ಮೊಟ್ಟೆ ಎಸೆತ ಪ್ರಕರಣಕ್ಕೆ ತೆರೆ ಎಳೆಯದಿದ್ದರೆ ಜನರೇ ತಿರುಗೇಟು ನೀಡಲಿದ್ದಾರೆ: ಸುಧಾಕರ್

ಬೆಂಗಳೂರು, ಆಗಸ್ಟ್‌ 20: ಮಡಿಕೇರಿಯಲ್ಲಿ ವಿರೋಧಪಕ್ಷದ ನಾಯಕರ ಕಾರಿನ ಮೇಲೆ ನಡೆದ ಮೊಟ್ಟೆ ದಾಳಿಗೆ ಸಂಬಂಧಿಸಿ ಡಿ.ಕೆ. ಶಿವಕುಮಾರ್ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಈ ಘಟನೆಯನ್ನು ಖಂಡಿಸಿದ್ದೇವೆ. ಇದಕ್ಕೆ ಸಂಬಂಧಿಸಿ ಕ್ರಮವನ್ನು ಕೈಗೊಳ್ಳಲಾಗಿದೆ, ಹೀಗಿರುವಾಗ ಇನ್ನೇನು ಮಾಡಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಮಣ್ಣೆ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ "ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ" ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಕರಣವನ್ನು ಇಲ್ಲಿಗೆ ಬಿಟ್ಟರೆ ಅವರಿಗೆ ಒಳ್ಳೆಯದು. ಅದು ಬಿಟ್ಟು ಇದನ್ನು ರಾಜಕೀಯವಾಗಿ ಬಳಸಿಕೊಳ್ಳುವ ಹುನ್ನಾರ ಮಾಡಿದರೆ ಮುಂದುವರಿಯಲಿ. ರಾಜ್ಯದಲ್ಲಿ ಅಶಾಂತಿ ಉಂಟು ಮಾಡುವ ದುರುದ್ಧೇಶ ಇದ್ದರೆ ನಾವೇನು ಮಾಡಲಾಗುತ್ತೆ ಎಂದು ಸುಧಾಕರ್‌ ತಿರುಗೇಟು ನೀಡಿದರು.

ಕಾಂಗ್ರೆಸ್‌ ಅವರ ಮುಂಚೂಣಿ ಘಟಕದ ಯುವ ಮುಖಂಡರು ಏನು ಮಾಡುತ್ತಿದ್ದಾರೆ ಎಂಬುದನ್ನು ನೋಡಲಿ. ಅವರನ್ನು ನಿಯಂತ್ರಣದಲ್ಲಿ ಇರಿಸಲು ಸಾಧ್ಯವಾಗಿದೆಯೇ ಎಂಬುದನ್ನು ಅವರನ್ನು ಕೇಳಿರಿ. ಮಡಿಕೇರಿ ಘಟನೆಗೆ ಕಾರಣರಾದ ಕಾರ್ಯಕರ್ತ ಯಾರು ಎಂಬುದು ಸರಿಯಾಗಿ ಇನ್ನೂ ಗೊತ್ತಾಗಿಲ್ಲ. ಈ ಘಟನೆಯಲ್ಲಿ ಭಾಗಿಯಾದವರನ್ನು ಬಂಧಿಸಲಾಗಿದೆ. ಮುಖ್ಯಮಂತ್ರಿ ಆದಿಯಾಗಿ ಎಲ್ಲರೂ ಘಟನೆಯನ್ನು ಖಂಡಿಸಿದ್ದೇವೆ. ಇದರ ಜೊತೆಗೆ ಹೆಚ್ಚಿನ ಭದ್ರತೆ ನೀಡುವುದಾಗಿ ಹೇಳಿದ್ದೇವೆ. ಇಷ್ಟಾದರೂ ಮುಂದುವರಿಸುವುದಾದರೆ ಜನರಿಗೆ ಇವರ ನಿಜಬಣ್ಣ ಅರ್ಥವಾಗಲಿದೆ. ಜನರೇ ಇವರಿಗೆ ಉತ್ತರಿಸುತ್ತಾರೆ ಎಂದು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ರಾಜ್ಯದ 9 ಸಾವಿರ ಸರ್ಕಾರಿ ಶಾಲೆಗಳಲ್ಲಿ ಕೊಠಡಿ ನಿರ್ಮಾಣಕ್ಕೆ 500 ಕೋಟಿ ಅನುದಾನ ಮೀಸಲಿರಿಸಲಾಗಿದೆ. ಶಿಕ್ಷಣದಿಂದ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಶಿಕ್ಷಣದ ಅಬಿವೃದ್ಧಿಗಾಗಿ ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಸಚಿವರು ಹೇಳಿದರು.

 ಕೇಂದ್ರ ಸರ್ಕಾರ 6 ಸಾವಿರ ನೀಡುತ್ತದೆ

ಕೇಂದ್ರ ಸರ್ಕಾರ 6 ಸಾವಿರ ನೀಡುತ್ತದೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಡವರಿಗೆ 75 ಯೂನಿಟ್ ವಿದ್ಯುತ್ ಉಚಿತವಾಗಿ ಸರ್ಕಾರ ನೀಡುತ್ತಿದೆ. ಭೂಮಿ ಹೊಂದಿರುವ ಪ್ರತಿ ರೈತನಿಗೆ ವಾರ್ಷಿಕವಾಗಿ ಕೇಂದ್ರ ಸರ್ಕಾರ 6 ಸಾವಿರ ಮತ್ತು ರಾಜ್ಯ ಸರ್ಕಾರ 4 ಸಾವಿರ ಸೇರಿ ಒಟ್ಟು 10 ಸಾವಿರ ರೂಪಾಯಿಗಳನ್ನು ರೈತರ ಖಾತೆಗೆ ನೇರವಾಗಿ ಹಾಕುತ್ತಿದೆ ಎಂದರು.

 10 ಲಕ್ಷ ಮಂದಿ ರೈತರ ಮಕ್ಕಳು ಫಲಾನುಭವಿಗಳು

10 ಲಕ್ಷ ಮಂದಿ ರೈತರ ಮಕ್ಕಳು ಫಲಾನುಭವಿಗಳು

ರೈತರ ಮಕ್ಕಳು ಉನ್ನತ ವಿದ್ಯಾಬ್ಯಾಸ ಮಾಡುವ ಉದ್ದೇಶದಿಂದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಮೊದಲು ಪ್ರಕಟಿಸಿದ ಯೋಜನೆ ವಿದ್ಯಾನಿಧಿ. ರಾಜ್ಯದ 10 ಲಕ್ಷ ಮಂದಿ ರೈತರ ಮಕ್ಕಳು ಈ ಯೋಜನೆ ಫಲಾನುಭವಿಗಳಾಗಿದ್ದಾರೆ. ಶಿಕ್ಷಣ ಪ್ರೋತ್ಸಾಹದಿಂದ ಯುವಪೀಳಿಗೆ ಸ್ವಾವಲಂಬಿಯಾಗಲಿದೆ. ಹಾಗಾಗಿ ರಾಜ್ಯ ಸರ್ಕಾರ ಶಿಕ್ಷಣಕ್ಕೆ ವಿಶೇಷ ಒತ್ತು ನೀಡುತ್ತಿದೆ ಎಂದರು.

 ರೈತರ ಸ್ವಾಭಿಮಾನ ಹೆಚ್ಚಾಗಬೇಕು

ರೈತರ ಸ್ವಾಭಿಮಾನ ಹೆಚ್ಚಾಗಬೇಕು

ನೆಲಮಂಗಲ ಬೆಂಗಳೂರಿಗೆ ಹೊಂದಿಕೊಂಡಿದೆ. ಈ ಭಾಗದ ರೈತರ ಸ್ವಾಭಿಮಾನ ಹೆಚ್ಚಾಗಬೇಕು. ರೈತರ ಜಮೀನುಗಳಿಗೆ ಬೆಲೆ ಬಂದ ರೀತಿಯಲ್ಲಿ ರೈತರ ಮಕ್ಕಳಿಗೆ ಉದ್ಯೋಗ ಸಿಗುವಂತಾಗಬೇಕು. ಸ್ಯಾಟಿಲೈಟ್ ನಗರವಾಗಿ ನೆಲಮಂಗಲ ಅಭಿವೃದ್ಧಿಯಾಗಬೇಕು ಎಂಬ ಕನಸು ರಾಜ್ಯ ಸರ್ಕಾರಕ್ಕಿದ್ದು, ಇದಕ್ಕಾಗಿ ಪ್ರಾಮಾಣಿಕ ಸಹಕಾರ ನೀಡುವ ಮೂಲಕ ನೆಲಮಂಗಲವನ್ನು ಮಾದರಿ ಕ್ಷೇತ್ರವಾಗಿ ಮುಂದಿನ ದಿನಗಳಲ್ಲಿ ನೋಡಲಿದ್ದೀರಿ ಎಂದರು.

 ಕಚೇರಿ ನಿರ್ಮಾಣವಾಗಿ ಯಾವ ಕಾಲವಾಯಿತು

ಕಚೇರಿ ನಿರ್ಮಾಣವಾಗಿ ಯಾವ ಕಾಲವಾಯಿತು

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರ ಘೋಷಣೆಯಲ್ಲಿ ಯಾವುದೇ ಗೊಂದಲವಿಲ್ಲ. ಜಿಲ್ಲಾ ಕಚೇರಿ ನಿರ್ಮಾಣವಾಗಿ ಯಾವ ಕಾಲವಾಯಿತು. ಜಿಲ್ಲಾ ಕಚೇರಿ ಒಂದು ಕಡೆ ಜಿಲ್ಲಾ ಕೇಂದ್ರ ಮತ್ತೊಂದು ಕಡೆ ಮಾಡಲು ಸಾಧ್ಯವೇ ಎಂದು ಸಚಿವರು ಪ್ರಶ್ನಿಸಿದರು. ಎಲ್ಲಿ ಜಿಲ್ಲಾಕಚೇರಿ ಇದೆಯೋ ಅಲ್ಲಿಯೇ ಜಿಲ್ಲಾಕೇಂದ್ರ ಇರಬೇಕು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರು ಮುಂದುವರಿಸಲು ನಿರ್ಧರಿಸಲಾಗಿದೆ. ಈ ವಿಷಯದಲ್ಲಿ ಅನಗತ್ಯ ಗೊಂದಲ ಬೇಕಾಗಿಲ್ಲ, ದೇವನಹಳ್ಳಿ ಜಿಲ್ಲಾಕೇಂದ್ರವಾಗಿ ಘೋಷಣೆಯಾಗಲಿದೆ ಎಂದು ಸಚಿವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+