ಐವನ್ ಡಿಸೋಜಾಗೆ ಕೊರೊನಾ, ಡಿಕೆ ಶಿವಕುಮಾರ್ಗೆ ಫುಲ್ ಟೆನ್ಷನ್!
ಬೆಂಗಳೂರು, ಆಗಸ್ಟ್ 01: ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಮತ್ತು ಅವರ ಪತ್ನಿಗೆ ಕೊರೊನಾ ವೈರಸ್ ತಗುಲಿದೆ.
Recommended Video
ಈ ಕುರಿತು ಸ್ವತಃ ಐವನ್ ಡಿಸೋಜಾ ಅವರೇ ಫೇಸ್ಬುಕ್ನಲ್ಲಿ ಮಾಹಿತಿ ನೀಡಿದ್ದಾರೆ. 'ನನಗೆ ಮತ್ತು ನನ್ನ ಪತ್ನಿ ಡಾ.ಕವಿತಾಗೆ ಕೊರಾನಾ ಪಾಸಿಟಿವ್ ಬಂದಿದೆ. ಯಾವುದೇ ಲಕ್ಷಣಗಳಿಲ್ಲವಾದರೂ ಸ್ವಯಂಪ್ರೇರಣೆಯಿಂದ ಕೊರೊನಾಅ ಪರೀಕ್ಷೆಗೆ ಒಳಗಾಗಿದ್ದೆವು. ಆದರೆ, ಪಾಸಿಟಿವ್ ಬಂದಿದೆ' ಎಂದು ತಿಳಿಸಿದ್ದಾರೆ.
'ಆತಂಕ ಪಡುವ ಅಗತ್ಯವಿಲ್ಲ. ನನ್ನ ಎಲ್ಲ ಸ್ನೇಹಿತರು ಮತ್ತು ಹಿತೈಷಿಗಳು ನಮ್ಮನ್ನು ಭೇಟಿ ಮಾಡಬೇಡಿ ಎಂದು ವಿನಂತಿಸುತ್ತೇವೆ. ನಿಮ್ಮ ಪ್ರಾರ್ಥನೆಗಳು, ಆಶೀರ್ವಾದಗಳು ಮತ್ತು ಶುಭಾಶಯಗಳು ನಮ್ಮ ಶಕ್ತಿ'' ಎಂದು ಐವನ್ ಡಿಸೋಜಾ ಬರೆದುಕೊಂಡಿದ್ದಾರೆ.

ಆ ಕಡೆ ಐವನ್ ಡಿಸೋಜಾಗೆ ಕೊವಿಡ್ ಸೋಂಕು ದೃಢವಾಗಿರುವ ಹಿನ್ನೆಲೆ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಆತಂಕ ಹೆಚ್ಚಾಗಿದೆ. ನಿನ್ನೆ ಡಿಕೆ ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದರು. ಈ ವೇಳೆ ಐವನ್ ಡಿಸೋಜಾ ಸಂಪರ್ಕಕ್ಕೆ ಬಂದಿದ್ದರು. ಭೇಟಿಯಾಗಿ ಡಿಕೆಶಿ ಜೊತೆ ಮಾತನಾಡಿದ್ದರು.
ಶುಕ್ರವಾರ ಮಂಗಳೂರಿಗೆ ಭೇಟಿ ನೀಡಿದ್ದ ಡಿಕೆ ಶಿವಕುಮಾರ್ಗೆ ಶಾಸಕ ಯುಟಿ ಖಾದರ್, ಡಿಕೆಶಿ ಆಪ್ತ ಮಿಥುನ್ ರೈ ಹಾಗೂ ಸ್ಥಳಿಯ ಮುಖಂಡರು ಸಾಥ್ ನೀಡಿದ್ದರು. ಜುಲೈ 17ನೇ ತಾರೀಕು ಮಿಥುನ್ ರೈ ಸಹ ಕ್ವಾರಂಟೈನ್ನಲ್ಲಿದ್ದರು. ಡಿಕೆಶಿ ಆಗಮನದ ಹಿನ್ನೆಲೆ ಕ್ವಾರಂಟೈನ್ ಅವಧಿ ಮುಗಿಯುವುದಕ್ಕೂ ಮುಂಚೆಯೇ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ ಎಂಬ ಟೀಕೆ ವ್ಯಕ್ತವಾಗಿತ್ತು.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications