ಕಾಂಗ್ರೆಸ್ ಜನರಿಗೆ ಹೋಲ್ಸೆಲ್ ಮೋಸ ಮಾಡುತ್ತಿದೆ: ಮಾಜಿ ಸಿಎಂ
ಗದಗ, ಏಪ್ರಿಲ್ 23: ಕರ್ನಾಟಕ ರಾಜ್ಯ ಸರ್ಕಾರ ಆಳುವ ನೈತಿಕತೆ ಕಳೆದುಕೊಂಡಿದೆ. ಸುಳ್ಳು ಗ್ಯಾರೆಂಟಿಗಳ ಮೂಲಕ ಕಾಂಗ್ರೆಸ್ ಪಕ್ಷ ಜನರಿಗೆ ಹೋಲ್ ಸೇಲ್ ಮೋಸ ಮಾಡಲು ನಿಂತಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ವಾಗ್ದಾಳಿ ನಡೆಸಿದರು.
ಮಂಗಳವಾರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಯಳವತ್ತಿ, ಮಾಗಡಿ, ಕಡಕೋಳ, ಬನ್ನಿಕೊಪ್ಪ, ಮಾಚೇನಹಳ್ಳಿ ಗ್ರಾಮಗಳಲ್ಲಿ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು. ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದರು.

ಈ ಯೋಜನೆಗಳು ರಾಜ್ಯದಲ್ಲಿ ಸ್ಥಗಿತ
ರಾಜ್ಯ ಸರ್ಕಾರ ರೈತರ ಕಿಸಾನ್ ಸನ್ಮಾನ್, ರೈತ ವಿದ್ಯಾನಿಧಿ, ರೈತ ಶಕ್ತಿ ಯೋಜನೆ ಸ್ಥಗಿತ ಮಾಡಿದ್ದಾರೆ. ಬರ ಪರಿಸ್ಥಿತಿಯಲ್ಲಿ ಒಂದು ರೂಪಾಯಿಯನ್ನೂ ನೀಡಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯ ಆಳುವ ನೈತಿಕತೆಯನ್ನು ಕಳೆದುಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹೆಣ್ಣುಮಕ್ಕಳಿಗೆ ಒಂದು ಲಕ್ಷ ರೂಪಾಯಿ ಕೊಡುತ್ತೇವೆ ಎಂದು ಗ್ಯಾರಂಟಿ ಕಾರ್ಡ್ ಕೊಡುತ್ತಿದ್ದಾರೆ. ಪ್ರಣಾಳಿಕೆ ಮಾಡಲಿ ಆದರೆ, ಗ್ಯಾರಂಟಿ ಕಾರ್ಡ್ ಕೊಟ್ಟು ಸುಳ್ಳು ಢೋಂಗಿ ಮಾಡುವುದಕ್ಕೆ ಶುರು ಮಾಡಿದ್ದಾರೆ. ಇವರು ಜನರಿಗೆ ಹೋಲ್ ಸೇಲ್ ಆಗಿ ಮೋಸ ಮಾಡಲು ಹೊರಟಿದ್ದಾರೆ. ಇದು ಕಾನೂನು ವಿರುದ್ಧ ಎಂದು ಗ್ಯಾರಂಟಿ ಕಾರ್ಡ್ ವಿರುದ್ಧ ಅವರು ಹರಿಹಾಯ್ದರು.

ಗ್ಯಾರೆಂಟಿಗೆ ಯಾವುದೇ ಮರ್ಯಾದೆ ಇಲ್ಲ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗ್ಯಾರೆಂಟಿ ಕಾರ್ಡ್ ಗಳಿಗೆ ಸಹಿ ಮಾಡಿ ಕೊಡುತ್ತಿದ್ದಾರೆ. ಅವರೇನು ಈ ದೇಶದ ಪ್ರಧಾನಿನಾ, ರಾಷ್ಟ್ರಪತಿನಾ, ಅವರು ಕೊಡುವ ಗ್ಯಾರೆಂಟಿಗೆ ಯಾವುದೇ ಮರ್ಯಾದೆ ಇಲ್ಲ. ಅವರು ಕೊಡುವ ಗ್ಯಾರೆಂಟಿ ಕಾರ್ಡ್ ಗಳನ್ನು ಹರಿದು ಹಾಕಿ ಎಂದು ಹೇಳಿದರು.
ಲೋಕಸಭೆಯಲ್ಲಿ 543 ಸ್ಥಾನಗಳಿವೆ. ಬಹಮತಕ್ಕೆ 272 ಸ್ಥಾನ ಬೇಕು. ಕಾಂಗ್ರೆಸ್ ಸ್ಪರ್ಧೆ ಮಾಡಿರುವುದೇ 230 ಸ್ಥಾನಗಳಿಗೆ. ಹೀಗಾಗಿ ಕಾಂಗ್ರೆಸ್ ಬಹುಮತ ಬರುವುದಿಲ್ಲ. ಕಾಂಗ್ರೆಸ್ ಗೆ 40 ಕ್ಕಿಂತ ಹೆಚ್ಚು ಸ್ಥಾನ ಸಿಗುವುದಿಲ್ಲ. ರೈತರಿಗೆ, ಬಡವರಿಗೆ, ದಲಿತರಿಗೆ ಅನ್ಯಾಯ ಮಾಡಿರುವ ಕಾಂಗ್ರೆಸ್ ರಾಜ್ಯವನ್ನು ಆಳುವ ನೈತಿಕತೆ ಕಳೆದುಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.
ಋಣ ತೀರಿಸುವ ಸಮಯ
ನಾನು ಹಲವಾರು ಪ್ರಧಾನಮಂತ್ರಿಗಳನ್ನು ನೋಡಿದ್ದೇನೆ. ನರೇಂದ್ರ ಮೋದಿಯವರು ದಿನಕ್ಕೆ 18 ಗಂಟೆ ಕೆಲಸ ಮಾಡುತ್ತಾರೆ. ಅವರು ಸಾಮಾನ್ಯ ಬಡ ಕುಟುಂಬದಿಂದ ಬಂದವರು. ಅವರಿಗೆ ಬಡತನ ಅಂದರೆ ಏನು ಅಂತ ಗೊತ್ತಿದೆ. ಅವರು ದೇಶದ 25 ಕೋಟಿ ಜನರನ್ನು ಬಡತನದಿಂದ ಮೇಲೆ ತಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಅಸಾಧ್ಯ ಎನ್ನುವುದನ್ನು ಸಾಧ್ಯ ಮಾಡಿದವರು ನರೇಂದ್ರ ಮೋದಿಯವರು, ಅವರು ಭಯೋತ್ಪಾನೆಯನ್ನು ಸಂಪೂರ್ಣ ನಿರ್ಣಾಮ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಕೊವಿಡ್ ಸಂದರ್ಭದಲ್ಲಿ ದೇಶದ 130 ಕೋಟಿ ಜನರಿಗೆ ಉಚಿತ ಲಸಿಕೆ ಕೊಟ್ಟು ಪ್ರಾಣ ಉಳಿಸಿದ್ದಾರೆ. ಅಮೇರಿಕಾ ದೇಶದಲ್ಲಿ ಒಂದು ಲಸಿಗೆ 30 ಸಾವಿರ ರೂಪಾಯಿ ಇದೆ. ನರೇಂದ್ರ ಮೋದಿಯವರು ಎಲ್ಲರಿಗೂ ಉಚಿತವಾಗಿ ಮೂರು ಬಾರಿ ಲಸಿಕೆ ಕೊಟ್ಟಿದ್ದಾರೆ. ಪ್ರಾಣ ಉಳಿಸಿದ ಅವರ ಋಣವನ್ನು ಬಿಜೆಪಿಗೆ ಮತ ಹಾಕುವ ಮೂಲಕ ತೀರಿಸಬೇಕು ಎಂದರು.
ನಾನು ಈ ಕ್ಷೇತ್ರದ ಸಂಸದನಾಗಿ ಆಯ್ಕೆಯಾಗಿ ನನ್ನ ಮೂವತೈದು ವರ್ಷದ ರಾಜಕೀಯ ಅನುಭವವನ್ನು ಈ ಕ್ಷೇತ್ರದ ಅಭಿವೃದ್ಧಿಗೆ ಮೀಸಲಿಡುತ್ತೇನೆ. ಈ ಭಾಗಕ್ಕೆ ಅನುಕೂಲವಾಗುವ ನೀರಾವರಿ ಯೋಜನೆ, ಕೈಗಾರಿಕೆಗಳನ್ನು ತರುವ ಪ್ರಯತ್ನ ಮಾಡುತ್ತೇನೆ. ಕ್ಷೇತ್ರದ ಜನರ ಧ್ವನಿಯಾಗಿ ಸಂಸತ್ತಿನಲ್ಲಿ ಸಿಂಹ ಘರ್ಜನೆ ಮಾಡುತ್ತೇನೆ ಎಂದು ಹೇಳಿದರು.
ಚುನಾವಣಾ ಪ್ರಚಾರದಲ್ಲಿ ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಸೇರಿದಂತೆ ಸ್ಥಳೀಯ ನಾಯಕರು, ಕಾರ್ಯಕರ್ತರ ಉಪಸ್ಥಿತರಿದ್ದರು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications