ಕಾಂಗ್ರೆಸ್ ಪಕ್ಷ ನಾಶವಾಗುತ್ತದೆ ಎಂದ ಕಾಂಗ್ರೆಸ್ ಶಾಸಕ ಸುಧಾಕರ್
ಬೆಂಗಳೂರು, ಜೂನ್ 07: ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಪಕ್ಷ ನಾಶವಾಗಿ ಹೋಗುತ್ತದೆ ಎಂದು ಚಿಕ್ಕಬಳ್ಳಾಪುರ ಕ್ಷೇತ್ರ ಕಾಂಗ್ರೆಸ್ ಶಾಸಕ ಡಾ.ಕೆ.ಸುಧಾಕರ್ ಗುಟುರು ಹಾಕಿದ್ದಾರೆ.
ಎಂಬಿ ಪಾಟೀಲ್ ಅವರ ನಿವಾಸದಲ್ಲಿ ಅತೃಪ್ತ ಶಾಸಕರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಒಕ್ಕಲಿಗರನ್ನು ಜೆಡಿಎಸ್ ಪಕ್ಷ ಗುತ್ತಿಗೆ ಏನಾದರೂ ಪಡೆದುಕೊಂಡಿದೆಯಾ? ಎಂದು ಖಾರವಾಗಿ ಪ್ರಶ್ನಿಸಿದರು.
ಒಕ್ಕಲಿಗರಾಗಿರುವ ಸುಧಾಕರ್ ಅವರು ಕಳೆದ ಬಾರಿಯ ಸರ್ಕಾರದಲ್ಲಿ ಸಂಪುಟ ಪುನರ್ರಚನೆ ಆದಾಗಲೇ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು ಆದರೆ ಆಗ ಸಚಿವ ಸ್ಥಾನ ಸಿಕ್ಕಿರಲಿಲ್ಲ ಹಾಗಾಗಿ ಈ ಬಾರಿ ಸಚಿವ ಸ್ಥಾನ ಪಕ್ಕಾ ಎಂದೇ ಎಣಿಸಲಾಗಿತ್ತು ಆದರೆ ಈ ಬಾರಿಯೂ ಸ್ಥಾನ ಕೈತಪ್ಪಿದೆ.

ಸಚಿವ ಸ್ಥಾನ ಕೈತಪ್ಪಿರುವುದಕ್ಕೆ ತೀವ್ರ ಅಸಮಾಧಾನಗೊಂಡಿರುವ ಸುಧಾಕರ್ ಅವರು, 'ರಾಹುಲ್ ಗಾಂಧಿ ಅವರನ್ನು ನೋಡಿ ರಾಜಕೀಯಕ್ಕೆ ಬಂದೆ, ಸಿದ್ದರಾಮಯ್ಯ ಅವರೂ ಕೂಡ ಉತ್ತಮ ಆಡಳಿತ ಕೊಟ್ಟಿದ್ದರು ಆದರೆ ಇಂದು ಅವರನ್ನು ಹೈಕಮಾಂಡ್ ನಡೆಸಿಕೊಳ್ಳುತ್ತಿರುವ ರೀತಿ ಸರಿಯಿಲ್ಲ' ಎಂದು ಅಸಮಾಧಾನ ಹೊರಹಾಕಿದರು.
ಪಕ್ಷ ಬಿಡುವ ಸೂಚನೆಯನ್ನೂ ನೀಡಿದ ಸುಧಾಕರ್ ಅವರು, 'ಕ್ಷೇತ್ರದ ಜನರ ಜೊತೆ ಚರ್ಚೆ ಮಾಡಿ ನನ್ನ ಮುಂದಿನ ನಿರ್ಧಾರ ತಿಳಿಸುತ್ತೇನೆ' ಎಂದರು. ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸುಧಾಕರ್ ಅವರು ಎರಡು ಬಾರಿ ಗೆದ್ದಿದ್ದಾರೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications