ಮುಂಬೈನಿಂದ ಬೆಂಗಳೂರಿಗೆ ಬಂದ ಕಾಂಗ್ರೆಸ್ನ ನಾಲ್ವರು ಅತೃಪ್ತ ಶಾಸಕರು
ಬೆಂಗಳೂರು, ಫೆಬ್ರವರಿ 13: ಮುಂಬೈನಲ್ಲಿದ್ದ ಕಾಂಗ್ರೆಸ್ನ ನಾಲ್ವರು ಶಾಸಕರು ಮಂಗಳವಾರ ಮಧ್ಯರಾತ್ರಿ ಬೆಂಗಳೂರಿಗೆ ಬಂದಿಳಿದಿದ್ದಾರೆ.
ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವ ತರಾತುರಿಯಲ್ಲಿದ್ದ ಶಾಸಕರು ಬಿಜೆಪಿಯಿಂದ ಬಂಧಿಯಾಗಿದ್ದರು ಎನ್ನುವ ಮಾತುಗಳು ಕೇಳಿಬಂದಿತ್ತು, ಇದೀಗ ರಮೇಶ್ ಜಾರಕಿಹೊಳಿ, ಕೆಆರ್ ಪೇಟೆ ಶಾಸಕ ನಾರಾಯಣಗೌಡ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ನಾನು ಆಪರೇಷನ್ ಕಮಲಕ್ಕೆ ಒಳಗಾಗಿದ್ದೇನೆ ಎನ್ನುವುದೆಲ್ಲಾ ಸುಳ್ಳು, ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗುವುದಿಲ್ಲ ನಾನು ಸಿಎಂ ಹಾಗೂ ಸಚಿವ ಸಾರಾ ಮಹೇಶ್ ಸಂಪರ್ಕದಲ್ಲಿದ್ದೇನೆ. ನಾನು ಮುಂಬೈ ಆಸ್ಪತ್ರೆಗೆ ಹೋಗಿದ್ದೆ ಎಂದು ನಾರಾಯಣಗೌಡ ತಿಳಿಸಿದ್ದಾರೆ.

ನಂತರ ಕಾಂಗ್ರೆಸ್ನ ಬಂಡಾಯಗಾರ ಶಾಸಕರ ನಾಯಕ ರಮೇಶ್ ಜಾರಕಿಹೊಳಿ ಅವರೂ ಬಂದಿಳಿದರು. ಆದರೆ, ಅವರು ಮಾಧ್ಯಮಗಳೊಂದಿಗೆ ಮಾತನಾಡಲು ನಿರಾಕರಿಸಿದರು.

ಈ ವೇಳೆ ಮಾತನಾಡಿದ ಸಚಿವ ಸಾ.ರಾ. ಮಹೇಶ್, ಮುಂಬೈನಲ್ಲಿದ್ದ ಎಲ್ಲ ಶಾಸಕರು ಬೆಂಗಳೂರಿಗೆ ಬಂದಿದ್ದಾರೆ. ಆದರೆ ಅವರನ್ನು ಸಂಪರ್ಕಿಸಲು ಇನ್ನೂ ಆಗಿಲ್ಲ. ಶಾಸಕ ನಾರಾಯಣಗೌಡರನ್ನು ಕರೆತಂದಿದ್ದೇವೆ ಎಂದು ಹೇಳಿದ್ದಾರೆ.












Click it and Unblock the Notifications