ಕಾಂಗ್ರೆಸ್ ಜನರಿಗೆ ಹೋಲ್ಸೆಲ್ ಮೋಸ ಮಾಡುತ್ತಿದೆ: ಮಾಜಿ ಸಿಎಂ
ಗದಗ, ಏಪ್ರಿಲ್ 23: ಕರ್ನಾಟಕ ರಾಜ್ಯ ಸರ್ಕಾರ ಆಳುವ ನೈತಿಕತೆ ಕಳೆದುಕೊಂಡಿದೆ. ಸುಳ್ಳು ಗ್ಯಾರೆಂಟಿಗಳ ಮೂಲಕ ಕಾಂಗ್ರೆಸ್ ಪಕ್ಷ ಜನರಿಗೆ ಹೋಲ್ ಸೇಲ್ ಮೋಸ ಮಾಡಲು ನಿಂತಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ವಾಗ್ದಾಳಿ ನಡೆಸಿದರು.
ಮಂಗಳವಾರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಯಳವತ್ತಿ, ಮಾಗಡಿ, ಕಡಕೋಳ, ಬನ್ನಿಕೊಪ್ಪ, ಮಾಚೇನಹಳ್ಳಿ ಗ್ರಾಮಗಳಲ್ಲಿ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು. ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದರು.

ಈ ಯೋಜನೆಗಳು ರಾಜ್ಯದಲ್ಲಿ ಸ್ಥಗಿತ
ರಾಜ್ಯ ಸರ್ಕಾರ ರೈತರ ಕಿಸಾನ್ ಸನ್ಮಾನ್, ರೈತ ವಿದ್ಯಾನಿಧಿ, ರೈತ ಶಕ್ತಿ ಯೋಜನೆ ಸ್ಥಗಿತ ಮಾಡಿದ್ದಾರೆ. ಬರ ಪರಿಸ್ಥಿತಿಯಲ್ಲಿ ಒಂದು ರೂಪಾಯಿಯನ್ನೂ ನೀಡಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯ ಆಳುವ ನೈತಿಕತೆಯನ್ನು ಕಳೆದುಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹೆಣ್ಣುಮಕ್ಕಳಿಗೆ ಒಂದು ಲಕ್ಷ ರೂಪಾಯಿ ಕೊಡುತ್ತೇವೆ ಎಂದು ಗ್ಯಾರಂಟಿ ಕಾರ್ಡ್ ಕೊಡುತ್ತಿದ್ದಾರೆ. ಪ್ರಣಾಳಿಕೆ ಮಾಡಲಿ ಆದರೆ, ಗ್ಯಾರಂಟಿ ಕಾರ್ಡ್ ಕೊಟ್ಟು ಸುಳ್ಳು ಢೋಂಗಿ ಮಾಡುವುದಕ್ಕೆ ಶುರು ಮಾಡಿದ್ದಾರೆ. ಇವರು ಜನರಿಗೆ ಹೋಲ್ ಸೇಲ್ ಆಗಿ ಮೋಸ ಮಾಡಲು ಹೊರಟಿದ್ದಾರೆ. ಇದು ಕಾನೂನು ವಿರುದ್ಧ ಎಂದು ಗ್ಯಾರಂಟಿ ಕಾರ್ಡ್ ವಿರುದ್ಧ ಅವರು ಹರಿಹಾಯ್ದರು.

ಗ್ಯಾರೆಂಟಿಗೆ ಯಾವುದೇ ಮರ್ಯಾದೆ ಇಲ್ಲ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗ್ಯಾರೆಂಟಿ ಕಾರ್ಡ್ ಗಳಿಗೆ ಸಹಿ ಮಾಡಿ ಕೊಡುತ್ತಿದ್ದಾರೆ. ಅವರೇನು ಈ ದೇಶದ ಪ್ರಧಾನಿನಾ, ರಾಷ್ಟ್ರಪತಿನಾ, ಅವರು ಕೊಡುವ ಗ್ಯಾರೆಂಟಿಗೆ ಯಾವುದೇ ಮರ್ಯಾದೆ ಇಲ್ಲ. ಅವರು ಕೊಡುವ ಗ್ಯಾರೆಂಟಿ ಕಾರ್ಡ್ ಗಳನ್ನು ಹರಿದು ಹಾಕಿ ಎಂದು ಹೇಳಿದರು.
ಲೋಕಸಭೆಯಲ್ಲಿ 543 ಸ್ಥಾನಗಳಿವೆ. ಬಹಮತಕ್ಕೆ 272 ಸ್ಥಾನ ಬೇಕು. ಕಾಂಗ್ರೆಸ್ ಸ್ಪರ್ಧೆ ಮಾಡಿರುವುದೇ 230 ಸ್ಥಾನಗಳಿಗೆ. ಹೀಗಾಗಿ ಕಾಂಗ್ರೆಸ್ ಬಹುಮತ ಬರುವುದಿಲ್ಲ. ಕಾಂಗ್ರೆಸ್ ಗೆ 40 ಕ್ಕಿಂತ ಹೆಚ್ಚು ಸ್ಥಾನ ಸಿಗುವುದಿಲ್ಲ. ರೈತರಿಗೆ, ಬಡವರಿಗೆ, ದಲಿತರಿಗೆ ಅನ್ಯಾಯ ಮಾಡಿರುವ ಕಾಂಗ್ರೆಸ್ ರಾಜ್ಯವನ್ನು ಆಳುವ ನೈತಿಕತೆ ಕಳೆದುಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.
ಋಣ ತೀರಿಸುವ ಸಮಯ
ನಾನು ಹಲವಾರು ಪ್ರಧಾನಮಂತ್ರಿಗಳನ್ನು ನೋಡಿದ್ದೇನೆ. ನರೇಂದ್ರ ಮೋದಿಯವರು ದಿನಕ್ಕೆ 18 ಗಂಟೆ ಕೆಲಸ ಮಾಡುತ್ತಾರೆ. ಅವರು ಸಾಮಾನ್ಯ ಬಡ ಕುಟುಂಬದಿಂದ ಬಂದವರು. ಅವರಿಗೆ ಬಡತನ ಅಂದರೆ ಏನು ಅಂತ ಗೊತ್ತಿದೆ. ಅವರು ದೇಶದ 25 ಕೋಟಿ ಜನರನ್ನು ಬಡತನದಿಂದ ಮೇಲೆ ತಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಅಸಾಧ್ಯ ಎನ್ನುವುದನ್ನು ಸಾಧ್ಯ ಮಾಡಿದವರು ನರೇಂದ್ರ ಮೋದಿಯವರು, ಅವರು ಭಯೋತ್ಪಾನೆಯನ್ನು ಸಂಪೂರ್ಣ ನಿರ್ಣಾಮ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಕೊವಿಡ್ ಸಂದರ್ಭದಲ್ಲಿ ದೇಶದ 130 ಕೋಟಿ ಜನರಿಗೆ ಉಚಿತ ಲಸಿಕೆ ಕೊಟ್ಟು ಪ್ರಾಣ ಉಳಿಸಿದ್ದಾರೆ. ಅಮೇರಿಕಾ ದೇಶದಲ್ಲಿ ಒಂದು ಲಸಿಗೆ 30 ಸಾವಿರ ರೂಪಾಯಿ ಇದೆ. ನರೇಂದ್ರ ಮೋದಿಯವರು ಎಲ್ಲರಿಗೂ ಉಚಿತವಾಗಿ ಮೂರು ಬಾರಿ ಲಸಿಕೆ ಕೊಟ್ಟಿದ್ದಾರೆ. ಪ್ರಾಣ ಉಳಿಸಿದ ಅವರ ಋಣವನ್ನು ಬಿಜೆಪಿಗೆ ಮತ ಹಾಕುವ ಮೂಲಕ ತೀರಿಸಬೇಕು ಎಂದರು.
ನಾನು ಈ ಕ್ಷೇತ್ರದ ಸಂಸದನಾಗಿ ಆಯ್ಕೆಯಾಗಿ ನನ್ನ ಮೂವತೈದು ವರ್ಷದ ರಾಜಕೀಯ ಅನುಭವವನ್ನು ಈ ಕ್ಷೇತ್ರದ ಅಭಿವೃದ್ಧಿಗೆ ಮೀಸಲಿಡುತ್ತೇನೆ. ಈ ಭಾಗಕ್ಕೆ ಅನುಕೂಲವಾಗುವ ನೀರಾವರಿ ಯೋಜನೆ, ಕೈಗಾರಿಕೆಗಳನ್ನು ತರುವ ಪ್ರಯತ್ನ ಮಾಡುತ್ತೇನೆ. ಕ್ಷೇತ್ರದ ಜನರ ಧ್ವನಿಯಾಗಿ ಸಂಸತ್ತಿನಲ್ಲಿ ಸಿಂಹ ಘರ್ಜನೆ ಮಾಡುತ್ತೇನೆ ಎಂದು ಹೇಳಿದರು.
ಚುನಾವಣಾ ಪ್ರಚಾರದಲ್ಲಿ ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಸೇರಿದಂತೆ ಸ್ಥಳೀಯ ನಾಯಕರು, ಕಾರ್ಯಕರ್ತರ ಉಪಸ್ಥಿತರಿದ್ದರು.
-
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?












Click it and Unblock the Notifications