ಐಟಿ ಇಲಾಖೆ ವಿರುದ್ಧ ಹೋರಾಟಕ್ಕೆ ರಾಹುಲ್ ಗಾಂಧಿ ಸೂಚನೆ
ಬೆಂಗಳೂರು, ಆಗಸ್ಟ್ 2: ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಪ್ರಭಾವಿ ಸಚಿವ ಹಾಗೂ ಹೈಕಮಾಂಡ್ ಆಪ್ತ ಡಿಕೆ ಶಿವಕುಮಾರ್ ನಿವಾಸ ಮತ್ತು ಕಚೇರಿ ಮೇಲೆ ದಾಳಿ ನಡೆಸುತ್ತಿದ್ದಂತೆ ಐಟಿ ಇಲಾಖೆ ವಿರುದ್ಧವೇ ಕಾಂಗ್ರೆಸ್ ತಿರುಗಿ ಬಿದ್ದಿದೆ.
ಆದಾಯ ತೆರಿಗೆ ದಾಳಿಯಿಂದ ಕ್ರುದ್ಧವಾಗಿರುವ ಕಾಂಗ್ರೆಸ್ ಹೈಕಮಾಂಡ್ ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳಲ್ಲಿ ಈ ವಿಚಾರ ಪ್ರಸ್ತಾಪ ಮಾಡಲು ತೀರ್ಮಾನ ತೆಗೆದುಕೊಂಡಿದೆ. ಹೀಗಾಗಿ ಉಭಯ ಸದನಗಳಲ್ಲಿ ಐಟಿ ದಾಳಿ ಕೋಲಾಹಲ ಸೃಷ್ಟಿಸುವ ಎಲ್ಲಾ ಸಾಧ್ಯತೆಗಳಿವೆ.

ಜತೆಗೆ ಐಟಿ ಇಲಾಖೆ ವಿರುದ್ಧವೇ ಹೋರಾಟ ನಡೆಸುವಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರೆ ಮಾಡಿ ಸೂಚಿಸಿದ್ದಾರೆ ಎನ್ನಲಾಗಿದೆ.











Click it and Unblock the Notifications