'ಕೈ' ಶಾಸಕ ನಾಗೇಂದ್ರ ಇಂದು ಕೂಡ ಸದನಕ್ಕೆ ಗೈರು ಸಾಧ್ಯತೆ
ಬೆಂಗಳೂರು, ಜುಲೈ 22: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಕಾಂಗ್ರೆಸ್ ಶಾಸಕರ ಬಿ. ನಾಗೇಂದ್ರ ಇಂದು ಕೂಡ ಸದನಕ್ಕೆ ಗೈರಾಗುವ ಸಾಧ್ಯತೆ ಇದೆ.
ಶಾಸಕ ವಿಶ್ವಾಸ ಮತದಿಂದ ತಪ್ಪಿಸಿಕೊಳ್ಳಲು ಸದನಕ್ಕೆ ಗೈರಾಗಿದ್ದಾರೆ, ಅವರು ಪರೋಕ್ಷವಾಗಿ ಬಿಜೆಪಿಗೆ ಬೆಂಬಲ ನೀಡುತ್ತಿದ್ದಾರೆ ಎನ್ನುವ ಮಾತುಗಳು ಕೂಡ ಕೇಳಿಬಂದಿದ್ದವು.
ಬಿ ನಾಗೇಂದ್ರ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಶಸ್ತ್ರ ಚಿಕಿತ್ಸೆ ನಡೆಯುವ ಸಾಧ್ಯತೆ ಇರುವ ಕಾರಣ ಇಂದೂ ಕೂಡ ಸದನಕ್ಕೆ ನಾಗೇಂದ್ರ ಅವರು ಬರುವುದು ಸಂದೇಹ ಎನ್ನಲಾಗಿದೆ.

ನಾಗೇಂದ್ರ ಇರುವ ವಾರ್ಡಿನಲ್ಲಿ ಪೊಲೀಸರು ಭದ್ರತೆ ಹೆಚ್ಚಿದ್ದು ಯಾರಿಗೂ ಅವರನ್ನು ನೋಡಲು ಅವಕಾಶ ಮಾಡಿಕೊಡುತ್ತಿಲ್ಲ. ಹೆಬ್ಬಾಳ ಬಳಿಯ ಆಸ್ಪರ್ ಆಸ್ಪತ್ರೆಯಲ್ಲಿ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ಎದೆ ನೋವಿನ ಕಾರಣ ಆಸ್ಪತ್ರೆಯಲ್ಲಿರುವ ಅವರು ಸೋಮವಾರದ ವಿಧಾನಸಭೆ ಕಲಾಪದಲ್ಲಿ ಪಾಲ್ಗೊಳ್ಳುತ್ತಿಲ್ಲ ಎನ್ನಲಾಗುತ್ತಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವ ಜಮಿರ್ ಅಹಮದ್ ಖಾನ್ ಕಳೆದ ಮಂಗಳವಾರ ಆಸ್ಪತ್ರೆಗೆ ಭೇಟಿ ನೀಡಿ ನಾಗೇಂದ್ರ ಆರೋಗ್ಯ ವಿಚಾರಿಸಿದ್ದರು. ವಿಶ್ವಾಸಮತಯಾಚನೆ ಕುರಿತು ಮಾಹಿತಿ ನೀಡಿ ಗುರುವಾರ ಸದನಕ್ಕೆ ಆಗಮಿಸುವಂತೆ ಕೋರಿದ್ದರು.
5 ಅತೃಪ್ತ ಶಾಸಕರು ಈಗಾಗಲೇ ವಿಶ್ವಾಸಮತಯಾಚನೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸರ್ಕಾರ ಉಳಿಸಿಕೊಳ್ಳಲು ಯಾವ ತಂತ್ರ ಅನುಸರಿಸಲಿದ್ದಾರೆ? ಎಂದು ಕಾದು ನೋಡಬೇಕಿದೆ.
ಶುಕ್ರವಾರ ಆಪರೇಷನ್ ಮಾಡಲಾಗುತ್ತದೆ ಎನ್ನಲಾಗಿತ್ತು. ಹಿನ್ನಲೆಯಲ್ಲಿ ಗುರುವಾರ ಸದನಕ್ಕೆ ಹಾಜರಾಗಲು ಸಾಧ್ಯವಿಲ್ಲ ಎಂದು ನಾಗೇಂದ್ರ ಅವರು ಸ್ಪಷ್ಟಪಡಿಸಿದ್ದರು. ಇದರಿಂದಾಗಿ ಕಾಂಗ್ರೆಸ್ ಪಾಲಿನ ಮತ್ತೊಂದು ಮತ ಕಡಿಮೆಯಾಗಲಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications