ಬೇಲೇಕೇರಿ ಕೇಸ್: ವಿಶೇಷ ಕೋರ್ಟಿಗೆ ಹಾಜರಾದ ನಾಗೇಂದ್ರ, ಆನಂದ್ ಸಿಂಗ್
ಬೆಂಗಳೂರು, ಜನವರಿ 17: ಆಪರೇಷನ್ ಕಮಲ ಹೈಡ್ರಾಮಾದಲ್ಲಿ ಭಾಗಿಯಾಗಿದ್ದ ಬಳ್ಳಾರಿಯ ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಅವರು ಇಂದು ಬೆಂಗಳೂರಿನಲ್ಲಿ ಪ್ರತ್ಯಕ್ಷರಾಗಿದ್ದಾರೆ. ಶಾಸಕ ನಾಗೇಂದ್ರ ಹಾಗೂ ಆನಂದ್ ಸಿಂಗ್ ಅವರು ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದ ವಿಚಾರಣೆಗಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ.
ಈ ಪ್ರಕರಣದ ಪ್ರಮುಖ ಆರೋಪಿ ಗಾಲಿ ಜನಾರ್ದನ ರೆಡ್ಡಿ ಅವರು ಕೋರ್ಟಿಗೆ ಹಾಜರಾಗಿಲ್ಲ ಅವರ ಆಪ್ತ ಸಹಾಯಕ ಮೆಹಫೂಜ್ ಅಲಿಖಾನ್ವಿಚಾರಣೆಗೆ ಹಾಜರಾದರು. ಈ ಪ್ರಕರಣದ ವಿಚಾರಣೆ ಶುಕ್ರವಾರ ಕೂಡಾ ನಡೆಯಲಿದ್ದು, ಕೋರ್ಟಿಗೆ ಹಾಜರಾಗಬೇಕಿರುವ ಕಾರಣ, ಕಾಂಗ್ರೆಸ್ ಶಾಸಕಾಂಗ ಸಭೆಗೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ನಾಗೇಂದ್ರ ಸ್ಪಷ್ಪಪಡಿಸಿದ್ದಾರೆ.
ಭಿನ್ನಮತೀಯರಿಗೆ ಖಡಕ್ ಎಚ್ಚರಿಕೆ ನೀಡಿರುವ ಶಾಸಕಾಂಗ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ, ಶಾಸಕಾಂಗ ಸಭೆಗೆ ಗೈರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಪಕ್ಷದ ಪ್ರಾಥಮಿಕ ಸದಸ್ಯತ್ವ ರದ್ದುಗೊಳಿಸಲಾಗುವುದು ಎಂದಿದ್ದಾರೆ.

ಸತತವಾಗಿ ವಿಚಾರಣೆಗೆ ಗೈರು ಹಾಜರಾಗಿದ್ದ ಹಿನ್ನಲೆಯಲ್ಲಿ ನಾಗೇಂದ್ರ ಹಾಗೂ ಆನಂದ್ ಸಿಂಗ್ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ವಿ.ಪಾಟೀಲ್ ಅವರು ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಲಾಗಿತ್ತು.
ಈ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡುವಂತೆ ನಾಗೇಂದ್ರ ಅವರು ಕೋರಿದ್ದರು.ಆದರೆ, ಅರ್ಜಿ ತಿರಸ್ಕೃತಗೊಂಡಿದ್ದರಿಂದ ಗುರುವಾರ(ಜನವರಿ 17)ದಂದು ಕೋರ್ಟಿಗೆ ಹಾಜರಾಗಿದ್ದಾರೆ.
2009ರಲ್ಲಿ ಆನಂದ್ಸಿಂಗ್ ಒಡೆತನದ ವೈಷ್ಣವಿ ಮಿನರಲ್ಸ್ ಕಂಪನಿಯಿಂದ ಅದಿರನ್ನು ಸಿಂಗಪುರ ಮತ್ತು ಚೀನಾಕ್ಕೆ ಅಕ್ರಮವಾಗಿ ಸಾಗಿಸಿದ ಆರೋಪವಿದೆ. ಎಸ್ ಐಟಿ ತನಿಖೆ, ಸಿಬಿಐ ತನಿಖೆಯಲ್ಲೂ ಆರೋಪ ಸಾಬೀತಾಗಿದ್ದು, ಇಬ್ಬರ ವಿರುದ್ಧ ಚಾರ್ಜ್ ಶೀಟ್ ಹಾಕಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications