ಹ್ಯಾಕಥಾನ್ ಆಯೋಜಿಸಲು 250 ಇವಿಎಂ ಕೇಳಿದ ರಾಜ್ಯ ಸರ್ಕಾರ
ಬೆಂಗಳೂರು, ಜನವರಿ 03: ವಿದ್ಯುನ್ಮಾನ ಮತಯಂತ್ರದ ಬಗ್ಗೆ ಅನುಮಾನ ಹೊಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಇವಿಎಂ ಹ್ಯಾಕಥಾನ್ ಆಯೋಜಿಸಲು ಯೋಜಿಸಿದ್ದು, ಈ ಸಂಬಂಧ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.
ರಾಜ್ಯದಲ್ಲಿ ಹ್ಯಾಕಥಾನ್ ನಡೆಸಲು ಅನುಮತಿ ಕೋರಿ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು ಹ್ಯಾಕತಾನ್ ಆಯೋಜಿಸಲು 250 ವಿದ್ಯುನ್ಮಾನ ಮತಯಂತ್ರವನ್ನು ನೀಡಲು ಕೋರಿದ್ದಾರೆ. ಜೊತೆಗೆ ಇವಿಎಂಗಳನ್ನು ಪರಿಶೀಸಲಿಸುವುದಕ್ಕಾಗಿ ಇರುವ ದಾಖಲೆ ಪತ್ರಗಳು, ಪರೀಕ್ಷೆಯ ವಿಧಾನ ಮತ್ತು ಫಲಿತಾಂಶ, ಸುರಕ್ಷಾ ವಿಧಾನಗಳ ಬಗ್ಗೆ ಮಾಹಿತಿ ನೀಡುವಂತೆಯೂ ಖರ್ಗೆ ಅವರು ಮನವಿ ಮಾಡಿದ್ದಾರೆ.
ಹ್ಯಾಕಥಾನ್ ಆಯೋಜಿಸಲು ತಂತ್ರಪ್ರವೀಣರನ್ನು, ವಿಜ್ಞಾನಿಗಳು, ಕಾರ್ಪೊರೇಟ್, ಆರ್ ಆಂಡ್ ಡಿ ಇನ್ಸಿಟ್ಯೂಟ್, ಸ್ಟಾರ್ಟ್ ಅಪ್ ಮತ್ತು ಪರಿಣಿತರು ಸೇರಿದಂತೆ ರಾಜಕಾರಣಿಗಳು ಈ ಹ್ಯಾಕಥಾನ್ನಲ್ಲಿ ಭಾಗವಹಿಸಬೇಕೆಂದು ಆಹ್ವಾನಿಸುತ್ತೇವೆ ಎಂದು ಖರ್ಗೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಚುನಾವಣಾ ಆಯೋಗ ನಡೆಸುವ ಹ್ಯಾಕಥಾನ್ ನಲ್ಲಿ ರಾಜಕೀಯ ಪಕ್ಷಗಳು ಮಾತ್ರ ಭಾಗವಹಿಸಬಹುದು ಆದರೆ ಕರ್ನಾಟಕದಲ್ಲಿ ನಡೆಯಲಿರುವ ಹ್ಯಾಕಥಾನ್ನಲ್ಲಿ ಸಾರ್ವಜನಿಕರು ಭಾಗವಹಿಸಬಹುದಾಗಿದೆ.
ರಾಜಕೀಯ ಪಕ್ಷಗಳ ಜತೆಗೆ ಇಲ್ಲಿನ ಯುವ ಪ್ರತಿಭೆಗಳಿಗೂ ಅವಕಾಶ ನೀಡಬೇಕು. ಕೇವಲ ರಾಜಕೀಯ ಉದ್ದೇಶದಿಂದ ಕೂಡಿದ ಹ್ಯಾಕಥಾನ್ ಅಲ್ಲ ಹಾಗಾಗಿ ಈ ಹ್ಯಾಕಥಾನ್ನಲ್ಲಿ ಸಾರ್ವಜನಿಕರಿಗೂ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications