ಕೊಂಡಯ್ಯ ವಿರುದ್ಧ ಶಿಸ್ತು ಕ್ರಮ : ಪರಮೇಶ್ವರ್

ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಪರಮೇಶ್ವರ್, ಪಕ್ಷದ ಮುಖಂಡ ಕೆ.ಸಿ.ಕೊಂಡಯ್ಯ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆಂದು ನಿವೇಶನ ಮಂಜೂರು ಮಾಡಿಸಿಕೊಂಡು, ಸದ್ಯ ಅಲ್ಲಿ ಬೇರೆ ಉದ್ದೇಶಕ್ಕೆ ಕಟ್ಟಡ ನಿರ್ಮಿಸುತ್ತಿರುವುದು ನಿಜ. ಈ ಕುರಿತು ಅವರಿಂದ ವಿವರಣೆ ಪಡೆದ ನಂತರ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈಗಾಗಲೇ ಬಳ್ಳಾರಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಆಂಜನೇಯಲು ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲೆಗಳನ್ನು ಸಲ್ಲಿಸಿದ್ದಾರೆ. ಪ್ರಕರಣದ ಬಗ್ಗೆ ಜಿಲ್ಲಾಧಿಕಾರಿಗಳಿಂದ ಸಮಗ್ರ ವರದಿ ಪಡೆದ ನಂತರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು. ರಾಜೀವ್ ಗಾಂಧಿ ಮೆಮೋರಿಯಲ್ ಟ್ರಸ್ಟ್ನ ಟ್ರಸ್ಟಿಗಳು ಬದಲಾಗಿದ್ದು, ನಿವೇಶನ ಮಂಜೂರು ಉದ್ದೇಶ ಕೂಡ ಬದಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ನಿವೇಶನದ ಕುರಿತು ಮಾಹಿತಿ ನೀಡಿದ ಪರಮೇಶ್ವರ್, 2001 ರಾಜೀವ್ ಗಾಂಧಿ ಮೆಮೋರಿಯಲ್ ಟ್ರಸ್ಟ್ ಅಡಿ ಕಾಂಗ್ರೆಸ್ ಕಚೇರಿ ಕಟ್ಟಲು 99 ವರ್ಷಕ್ಕೆ 86*65 ಚದರ ಅಡಿ ಸರ್ಕಾರಿ ಜಾಗವನ್ನು ಗುತ್ತಿಗೆ ನೀಡಲಾಗಿತ್ತು. ಟ್ರಸ್ಟಿಗೆ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಅಲ್ಲಂ ವೀರಭದ್ರಪ್ಪ, ಕೆ.ಸಿ.ಕೊಂಡಯ್ಯ, ಎಂ.ವೈ.ಘೋರ್ಪಡೆ, ದಿವಾಕರ್ ಬಾಬು, ಸಿರಾಜ್ ಶೇಖ್ ಅವರನ್ನು ಟ್ರಸ್ಟಿಗಳಾಗಿ ಮಾಡಲಾಗಿತ್ತು.
ಆದರೆ, 2005ರಲ್ಲಿ ಪಕ್ಷದ ಹಿರಿಯ ನಾಯಕ ಕೆ.ಸಿ.ಕೊಂಡಯ್ಯ ಉಳಿದ ಟ್ರಸ್ಟಿಗಳನ್ನು ಬದಲಾವಣೆ ಮಾಡಿದ್ದಾರೆ. ತಮ್ಮ ಪತ್ನಿ ಮೀನಾಕ್ಷಿ, ಮಗ ಕೆ.ವಿ.ಆರ್. ಪ್ರಸಾದ್ ಅವರನ್ನು ಟ್ರಸ್ಟಿಗಳನ್ನಾಗಿ ಕೊಂಡಯ್ಯ ನೇಮಕ ಮಾಡಿದ್ದಾರೆ ಎಂದು ತಿಳಿಸಿದರು. ಟ್ರಸ್ಟಿಗಳು ಬದುಕಿದ್ದಾಗಲೇ ಅವರನ್ನು ಬದಲಿಸಿದ್ದು ಏಕೆ? ಎಂಬುದು ತಿಳಿಯುತ್ತಿಲ್ಲ ಎಂದರು.
ಸದ್ಯ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕಾಗಿ ಮಂಜೂರಾಗಿದ್ದ ನಿವೇಶನದಲ್ಲಿ ವಾಣ್ಯಜ್ಯ ಕಟ್ಟಡ ನಿರ್ಮಿಸಲಾಗುತ್ತಿದೆ. ಟ್ರಸ್ಟಿಗಳು ಬದಲಾವಣೆಯಾಗಿದ್ದಾರೆ. ಕೆ.ಸಿ.ಕೊಂಡಯ್ಯ ಅವರಿಂದ ಈ ಕುರಿತು ವಿವರಣೆ ಪಡೆದು, ಜಿಲ್ಲಾಧಿಕಾರಿಗಳಿಂದಲೂ ಸಮಗ್ರ ವರದಿ ಪಡೆದು ಕೊಂಡಯ್ಯ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications