ಟಿಪ್ಪು ಖಡ್ಗ ಹಿಡಿದ ಬಿಜೆಪಿ ನಾಯಕರ ಚಿತ್ರ ಹಂಚಿಕೊಂಡು ಕಾಂಗ್ರೆಸ್ ವಾಗ್ದಾಳಿ
ಬೆಂಗಳೂರು, ಅ.04: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸಚಿವ ಆರ್. ಅಶೋಕ್ ಆರೋಪಕ್ಕೆ ಕಾಂಗ್ರೆಸ್ ಭಾರಿ ಆಕ್ರೋಶ ಹೊರಹಾಕಿದ್ದು, ಬಿಜೆಪಿ ನಾಯಕರ ಚಿತ್ರಗಳನ್ನು ಹಂಚಿಕೊಂಡು ವ್ಯಂಗ್ಯವಾಡಿದೆ.
ಭಾರತ ಐಕ್ಯತಾ ಯಾತ್ರೆಯಿಂದ ಕಂಗೆಟ್ಟಿರುವ ಬಿಜೆಪಿ ನಾಯಕರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಾವು ಪ್ರಶ್ನೆ ಮಾಡುತ್ತಲೇ ಇದ್ದೇವೆ. ಆದರೆ, ಬಿಜೆಪಿ ಉತ್ತರಿಸುವ ಧೈರ್ಯ ತೋರಿಸುವುದೇ ಇಲ್ಲ ಎಂದು ಕುಟುಕಿದೆ.
ಕರ್ನಾಟಕ ಕಾಂಗ್ರೆಸ್ನ ಪೇ ಸಿಎಂ ಪೋಸ್ಟರ್ ಅನ್ನು ಅರಗಿಸಿಕೊಳ್ಳಲಾಗದ ಬಿಜೆಪಿ ಸೋಮವಾರ ಮಾಜಿ ಸಿಎಂ ಸಿದ್ದರಾಮಯ್ಯಗೆ ಟಕ್ಕರ್ ನೀಡುವ ಸಲುವಾಗಿ ಸಿದ್ದರಾಮಯ್ಯರ ಪಿಎಫ್ಐ ಭಾಗ್ಯ ಎಂಬ ಪೋಸ್ಟರ್ ಅನ್ನು ಕಂದಾಯ ಸಚಿವ ಆರ್ ಅಶೋಕ್ ವಿಧಾನಸೌಧದಲ್ಲಿ ಬಿಡುಗಡೆ ಮಾಡಿದ್ದರು. ಸಿದ್ದರಾಮಯ್ಯ ಪಿಎಫ್ಐ ಅವರ ಮೇಲಿದ್ದ ಪ್ರಕರಣಗಳನ್ನು ವಾಪಸ್ ಪಡೆದಿದ್ದಾರೆ ಎಂದು ಆರೋಪಿಸಿದ್ದರು. ಜೊತೆಗೆ ಸಿದ್ದರಾಮಯ್ಯ ಟಿಪ್ಪು ಖಡ್ಗ ಹಿಡಿದ ಚಿತ್ರವನ್ನು ಪೋಸ್ಟರ್ ಒಳಗಡೆ ಹಾಕಿಲಾಗಿತ್ತು.

ಟಿಪ್ಪು ಖಡ್ಗ ಹಿಡಿದ ಅಶೋಕ್ ಚಿತ್ರ ಹಂಚಿಕೊಂಡ ಕಾಂಗ್ರೆಸ್
ಸಚಿವ ಆರ್.ಅಶೋಕ್ ಖಡ್ಗ ಹಿಡಿದಿರುವ ಚಿತ್ರವನ್ನು ಹಂಚಿಕೊಂಡಿರುವ ಕಾಂಗ್ರೆಸ್, "ಭಾರತ ಐಕ್ಯತಾ ಯಾತ್ರೆಯಿಂದ ಬಿಜೆಪಿಯ ಬುಡ ಅಲ್ಲಾಡುತ್ತಿದೆ, ಭಯ, ಹತಾಶೆಯಿಂದ ಕಂಗೆಟ್ಟಿದೆ ಎಂಬುದು ಆರ್. ಅಶೋಕ್ ಅವರ ಪತ್ರಿಕಾಗೋಷ್ಟಿಯೇ ಸಾಕ್ಷಿ!" ಎಂದಿದೆ.
"ಆರ್.ಅಶೋಕ್ ಅವರೇ, ಈ ಚಿತ್ರವಿರುವ ಪೋಸ್ಟರ್ ಯಾವಾಗ ಬಿಡುಗಡೆ ಮಾಡ್ತೀರಿ..?" ಎಂದು ವ್ಯಂಗ್ಯವಾಡಿದೆ.
ಜೊತೆಗೆ ಮಾನ್ಯ ಆರ್.ಅಶೋಕ್ ಅವರೇ ಯಡಿಯೂರಪ್ಪನವರು ಟಿಪ್ಪು ಖಡ್ಗ ಹಿಡಿದ ಈ ಫೋಟೋವನ್ನು ಯಾವಾಗ ಬಿಡುಗಡೆ ಮಾಡುವಿರಿ?" ಎಂದೂ ಪ್ರಶ್ನೆ ಮಾಡಿದೆ.

ಬಿಜೆಪಿ ಉತ್ತರಿಸುವ ಧೈರ್ಯ ತೋರುವುದೇ ಇಲ್ಲ; ಕಾಂಗ್ರೆಸ್
ಮುಂದುವರಿದು, ಬಿಜೆಪಿ ನಾಯಕರಾದ ಜಗದೀಶ್ ಶೆಟ್ಟರ್, ಬಿ.ಎಸ್.ಯಡಿಯೂರಪ್ಪ, ಶ್ರೀರಾಮುಲು ಸೇರಿದಂತೆ ಹಲವು ನಾಯಕರು ಟಿಪ್ಪು ವಷ ಧರಿಸಿ, ಖಡ್ಗ ಹಿಡಿದಿರುವ ಫೋಟೋ ಕೊಲಾಜ್ ಟ್ವೀಟ್ ಮಾಡಿದೆ.
"ನಾವು ಕೇಳುತ್ತಲೇ ಇದ್ದೇವೆ, ಆದರೆ, ಬಿಜೆಪಿ ಉತ್ತರಿಸುವ ಧೈರ್ಯ ತೋರುವುದೇ ಇಲ್ಲ, ಕರ್ನಾಟಕ ಬಿಜೆಪಿಗೆ ದಮ್ಮು ತಾಕತ್ತು ಇದ್ದರೆ ಉತ್ತರಿಸಲಿ,
*ಬಿಜೆಪಿಗರು ಟಿಪ್ಪು ವೇಷ ಧರಿಸಿ ಪೋಸ್ ಕೊಟ್ಟಿದ್ದೇಕೆ?
* ಟಿಪ್ಪುವನ್ನು ಹೊಗಳಿ ಜಗದೀಶ್ ಶೆಟ್ಟರ್ ನೇತೃತ್ವದ ಬಿಜೆಪಿ ಸರ್ಕಾರ ಪುಸ್ತಕ ಹೊರತಂದಿದ್ದೇಕೆ?
* ರಾಷ್ಟ್ರಪತಿ ಟಿಪ್ಪು ಹೋಗಳಿದ್ದೇಕೆ? ಎಂದು ಪ್ರಶ್ನಿಸಿದೆ.

ಕಂದಾಯ ಭವನ 'ಸಂದಾಯ ಭವನ'ವಾಗಿದೆ; ಆರೋಪ
ಮುಂದುವರೆದು "ಲಂಚ ಲಂಚ ಲಂಚ...40% ಸರ್ಕಾರದಲ್ಲಿ ಎಲ್ಲೆಲ್ಲೂ ಲಂಚದ ಹಾವಳಿ. ಭ್ರಷ್ಟಾಚಾರದ ಮಹಾಪೋಷಕ ಕರ್ನಾಟಕ ಬಿಜೆಪಿ ಆಡಳಿತದಲ್ಲಿ ಅಧಿಕಾರಿಗಳಿಗೆ ಯಾವ ಭಯವೂ ಇಲ್ಲದೆ ಜನಸಾಮಾನ್ಯರ ಪ್ರಾಣ ಹಿಂಡುತ್ತಿದ್ದಾರೆ" ಎಂದು ಕಿಡಿಕಾರಿದೆ.
"ಕಂದಾಯ ಭವನವು 'ಸಂದಾಯ ಭವನ'ವಾಗಿರುವುದು ಬಿಜೆಪಿಯ ಸಾಧನೆಗಳಲ್ಲೊಂದು! ಪೇ ಸಿಎಂ ಆಡಳಿತದಲ್ಲಿ ಹುಟ್ಟು, ಸಾವಿಗೂ ಲಂಚ ಕೊಡುವಂತಾಗಿದೆ" ಎಂದು ಕಾಂಗ್ರೆಸ್ ಆರೋಪಿಸಿದೆ.

ಬಿಜೆಪಿ ರಾಜ್ಯದ ಕ್ಷಮೆ ಕೇಳಬೇಕು; ಕಾಂಗ್ರೆಸ್ ಆಗ್ರಹ
ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಲೇ ಇವೆ ಎಂದು ಹೇಳಿರುವ ಕಾಂಗ್ರೆಸ್ ಹಲವು ಪ್ರಕರಣಗಳನ್ನು ಬೊಟ್ಟು ಮಾಡಿ ತೋರಿಸಿದೆ.
*ಡಿ.ಕೆ ರವಿ ಪ್ರಕರಣ - ವೈಯುಕ್ತಿಕ ಕಾರಣಗಳಿಗೆ ಆತ್ಮಹತ್ಯೆ
* ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ - ಸರ್ಕಾರಕ್ಕೆ ಸಂಬಂಧವಿಲ್ಲ
* ಪರೇಶ್ ಮೇಸ್ತಾ ಪ್ರಕರಣ - ಸಹಜ ಸಾವು
ಈ ಪ್ರಕರಣಗಳಲ್ಲಿ ಸುಳ್ಳು ಹೇಳಿದ್ದ ಕರ್ನಾಟಕ ಬಿಜೆಪಿ ರಾಜ್ಯದ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಇನ್ನು, "PFI ಸಂಘಟನೆಯ ಮಹಾಪೋಷಕ ಬಿಜೆಪಿ ಎಂದು ಸ್ವತಃ ಬಿಜೆಪಿ ನಾಯಕ ಸತ್ಯಜಿತ್ ಸುರತ್ಕಲ್ ಆರೋಪಿಸಿದ್ದರು. ಕಾಂಗ್ರೆಸ್ ಮತಗಳನ್ನು ವಿಭಜಿಸಲು ಬಿಜೆಪಿಯೇ PFI, SDPI ಗಳನ್ನು ಸಾಕುತ್ತಿದೆ ಎಂದು ಮುತಾಲಿಕ್ ಆರೋಪಿಸಿದ್ದರು. ಈ ಬಗ್ಗೆಯೂ ತನಿಖೆಯಾಗಬೇಕು, NIA ಬಿಜೆಪಿ ಕಛೇರಿಯನ್ನೂ ಶೋಧಿಸಬೇಕು. BJP, PFI ನೆಂಟಸ್ತಿಕೆ ಹೊರಬರಬೇಕು" ಎಂದು ಕಾಂಗ್ರೆಸ್ ಒತ್ತಾಯಿಸಿದೆ.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications