ಐಎಂಎ ಪ್ರಕರಣ: ಎಸ್ಐಟಿಯಿಂದ 3 ಗಂಟೆ ಜಮೀರ್ ವಿಚಾರಣೆ
ಬೆಂಗಳೂರು, ಜುಲೈ 31: ಐಎಂಎ ಹಗರಣ ತನಿಕೆ ನಡೆಸುತ್ತಿರುವ ಎಸ್ಐಟಿ ತಂಡವು ಇಂದು ಶಾಸಕ ಜಮೀರ್ ಅಹ್ಮದ್ ಅವರನ್ನು ವಿಚಾರಣೆಗೆ ಒಳಪಡಿಸಿತು.
ಈ ಹಿಂದೆಯೇ ಜಮೀರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ಎಸ್ಐಟಿ ನೊಟೀಸ್ ನೀಡಿತ್ತು. ಆದರೆ ವಿಧಾನಸಭೆ ಕಲಾಪ ಇದ್ದ ಕಾರಣ ಗಡುವು ನೀಡುವಂತೆ ಜಮೀರ್ ಅವರು ಮನವಿ ಮಾಡಿದ್ದರು, ಅಂತೆಯೇ ಗಡುವು ಮುಗಿದ ನಂತರ ಈಗ ಜಮೀರ್ ಅವರು ಎಸ್ಐಟಿ ಮುಂದೆ ಹಾಜರಾದರು.
ಎಸ್ಐಟಿ ತಂಡದ ನೇತೃತ್ವ ವಹಿಸಿರುವ ರವಿಕಾಂತೇಗೌಡ ಅವರು, ಸತತ ಮೂರು ಗಂಟೆ ಕಾಲ ಜಮೀರ್ ಅಹ್ಮದ್ ಅವರನ್ನು ವಿಚಾರಣೆ ನಡೆಸಿದ್ದಾರೆ.

ಈ ಹಿಂದೆ ಸಹ ಐಎಂಎ ಹಗರಣ ಆರೋಪಿ ಮನ್ಸೂರ್ ಖಾನ್ ಅವರೊಂದಿಗೆ ಹಣಕಾಸಿನ ಸಂಬಂಧ ಇಟ್ಟುಕೊಂಡಿದ್ದಾರೆಂಬ ಆರೋಪ ಜಮೀರ್ ಅಹ್ಮದ್ ವಿರುದ್ಧ ಎದ್ದಿತ್ತು.
ಆಗ ಇದರ ಬಗ್ಗೆ ಸ್ಪಷ್ಟನೆ ನೀಡಿದ್ದ ಜಮೀರ್ ಅಹ್ಮದ್, ತಾವು ಸೈಟೊಂದನ್ನು ಮನ್ಸೂರ್ ಖಾನ್ ಅವರಿಗೆ ಮಾರಾಟ ಮಾಡಿ ಹಣ ಪಡೆದಿದ್ದಾಗಿ ಹೇಳಿದ್ದರು. ಆ ನಂತರ ತಮಗೂ ಅವರಿಗೂ ಇನ್ನಾವುದೇ ಸಂಬಂಧ ಇಲ್ಲವೆಂದು ಜಮೀರ್ ಅವರು ಹೇಳಿದ್ದರು.
ಐಎಂಎ ಹಗರಣದಲ್ಲಿ ಈಗಾಗಲೇ ರೋಷನ್ ಬೇಗ್ ಅವರನ್ನು ಎಸ್ಐಟಿಯು ವಿಚಾರಣೆ ನಡೆಸಿದೆ. ಐಎಎಸ್ ಅಧಿಕಾರಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಇಡಿ ವಶದಲ್ಲಿರುವ ಆರೋಪಿ ಮನ್ಸೂರ್ ಖಾನ್, ಈಗಾಗಲೇ ಕೆಲವು ರಾಜಕಾರಣಿಗಳು, ಐಪಿಎಸ್ ಅಧಿಕಾರಿಗಳು, ಐಎಎಸ್ ಅಧಿಕಾರಿಗಳ ಹೆಸರನ್ನು ಬಾಯಿ ಬಿಟ್ಟಿದ್ದಾಣೆ ಎನ್ನಲಾಗುತ್ತಿದ್ದು, ಮಾಹಿತಿ ಇನ್ನಷ್ಟೆ ಹೊರಬೀಳಬೇಕಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications