ಕರ್ನಾಟಕ ವಿಧಾನಸಭೆಯಲ್ಲಿ 79ಕ್ಕೇರಿದ ಕಾಂಗ್ರೆಸ್ ಸಂಖ್ಯಾಬಲ
ಬೆಂಗಳೂರು, ಜೂನ್ 13: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಜಯಗಳಿಸುವ ಮೂಲಕ ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಒಟ್ಟು ಸಾಮರ್ಥ್ಯ 79ಕ್ಕೆ ಏರಿದೆ.
ಕಳೆದ ವಿಧಾನಸಭೆ ಚುನಾವಣೆ ವೇಳೆ ಒಟ್ಟು 222 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಆದರೆ ಬೆಂಗಳೂರಿನ ಜಯನಗರ ಮತ್ತು ರಾಜರಾಜೇಶ್ವರಿನಗರ ಕ್ಷೇತ್ರಗಳ ಚುನಾವಣೆ ಬೇರೆ ಬೇರೆ ಕಾರಣಗಳಿಗಾಗಿ ಮುಂದೂಡಲ್ಪಟ್ಟಿತ್ತು.
ಈ ಹಿನ್ನೆಲೆಯಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಾಗ 222 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 78 ಜೆಡಿಎಸ್ 38 ಸ್ಥಾನಗಳಲ್ಲಿ ಜಯಗಳಿಸಿದ್ದವು. ಆದರೆ ಜಮಖಂಡಿ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ರಸ್ತೆ ಅಪಘಾತದಲ್ಲಿ ನಿಧನ ಹೊಂದಿದ್ದರಿಂದ ಕಾಂಗ್ರೆಸ್ ಬಲ 77ಕ್ಕೆ ಕುಸಿದಿತ್ತು. ಎರಡೂ ಪಕ್ಷಗಳು ಸೇರಿ ಸಮ್ಮಿಶ್ರ ಸರ್ಕಾರ ರಚನೆ ಮಾಡಿದಾಗ ಇತರೆ ಪಕ್ಷದ ಸಾಮರ್ಥ್ಯದ ವಿಧಾನಸಭೆಯಲ್ಲಿ 116ರಷ್ಟಿತ್ತು.ಒಬ್ಬರು ಪಕ್ಷೇತರರು ಕೂಡ ಕೈಜೋಡಿಸಿದ್ದರಿಂದ ಸಮ್ಮಿಶ್ರ ಸರ್ಕಾರದ ಬಲ 118ರಷ್ಟು ಇತ್ತು.

ಮುಖ್ಯಮಂತ್ರಿ ಕುಮಾರಸ್ವಾಮಿ ಎರಡು ಕ್ಷೇತ್ರದಲ್ಲಿ ಜಯಗಳಿಸಿದ್ದರಿಂದ ಜೆಡಿಎಸ್ನ ಸಂಖ್ಯಾಬಲ 37ಕ್ಕೆ ಇಳಿದ ಪರಿಣಾಮ ಇದೀಗ ಸರ್ಕಾರದ ಬಲ 117 ಆಗಿದೆ.
ಈ ಹಿನ್ನೆಲೆಯಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ. ಈ ಮಧ್ಯೆ ಜಯನಗರ, ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಎರಡೂ ಕಡೆ ಕಾಂಗ್ರೆಸ್ ಜಯಗಳಿಸಿರುವುದರಿಂದ 78ರಷ್ಟಿದ್ದ ಕಾಂಗ್ರೆಸ್ನ ಸಂಖ್ಯಾಬಲ ಈಗ 79ಕ್ಕೆ ಏರಿದಂತಾಗಿದೆ.
ಮತ್ತೊಂದೆಡೆ ಜೆಡಿಎಸ್ನ 37ರಷ್ಟು ಸಂಖ್ಯಾಬಲ ಸಮ್ಮಿಶ್ರ ಸರ್ಕಾರಕ್ಕಿರುವುದರಿಂದ ಅದರರ ಸಂಖ್ಯಾಬಲ 117ಕ್ಕೆ ಏರಿದಂತಾಗಿದೆ. ಮುಂದಿನ ತಿಂಗಳು ಜೂನ್ ಎರಡನೇ ವಾರದ ವೇಳೆಗೆ ನಡೆಯಲಿರುವ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಹಾಗು ಬಿಜೆಪಿ ನಡುವೆ ನೇರ ಸ್ಪರ್ಧೆ ಉಂಟಾಗಲಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚಿಸುವ ಜೆಡಿಎಸ್ನ ಅಭ್ಯರ್ಥಿಗೆ ಬೆಂಬಲ ಸೂಚಿಸಲಿದೆ.

ಹೀಗಾಗಿ ಸಮ್ಮಿಶ್ರ ಸರ್ಕಾರದ ಸಂಖ್ಯಾಬಲ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದ್ದು ಬಿಜೆಪಿ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ್ದ 104 ಸ್ಥಾನಗಳಿಗೆ ಸೀಮಿತಗೊಂಡಂತಾಗಿದೆ.
ಈ ಮಧ್ಯೆ ಜಯನಗರ ಮತ್ತು ರಾಜರಾಜೇಶ್ವರಿ ಕ್ಷೇತ್ರ ಚುನಾವಣೆ ಬಳಿಕ ಸಮ್ಮಿಶ್ರ ಸರ್ಕಾರದ ಸಂಖ್ಯಾಬಲ 119 ತಲುಪಿದೆ. ಹೀಗಾಗಿ ಬಹುಮತದ ದೃಷ್ಟಿಯಿಂದ ಜೆಡಿಎಸ್ ಕಾಂಗ್ರೆಸ್ ಸಮಮ್ಇಶ್ರ ಸರ್ಕಾರ ಮತ್ತಷ್ಟು ಗಟ್ಟಿಗೊಂಡಂತಾಗಿದೆ.
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ












Click it and Unblock the Notifications