ಕರ್ನಾಟಕ ವಿಧಾನಸಭೆಯಲ್ಲಿ 79ಕ್ಕೇರಿದ ಕಾಂಗ್ರೆಸ್ ಸಂಖ್ಯಾಬಲ
ಬೆಂಗಳೂರು, ಜೂನ್ 13: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಜಯಗಳಿಸುವ ಮೂಲಕ ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಒಟ್ಟು ಸಾಮರ್ಥ್ಯ 79ಕ್ಕೆ ಏರಿದೆ.
ಕಳೆದ ವಿಧಾನಸಭೆ ಚುನಾವಣೆ ವೇಳೆ ಒಟ್ಟು 222 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಆದರೆ ಬೆಂಗಳೂರಿನ ಜಯನಗರ ಮತ್ತು ರಾಜರಾಜೇಶ್ವರಿನಗರ ಕ್ಷೇತ್ರಗಳ ಚುನಾವಣೆ ಬೇರೆ ಬೇರೆ ಕಾರಣಗಳಿಗಾಗಿ ಮುಂದೂಡಲ್ಪಟ್ಟಿತ್ತು.
ಈ ಹಿನ್ನೆಲೆಯಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಾಗ 222 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 78 ಜೆಡಿಎಸ್ 38 ಸ್ಥಾನಗಳಲ್ಲಿ ಜಯಗಳಿಸಿದ್ದವು. ಆದರೆ ಜಮಖಂಡಿ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ರಸ್ತೆ ಅಪಘಾತದಲ್ಲಿ ನಿಧನ ಹೊಂದಿದ್ದರಿಂದ ಕಾಂಗ್ರೆಸ್ ಬಲ 77ಕ್ಕೆ ಕುಸಿದಿತ್ತು. ಎರಡೂ ಪಕ್ಷಗಳು ಸೇರಿ ಸಮ್ಮಿಶ್ರ ಸರ್ಕಾರ ರಚನೆ ಮಾಡಿದಾಗ ಇತರೆ ಪಕ್ಷದ ಸಾಮರ್ಥ್ಯದ ವಿಧಾನಸಭೆಯಲ್ಲಿ 116ರಷ್ಟಿತ್ತು.ಒಬ್ಬರು ಪಕ್ಷೇತರರು ಕೂಡ ಕೈಜೋಡಿಸಿದ್ದರಿಂದ ಸಮ್ಮಿಶ್ರ ಸರ್ಕಾರದ ಬಲ 118ರಷ್ಟು ಇತ್ತು.

ಮುಖ್ಯಮಂತ್ರಿ ಕುಮಾರಸ್ವಾಮಿ ಎರಡು ಕ್ಷೇತ್ರದಲ್ಲಿ ಜಯಗಳಿಸಿದ್ದರಿಂದ ಜೆಡಿಎಸ್ನ ಸಂಖ್ಯಾಬಲ 37ಕ್ಕೆ ಇಳಿದ ಪರಿಣಾಮ ಇದೀಗ ಸರ್ಕಾರದ ಬಲ 117 ಆಗಿದೆ.
ಈ ಹಿನ್ನೆಲೆಯಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ. ಈ ಮಧ್ಯೆ ಜಯನಗರ, ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಎರಡೂ ಕಡೆ ಕಾಂಗ್ರೆಸ್ ಜಯಗಳಿಸಿರುವುದರಿಂದ 78ರಷ್ಟಿದ್ದ ಕಾಂಗ್ರೆಸ್ನ ಸಂಖ್ಯಾಬಲ ಈಗ 79ಕ್ಕೆ ಏರಿದಂತಾಗಿದೆ.
ಮತ್ತೊಂದೆಡೆ ಜೆಡಿಎಸ್ನ 37ರಷ್ಟು ಸಂಖ್ಯಾಬಲ ಸಮ್ಮಿಶ್ರ ಸರ್ಕಾರಕ್ಕಿರುವುದರಿಂದ ಅದರರ ಸಂಖ್ಯಾಬಲ 117ಕ್ಕೆ ಏರಿದಂತಾಗಿದೆ. ಮುಂದಿನ ತಿಂಗಳು ಜೂನ್ ಎರಡನೇ ವಾರದ ವೇಳೆಗೆ ನಡೆಯಲಿರುವ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಹಾಗು ಬಿಜೆಪಿ ನಡುವೆ ನೇರ ಸ್ಪರ್ಧೆ ಉಂಟಾಗಲಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚಿಸುವ ಜೆಡಿಎಸ್ನ ಅಭ್ಯರ್ಥಿಗೆ ಬೆಂಬಲ ಸೂಚಿಸಲಿದೆ.

ಹೀಗಾಗಿ ಸಮ್ಮಿಶ್ರ ಸರ್ಕಾರದ ಸಂಖ್ಯಾಬಲ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದ್ದು ಬಿಜೆಪಿ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ್ದ 104 ಸ್ಥಾನಗಳಿಗೆ ಸೀಮಿತಗೊಂಡಂತಾಗಿದೆ.
ಈ ಮಧ್ಯೆ ಜಯನಗರ ಮತ್ತು ರಾಜರಾಜೇಶ್ವರಿ ಕ್ಷೇತ್ರ ಚುನಾವಣೆ ಬಳಿಕ ಸಮ್ಮಿಶ್ರ ಸರ್ಕಾರದ ಸಂಖ್ಯಾಬಲ 119 ತಲುಪಿದೆ. ಹೀಗಾಗಿ ಬಹುಮತದ ದೃಷ್ಟಿಯಿಂದ ಜೆಡಿಎಸ್ ಕಾಂಗ್ರೆಸ್ ಸಮಮ್ಇಶ್ರ ಸರ್ಕಾರ ಮತ್ತಷ್ಟು ಗಟ್ಟಿಗೊಂಡಂತಾಗಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications