ಲೋಕಸಭೆ ಚುನಾವಣೆ: ಕಾಂಗ್ರೆಸ್ ಸಂಸದರ ಗುಪ್ತ ಸಭೆ
ಬೆಂಗಳೂರು, ಜೂನ್ 22: ಲೋಕಸಭೆ ಚುನಾವಣೆಗೆ ಜೆಡಿಎಸ್-ಕಾಂಗ್ರೆಸ್ ಪಕ್ಷಗಳು ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದು, ತಮ್ಮ ಟಿಕೆಟ್ಗೆ ಕುತ್ತು ಬರುತ್ತದೆ ಎಂದು ಹೆದರಿರುವ ಕಾಂಗ್ರೆಸ್ ಸಂಸದರು ಸಭೆ ನಡೆಸಿ ಮಾತುಕತೆಯಾಡಿದ್ದಾರೆ.
ಒಟ್ಟಿಗೆ ಚುನಾವಣೆ ಎದುರಿಸುವಂತಾದರೆ ಸೀಟುಗಳ ಹಂಚಿಕೆ ಸಮಸ್ಯೆ ಉಲ್ಬಣಿಸುವುದು ಖಾಯಂ. ಹಾಗಾಗಿ ಈಗಲೇ ಹೈಕಮಾಂಡ್ ಹಾಗೂ ಕೆಪಿಸಿಸಿ ಮೇಲೆ ಒತ್ತಡ ಹೇರುವ ತಂತ್ರವಾಗಿ ಈ ಸಭೆ ಸೇರಲಾಗಿದೆ.
ಕಾಂಗ್ರೆಸ್ ಹಿರಿಯ ಸಂಸದ ಕೆ.ಎಚ್.ಮುನಿಯಪ್ಪ ಅವರ ನೇತೃತ್ವದಲ್ಲಿ ಈ ಸಭೆ ನಡೆದಿದೆ ಎನ್ನಲಾಗಿದ್ದು, ಪ್ರಕಾಶ್ ಹುಕ್ಕೇರಿ, ಚಂದ್ರಪ್ಪ ಸೇರಿ ಹಲವು ಪ್ರಮುಖ ಸಂಸದರು ಸಭೆಯಲ್ಲಿ ಭಾಗವಹಿಸಿದ್ದಾರೆಂದು ಸುದ್ದಿ ಮೂಲಗಳು ತಿಳಿಸಿವೆ.

ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಪಕ್ಷ ಗಟ್ಟಿಯಾಗಿರುವ ಕಾರಣ ಇಲ್ಲಿನ ಬಹುತೇಕ ಲೋಕಸಭೆ ಸೀಟುಗಳು ಜೆಡಿಎಸ್ ಪಾಲಾಗುವ ಸಾಧ್ಯತೆ ಇದೆ. ಹಾಗಾಗಿ ಈ ಭಾಗದ ಕಾಂಗ್ರೆಸ್ ಸಂಸದರು ಮತ್ತು ಆಕಾಂಕ್ಷಿಗಳು ಆತಂಕಕ್ಕೆ ಒಳಗಾಗಿದ್ದಾರೆ.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಕೆ.ಎಚ್.ಮುನಿಯಪ್ಪ ಅವರ ಪ್ರಭಾವ ಇದ್ದು, ಇಲ್ಲಿ ಜೆಡಿಎಸ್ ಸೀಟು ಹೆಚ್ಚಿಗೆ ಹಂಚಿಕೆಯಾದಲ್ಲಿ ಕೆ.ಎಚ್.ಮುನಿಯಪ್ಪ ಅವರ ಪ್ರಭಾವವೂ ತಗ್ಗುವ ಸಾಧ್ಯತೆ ಇದೆ. ಇದು ಮುನಿಯಪ್ಪ ಅವರನ್ನು ಆತಂಕಕ್ಕೆ ತಳ್ಳಿದೆ.
ಅಲ್ಲದೆ ಮಂಡ್ಯ, ಹಾಸನ ಭಾಗದ ಕ್ಷೇತ್ರಗಳೂ ಸಹ ಜೆಡಿಎಸ್ ಪಾಲಾಗುವ ಸಾಧ್ಯತೆ ಇದೆ ಹಾಗಾಗಿಯೇ ಕಾಂಗ್ರೆಸ್ ಸಂಸದರು ಸಭೆ ಸೇರಿದ್ದು ಹೈಕಮಾಂಡ್ ಮೇಲೆ ಒತ್ತಡ ಹೇರುವ ನಿರ್ಣಯ ಕೈಗೊಂಡಿದ್ದಾರೆ ಎನ್ನಲಾಗಿದೆ.
ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದ್ದು ಲೋಕಸಭೆ ಚುನಾವಣೆ ಹತ್ತಿರವಿರುವ ಕಾರಣ ಸಂಸದರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕೆಂದು ಸಭೆಯಲ್ಲಿ ತೀರ್ಮಾನ ಪಡೆದುಕೊಳ್ಳಲಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications