ದೋಸ್ತಿಗೂ ಮುಂಚೆ ಕಾಂಗ್ರೆಸ್ ಸರಿಯಾಗಿ ನಡೆಸಿಕೊಳ್ಳಲಿ ಅಂದರೇಕೆ ಗೌಡರು?
Recommended Video

ಬೆಂಗಳೂರು, ಜನವರಿ 4: ಪ್ರಾದೇಶಿಕ ಪಕ್ಷಗಳನ್ನು ಮೈತ್ರಿ ಪಕ್ಷವಾದ ಕಾಂಗ್ರೆಸ್ ಸರಿಯಾಗಿ ನಡೆಸಿಕೊಳ್ಳಬೇಕು ಎಂದು ಮಾಜಿ ಪ್ರಧಾನಿ-ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಅವರು ಈಗ ಮಾತನಾಡಿರುವುದು ಕರ್ನಾಟಕದಲ್ಲಿ ಚಲಾವಣೆಯಲ್ಲಿರುವ ಜೆಡಿಎಸ್-ಕಾಂಗ್ರೆಸ್ ದೋಸ್ತಿ ಸರಕಾರದ ಬಗ್ಗೆ ಅಲ್ಲ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದೋಸ್ತಿ ಲೆಕ್ಕಾಚಾರದ ಬಗ್ಗೆ.
ಎಲ್ಲ ಜಾತ್ಯತೀತ ಪಕ್ಷಗಳ ಪಾಲಿಗೆ ಕಾಂಗ್ರೆಸ್ ದೊಡ್ಡಣ್ಣ ಇದ್ದ ಹಾಗೆ. ಈ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಮೈತ್ರಿಗೆ ಮುಂದಾಗುವ ಮುಂಚೆ ಅವರು (ಕಾಂಗ್ರೆಸ್) ನಮ್ಮನ್ನು ಸರಿಯಾಗಿ ನಡೆಸಿಕೊಳ್ಳಬೇಕು. ಸೀಟು ಹಂಚಿಕೆ ಮಾತುಕತೆ ಇನ್ನೂ ನಡೆಯುತ್ತಾ ಇದೆ ಎಂದು ಗುರುವಾರ ರಾತ್ರಿ ಪಕ್ಷದ ಸಭೆಯಲ್ಲಿ ಹೇಳಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಇದೇ ಸಂದರ್ಭದಲ್ಲಿ ಸಲಹೆ ನೀಡಿದ ದೇವೇಗೌಡರು, ಈ ಮೈತ್ರಿ ಸರಕಾರದಲ್ಲಿ ಯಾರನ್ನೂ ನಾನು ದೂಷಿಸುವುದಿಲ್ಲ. ನನಗೆ ಗೊತ್ತಿದೆ ಅವರೆಷ್ಟು ನೋವನ್ನು ಅನುಭವಿಸುತ್ತಿದ್ದಾರೆ ಎಂಬ ಸಂಗತಿ. ತಮ್ಮ ಗುರಿ ತಲುಪುವ ಸಲುವಾಗಿ ಇವನ್ನೆಲ್ಲ ಸಹಿಸಲೇಬೇಕು. ಇವನ್ನೆಲ್ಲ ಮರೆತು ಪಕ್ಷ ಕೂಡ ಮುಂದಕ್ಕೆ ಹೆಜ್ಜೆಯಿಡಬೇಕು ಎಂದಿದ್ದಾರೆ.

ಎರಡು-ಒಂದರ ಅನುಪಾತದಲ್ಲಿ ಸ್ಥಾನ ಹಂಚಿಕೆ
ಮುಂಬರುವ ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿರುವ ಇಪ್ಪತ್ತೆಂಟು ಸ್ಥಾನಗಳಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ಎರಡು-ಒಂದರ ಅನುಪಾತದಲ್ಲಿ ಸ್ಥಾನ ಹಂಚಿಕೆ ಅಗಲಿದೆ ಎಂಬ ಮಾತು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ದೇವೇಗೌಡರ ಅಭಿಪ್ರಾಯಕ್ಕೆ ಹೆಚ್ಚಿನ ಪ್ರಾಮುಖ್ಯ ದೊರೆತಿದೆ.

ಕಾಂಗ್ರೆಸ್ ನಿಂದ ಏಕಪಕ್ಷೀಯ ನಿರ್ಧಾರ: ಅಸಮಾಧಾನ
ನಿಗಮ ಹಾಗೂ ಮಂಡಳಿಗಳ ನೇಮಕಾತಿಯಲ್ಲಿ ಕಾಂಗ್ರೆಸ್ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದೆ ಎಂಬ ಅಸಮಾಧಾನ ಜೆಡಿಎಸ್ ನಲ್ಲಿದೆ. ಇನ್ನು ಇದೇ ಸಂದರ್ಭದಲ್ಲಿ ಎಚ್.ಡಿ.ಕುಮಾರಸ್ವಾಮಿ, ಪಿ.ಜಿ.ಆರ್.ಸಿಂಧ್ಯಾ ಮಾತನಾಡಿ, ಮೈತ್ರಿ ಸರಕಾರದಲ್ಲಿ ಇರುವ ಏಕೈಕ ಕಾರಣಕ್ಕೆ ಜೆಡಿಎಸ್ ನಾಯಕರನ್ನು ಹೇಗೆಂದರೆ ಹಾಗೆ ನಡೆಸಿಕೊಳ್ಳಬಾರದು ಎಂದಿದ್ದಾರೆ.

ಜೆಡಿಎಸ್ ಮಾಡಿದ ಸಾಲ ಮನ್ನಾ ದೇಶಕ್ಕೇ ಮಾದರಿ
ಕುಮಾರಸ್ವಾಮಿ ಅವರು ಮಾತನಾಡಿ, ಮೈತ್ರಿ ಪಕ್ಷಗಳು ಎರಡು-ಒಂದರ ಅನುಪಾತವನ್ನೇ ಅನುಸರಿಸುತ್ತಿವೆ. ಇದೇ ಸೂತ್ರವನ್ನೇ ಲೋಕಸಭಾ ಚುನಾವಣೆಗೂ ಅನ್ವಯಿಸಲಿದೆ ಎಂಬ ಭರವಸೆ ಇದೆ. ಇನ್ನು ಕರ್ನಾಟಕದಲ್ಲಿ ಮಾಡಿದ ಸಾಲ ಮನ್ನಾ ಮಾದರಿಯನ್ನು ಇಡೀ ದೇಶದಲ್ಲಿ ಅನುಸರಿಸಬಹುದು ಎಂದಿದ್ದಾರೆ. ಸಾಲ ಮನ್ನಾದ ಪೂರ್ತಿ ಶ್ರೇಯವನ್ನು ಜೆಡಿಎಸ್ ಪಾಲಿಗೆ ಎಂಬಂತಾಗಿದೆ.

ಸೋತ ಮುಖಂಡರಿಗೆ ನಿಗಮ-ಮಂಡಳಿಯಲ್ಲಿ ಸ್ಥಾನ
ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನದ ನೇಮಕಕ್ಕೆ ಶೀಘ್ರದಲ್ಲೇ ಕ್ರಮ ತೆಗೆದುಕೊಳ್ಳಲಾಗುವುದು ಎಂದಿರುವ ಕುಮಾರಸ್ವಾಮಿ, ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಪಕ್ಷದ ಮುಖಂಡರ ಸಲುವಾಗಿ ಶಾಸಕರು ತ್ಯಾಗ ಮಾಡಬೇಕಾಗುತ್ತದೆ ಎನ್ನುವ ಮೂಲಕ ಸೋಲು ಕಂಡವರಿಗೆ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನಗಳು ದೊರೆಯುವ ಸೂಚನೆ ನೀಡಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications