ಆರ್ಆರ್ ನಗರ ಮುನಿರತ್ನ ಗೆಲುವು: ಕಾಂಗ್ರೆಸ್ ನಾಯಕರಿಂದ ಅಭಿನಂದನೆ
ಬೆಂಗಳೂರು, ಮೇ 31: ರಾಜರಾಜೇಶ್ವರಿನಗರ ವಿಧಾನಸಭಾ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ಮೇ 12 ರಂದು ಚುನಾವಣೆ ನಡೆಯಬೇಕಾಗಿತ್ತು. ಆದರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಾಲಹಳ್ಳಿ ಅಪಾರ್ಟ್ಮೆಂಟ್ ಒಂದರಲ್ಲಿ 10 ಸಾವಿರಕ್ಕೂ ಹೆಚ್ಚು ಅಸಲಿ ಮತದಾರರ ಚೀಟು ದೊರೆತ ಕಾರಣ, ಕಾಂಗ್ರೆಸ್ ಹಾಗೂ ಬಿಜೆಪಿ ಪರಸ್ಪರ ಕೆಸರೆರಚಾಟ ಆರಂಭಿಸಿತ್ತು.
ಈ ಗೊಂದಲದಲ್ಲಿ ಮೇ 28ರಂದು ಚುನಾವಣೆ ದಿನಾಂಕ ನಿಗದಿ ಮಾಡಿ ಚುನಾವಣೆ ನಡೆಯಿತು. ಇಂದು ಚುನಾವಣಾ ಫಲಿತಾಂಶ ಹೊರ ಬೀಳುವುದು ಬಾಕಿ ಇದೆ. ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಮುನ್ನಡೆ ಸಾಧಿಸಿದ್ದು ಗೆಲುವಿನ ಹಾದಿಯಲ್ಲಿದ್ದಾರೆ.
ಈ ಹಿಂದೆ ಮುನಿರತ್ನ ಅವರನ್ನು ಸೋಲಿಸಲು ಸಾಕಷ್ಟು ಮಂದಿ ಇಲ್ಲ ಸಲ್ಲದ ಆರೋಪಗಳನ್ನು ಮಾಡಿದ್ದರು. ಆದರೆ ಅದನ್ನು ಮೀರಿ ಮುನಿರತ್ನ ಗೆಲುವು ಸಾಧಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 49 ಸಾವಿರಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇದೀಗ 16 ನೇ ಸುತ್ತಿನ ಮತ ಎಣಿಕೆ ಮುಗಿದಿದೆ.

ಬಿಜೆಪಿ ಸೋಲಿನಿಂದ ನನಗೆ ಖುಷಿ ಇದೆ
ರಾಜರಾಜೇಶ್ವರಿನಗರದಲ್ಲಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ನ್ನು ಗೆಲ್ಲಿಸಿರುವ ಮುನಿರತ್ನ ಗೆಲುವಿನ ಕುರಿತು ನನಗೆ ಸಂತಸವಾಗಿದೆ. ಬಿಜೆಪಿ ಗೆಲ್ಲಬಾರದು ಎಂದು ಏನು ಸೂಚನೆ ಕೊಟ್ಟಿದ್ದೆವೋ ಅದರಲ್ಲಿ ಯಶಸ್ಸು ಯಶಸ್ಸು ದೊರೆಯಲಿದೆ. ಆರ್ಆರ್ ನಗರ ಚುನಾವಣೆ ಬಗ್ಗೆ ಏನೂ ತಲೆಕೆಡಿಸಿಕೊಂಡಿರಲಿಲ್ಲ. ನಾವು ಕಾಂಗ್ರೆಸ್ ಗೆಲ್ಲಬೇಕಿತ್ತು ಎಂದು ಅಂದುಕೊಂಡಿದ್ದೆವು ಗೆದ್ದಿದೆ ಇದು ಎಲ್ಲರಿಗೂ ಸಂತಸ ತಂದಿದೆ ಎಂದು ಜೆಪಿ ನಗರದ ತಮ್ಮ ನಿವಾಸದಲ್ಲಿ ಹೇಳಿಕೆ ನೀಡಿದ್ದಾರೆ. ಪರೋಕ್ಷವಾಗಿ ಮೈತ್ರಿಕೂಟದ ಗೆಲುವು ಎಂದು ಹೇಳಿದ್ದಾರೆ.
|
ಮುನಿರತ್ನ ಗೆಲುವು ಸಂತಸ ತಂದಿದೆ
ರಾಜರಾಜೇಶ್ವರಿ ವಿಧಾನಸಭೆ ಚುನಾವಣೆ ಮೇ 28ರಂದು ನಡೆದಿದ್ದು, ಫಲಿತಾಂಶ ಮೇ 31ರಂದು ಹೊರಬಿದ್ದಿದೆ. ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಗೆಲುವು ಸಾಧಿಸಿದ್ದಾರೆ. ಈ ಕುರಿತು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹರ್ಷ ವ್ಯಕ್ತಪಡಿಸಿದ್ದಾರೆ ಹಾಗೂ ಅವರ ಗೆಲುವಿಗೆ ಶುಭಾಶಯ ಕೋರಿದ್ದಾರೆ.
|
ರಾಜರಾಜೇಶ್ವರಿನಗರದಲ್ಲಿ ಕಾಂಗ್ರೆಸ್ ಗೆಲುವು ಸಂತಸ ತಂದಿದೆ
ನಾವು ಅತಿ ಹೆಚ್ಚು ಅಂತರದಿಂದ ರಾಜರಾಜೇಶ್ವರಿ ನಗರದಲ್ಲಿ ಗೆಲುವು ಸಾಧಿಸಿದ್ದೇವೆ, ಬೆಂಗಳೂರು ಜನತೆ ನಮಗೆ ಆಶೀರ್ವಾದ ಮಾಡಿದೆ. ಇದೇ ರೀತಿ ನಿಮ್ಮ ಸಹಕಾರ ಮುಂದುವರೆಯಲಿ ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.

ಮತದಾರರ ತೀರ್ಪು ಅಂತಿಮ
ರಾಜರಾಜೇಶ್ವರಿನಗರದಲ್ಲಿ ಮುನಿರತ್ನ ಗೆಲುವಿನಿಂದ ಸಂತೋಷವಾಗಿದೆ.ಸರ್ಕಾರದ ಪಕ್ಷದ ಪರವಾಗಿ ಆ ಕ್ಷೇತ್ರದ ಕಾರ್ಯಕರ್ತರಿಗೆ ಮತದಾರರಿಗೆ ಹೃದಯಪೂರ್ವಕವಾಗಿ ಅಭಿನಂದನೆ ಸಲ್ಲಿಸುತ್ತೇನೆ, ಇಲ್ಲ ಸಲ್ಲದ ಆರೋಪ ಮಾಡಿ ನೋವುಂಟು ಮಾಡಿದ್ದರು. ಆದರೆ ಮತದಾರನೇ ಅಂತಿಮ ಎನ್ನುವ ಸಂದೇಶ ಈ ಚುನಾವಣೆ ಫಲಿತಾಂಶದಿಂದ ತಿಳಿದುಬಂದಿದೆ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications