'ಕೊರೊನಾ ಅವ್ಯವಹಾರ ತನಿಖೆಗೆ ಸದನ ಸಮಿತಿ ರಚನೆ ಮಾಡಲಿ'
ಬೆಂಗಳೂರು, ಜುಲೈ 20: 'ವೈದ್ಯಕೀಯ ಸಾಮಾಗ್ರಿ ಖರೀದಿಯಲ್ಲಿ ಅವ್ಯವಹಾರ ಆಗಿದೆ. ಇದರ ಬಗ್ಗೆ ತನಿಖೆಗೆ ಸದನ ಸಮಿತಿ ರಚನೆ ಮಾಡಲಿ' ಎಂದು ಕಾಂಗ್ರೆಸ್ ಮಾಜಿ ಸಚಿವ ಯು.ಟಿ ಖಾದರ್ ಒತ್ತಾಯಿಸಿದ್ದಾರೆ.
Recommended Video
ಕೋವಿಡ್ ಪರಿಸ್ಥಿತಿ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರದ ಸಂಪೂರ್ಣ ವೈಫಲ್ಯ, ಕೋವಿಡ್ ಚಿಕಿತ್ಸಾ ಸಲಕರಣೆ ಖರೀದಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ, ರಾಜ್ಯಾದ್ಯಂತ ಕೋವಿಡ್ ಸೋಂಕಿತರ ಪರದಾಟ ಮತ್ತಿತರ ವಿಚಾರಗಳ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ಮುಖಂಡರು, ಕಾಂಗ್ರೆಸ್ ಕೋವಿಡ್ ಕಾರ್ಯಪಡೆ ಹಾಗೂ ವೈದ್ಯ ಘಟಕದ ಜತೆ ಸೋಮವಾರ ಸಮಾಲೋಚನೆ ನಡೆಸಿದರು.
ಈ ವೇಳೆ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಚ್.ಕೆ ಪಾಟೀಲ್ ಹಾಗೂ ಕೋವಿಡ್ ಕಾರ್ಯಪಡೆ ಮುಖ್ಯಸ್ಥ ರಮೇಶ್ ಕುಮಾರ್ ಉಪಸ್ಥಿತರಿದ್ದರು. ಮುಂದೆ ಓದಿ...

ಕೊವಿಡ್ ನಿರ್ವಹಣೆಯಲ್ಲಿ ಸರ್ಕಾರ ವೈಫಲ್ಯ
ರಾಜ್ಯದಲ್ಲಿ ಕೊರೊನಾ ಹೆಚ್ಚುತ್ತಲೇ ಇದೆ. ಇಲ್ಲಿಯವರೆಗೆ ನಾಲ್ಕು ತಿಂಗಳು ಕಳೆದಿದ್ದು, 70 ಸಾವಿರ ಗಂಟಲು ದ್ರವ ಪರೀಕ್ಷೆ ರಿಸಲ್ಟ್ ಬರಬೇಕು. ಕೊವಿಡ್ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವೈಫಲ್ಯವಾಗಿದೆ. ಮೆಡಿಕಲ್ ಕಿಟ್ ಖರೀದಿಯಲ್ಲಿ ಅವ್ಯವಹಾರವಾಗಿದೆ. ಮಂತ್ರಿಗಳು ದಿನಕ್ಕೊಂದು ಹೇಳಿಕೆ ನೀಡ್ತಾರೆ. ಆರ್ಥಿಕ ಸಂಕಷ್ಟ, ಆರೋಗ್ಯ ಸಂಕಷ್ಟ ಎರಡು ಎದುರಾಗಿದೆ. ಪ್ರತಿಪಕ್ಷವಾಗಿ ನಾವು ಇದರ ವಿರುದ್ಧ ಹೋರಾಟ ಮಾಡ್ತೇವೆ. ಜನಜಾಗೃತಿ ಮೂಡಿಸುವ ಕೆಲಸ ಮಾಡ್ತೇವೆ. ಜನರಿಗಾಗಿ ಸಹಾಯವಾಣಿ ಆರಂಭಿಸುತ್ತೇವೆ' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಸರ್ಕಾರದ ಕರ್ಮಕಾಂಡ ಬಯಲಾಗ್ತಿದೆ
'ನಾವು ಸರ್ಕಾರಕ್ಕೆ ಪ್ರಶ್ನೆ ಕೇಳಿದ್ದೆವು. ಅವರು ಮೊದಲು ಉತ್ತರ ಕೊಡಲಿ. ಮೆಡಿಕಲ್ ಕಿಟ್ ಖರೀದಿ ಅವ್ಯವಹಾರದ ಬಗ್ಗೆ ವಿವರ ಕೊಡಲಿ. ಕೊರೊನಾದಲ್ಲಿ ಮಾಡಿರುವ ಕರ್ಮಕಾಂಡ ಬಯಲಾಗ್ತಿದೆ. ರಾಜ್ಯದ ಜನರಿಗೆ ಎಲ್ಲವೂ ಈಗ ಅರ್ಥವಾಗ್ತಿದೆ. ಬಿಬಿಎಂಪಿ ಆಯುಕ್ತರು ಜನರ ಬಳಿ ಹೋಗಿ ಮನವರಿಕೆ ಮಾಡಿಕೊಡ್ತಿದ್ರು. ಪ್ರಮಾಣಿಕ ಪ್ರಯತ್ನ ಮಾಡಿದ್ರು ಅನ್ನಿಸಿದೆ. ಅವರನ್ನು ವರ್ಗಾವಣೆ ಮಾಡಲಾಗಿದೆ. ಇದರ ಬಗ್ಗೆ ನಾನು ಹೆಚ್ಚೇನು ಮಾತನಾಡಲ್ಲ' ಎಂದು ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದನ ಸಮಿತಿ ರಚನೆ ಮಾಡಲಿ
'ಆಡಳಿತ ಪಕ್ಷ,ಪ್ರತಿಪಕ್ಷದ ವಿರುದ್ಧ ರಾಜಕೀಯ ಟೀಕೆಟಿಪ್ಪಣಿ ಮಾಡಲ್ಲ. ಕೊರೊನಾ ಸಂದರ್ಭದಲ್ಲಿ ಸಾಕಷ್ಟು ಆರೋಪ ಕೇಳಿಬರ್ತಿದೆ. ಹೈಕೋರ್ಟ್ ಗೆ ಅಫಿಡವಿಟ್ ಸಲ್ಲಿಕೆಯಾಗಿದೆ. ಕಿಟ್ ಖರೀದಿಯಲ್ಲಿ ಅವ್ಯವಹಾರ ಆಗಿದೆ. ಇದರ ಬಗ್ಗೆ ತನಿಖೆಗೆ ಸದನ ಸಮಿತಿ ರಚನೆ ಮಾಡಲಿ' ಎಂದು ಸರ್ಕಾರಕ್ಕೆ ಮಾಜಿ ಸಚಿವ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.

ಸರ್ಕಾರ ಎಲ್ಲದರಲ್ಲೂ ಅವ್ಯವಹಾರವನ್ನ ನಡೆಸ್ತಿದೆ
''ತಮಿಳುನಾಡು ಸರ್ಕಾರ 4 ಲಕ್ಷ 80 ಸಾವಿರಕ್ಕೆ ವೆಂಟಿಲೇಟರ್ ಖರೀದಿ ಮಾಡಲಾಗಿದೆ. ಆದರೆ ನಮ್ಮ ಸರ್ಕಾರ ೧೮ ಲಕ್ಷಕ್ಕೆ ಖರೀದಿ ಮಾಡಿದೆ. ಬಿಬಿಎಂಪಿ ಆಯುಕ್ತರನ್ನ ವರ್ಗಾವಣೆ ಮಾಡಲಾಗಿದೆ. ಅವ್ಯವಹಾರವನ್ನ ಮುಚ್ಚಿಹಾಕುವ ಪ್ರಯತ್ನ ಮಾಡ್ತಿದೆ. ಕೂಡಲೇ ಇದರ ಬಗ್ಗೆ ತನಿಖೆ ನಡೆಸಬೇಕು. ಬೆಡ್ ಗಳ ಕೊರತೆ ಕೂಡ ಹೆಚ್ಚಾಗಿದೆ. ಇದನ್ನ ನಿವಾರಿಸುವ ಕೆಲಸ ಮಾಡಬೇಕು. ಸರ್ಕಾರ ಎಲ್ಲದರಲ್ಲೂ ಅವ್ಯವಹಾರವನ್ನ ನಡೆಸ್ತಿದೆ' ಎಂದು ಸರ್ಕಾರದ ವಿರುದ್ಧ ಸಲೀಂ ಅಹ್ಮದ್ ಕಿಡಿಕಾರಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications