ಜುಲೈ 20ರ ತನಕ ಸಿಬಿಐ ಕಸ್ಟಡಿಗೆ ಶಾಸಕ ಅನಿಲ್ ಲಾಡ್
ಬೆಂಗಳೂರು, ಜುಲೈ 16: ಅಕ್ರಮ ಗಣಿಗಾರಿಕೆ, ಅಕ್ರಮವಾಗಿ ಅದಿರು ರಫ್ತು ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಬಳ್ಳಾರಿ ನಗರ ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಗುರುವಾರ ಹಾಜರುಪಡಿಸಲಾಯಿತು. ಲಾಡ್ ಅವರನ್ನು ಜುಲೈ 20ರ ತನಕ ಸಿಬಿಐ ತಂಡದ ವಶಕ್ಕೆ ನೀಡಲಾಗಿದೆ.
ಅಕ್ರಮವಾಗಿ ಕಬ್ಬಿಣ ಅದಿರು ರಫ್ತು ಮಾಡಿದ ಆರೋಪದ ಮೇಲೆ ಅನಿಲ್ ಲಾಡ್ ಅವರನ್ನು ಬುಧವಾರ (ಜುಲೈ 15) ಸಂಜೆ ಸಿಬಿಐ ತಂಡ ಬಂಧಿಸಿತ್ತು. ಹೆಚ್ಚಿನ ವಿಚಾರಣೆ ಅಗತ್ಯವಿರುವುದರಿಂದ ಲಾಡ್ ಅವರನ್ನು ತಮ್ಮ ವಶಕ್ಕೆ ನೀಡಬೇಕು ಎಂದು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಸಿಬಿಐ ವಿಶೇಷ ನ್ಯಾಯಲಯದಲ್ಲಿ ಮನವಿ ಮಾಡಿಕೊಳ್ಳಲಾಯಿತು. [ಸಿಬಿಐನಿಂದ ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ಬಂಧನ]

ಸಿಬಿಐ ಮನವಿಗೆ ಪುರಸ್ಕರಿಸಿದ ನ್ಯಾ. ಎಚ್ ಕೆ ಮಲ್ಲಪ್ಪ ಅವರು ಶಾಸಕ ಅನಿಲ್ ಲಾಡ್ ಅವರನ್ನು ಜುಲೈ 20ರವರೆಗೆ ನೀಡಿ ಆದೇಶ ಹೊರಡಿಸಿದ್ದಾರೆ. ಈ ಪ್ರಕರಣದಲ್ಲಿ ಜಾಮೀನು ಕೋರಿ ಅನಿಲ್ ಲಾಡ್ ಸಲ್ಲಿಸಿರುವ ಅರ್ಜಿ ಕೂಡಾ ಜುಲೈ 20ರಂದೇ ವಿಚಾರಣೆಗೆ ಬರಲಿದೆ ಎಂದು ಲಾಡ್ ಅವರ ಪರ ವಕೀಲ ಸಿವಿ ನಾಗೇಶ್ ಹೇಳಿದ್ದಾರೆ.
ಸ್ಪೀಕರ್ ಕಾಗೋಡು ತಿಮ್ಮಪ್ಪ ಪ್ರತಿಕ್ರಿಯೆ: ವಿಧಾನಸೌಧದ ಆವರಣದಲ್ಲಿ ಶಾಸಕರನ್ನು ಬಂಧಿಸಲು ಸ್ಪೀಕರ್ ಪೂರ್ವಾನುಮತಿ ಕೋರಬೇಕಾಗುತ್ತದೆ. ಬೇರೆ ಕಡೆಗಳಲ್ಲಿ ಬಂಧಿಸಲು ಸಿಬಿಐ ಅಥವಾ ಪೊಲೀಸ್ ತಂಡಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಪ್ರತಿಕ್ರಿಯಿಸಿದ್ದಾರೆ. ವಿಧಾನಸಭೆ ಅಧಿವೇಶನ ಮುಕ್ತಾಯದ ನಂತರ ಶಾಸಕ ಅನಿಲ್ ಲಾಡ್ ಅವರ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ ಎಂಬ ಮಾಹಿತಿ ಸಿಬಿಐ ವಿಶೇಷ ನ್ಯಾಯಾಲಯದಿಂದ ವಿಧಾನಸಭಾಧ್ಯಕ್ಷರಿಗೆ ಸಿಕ್ಕಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications