೆದಿದೆ, ಜನರ ಸಂಪತ್ತನ್ನು ಹೇಗೆ ದೋಚಿದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಈ ಹಗಲು ದರೋಡೆಯ ಕಾರಣದಿಂದಲೇ ಇಂದು ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣವಾಗುವ ಪರಿಸ್ಥಿತಿ ಬಂದಿದೆ. pic.twitter.com/ltpkEQmmgR
— Shankar Patil Munenakoppa (@munenakoppa_mla) July 21, 2022
ನ್ಯಾಷನಲ್ ಹೆರಾಲ್ಡ್ ಹಗರಣ ಸಂಬಂಧಿಸಿದಂತೆ ಸೋನಿಯಾ ಗಾಂಧಿ ಇಡಿ ಅಧಿಕಾರಿಗಳ ವಿಚಾರಣೆ ಎದುರಿಸಿದ್ದರು. ಈ ವೇಳೆ ಸೋನಿಯಾ ಗಾಂಧಿ ಬೆಂಬಲಿಸಿ ಹಮ್ಮಿಕೊಂಡಿದ್ದ ಕೆಪಿಸಿಸಿ ನೇತೃತ್ವದ ಪ್ರತಿಭಟನೆಯಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಮಾತನಾಡುವ ಭರದಲ್ಲಿ ಯಡವಟ್ಟು ಹೇಳಿಕೆ ನೀಡಿದರು. ಕಾಂಗ್ರೆಸ್ ನಾಯಕರಾದ ನಾವು ಇಷ್ಟು ವರ್ಷ ಕಾಂಗ್ರೆಸ್ ಹೆಸರಿನಲ್ಲಿ ಸಾಕಷ್ಟು ಹಣ, ಆಸ್ತಿ ಮಾಡಿಕೊಂಡಿದ್ದೇವೆ. ಇದೀಗ ಗಾಂಧಿ ಕುಟುಂಬದ ಋಣ ತೀರಿಸುವ ಕಾಲ ಬಂದಿದೆ ಎಂದು ಹೇಳಿದ್ದರು. ಇದನ್ನು ಈಗ ಬಿಜೆಪಿಯವರು ಅಸ್ತ್ರವಾಗಿ ಬಳಸಿಕೊಂಡು ಕಾಂಗ್ರೆಸ್ ಕಾಲೆಳೆಯುತ್ತಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications