ಅಂಬರೀಷ್ ವಿರುದ್ಧ ರಾಹುಲ್ಗೆ ಮಂಡ್ಯ ಕಾಂಗ್ರೆಸ್ಸಿಗರ ಪತ್ರ
ಬೆಂಗಳೂರು, ಡಿ. 11: ವಸತಿ ಸಚಿವ ಅಂಬರೀಷ್ ವಿರುದ್ಧ ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರ ಕೋಪ ಮತ್ತೆ ಭುಗಿಲೆದ್ದಿದೆ. ತಮ್ಮನ್ನು ನಿಷ್ಠ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಹಿಂದ ಯುವ ವೇದಿಕೆ ಸದಸ್ಯರು ಎಂದು ಹೇಳಿಕೊಂಡು ಅಂಬರೀಷ್ ವಿರುದ್ಧ ಪಕ್ಷದ ಯುವರಾಜ ರಾಹುಲ್ ಗಾಂಧಿಗೆ ಪತ್ರ ಬರೆದು ದೂರು ನೀಡಿದ್ದಾರೆ.
ಪತ್ರದ ಜೊತೆಯಲ್ಲಿ ಅಂಬರೀಷ್ ಅವರು ಮದ್ಯ ಸೇವಿಸಿ ಬಾರ್ನಲ್ಲಿ ನರ್ತಿಸುತ್ತಿರುವುದು ಹಾಗೂ ಅಪರಿಚಿತ ಮಹಿಳೆಯರಿಗೆ ಚುಂಬಿಸುತ್ತಿರುವ ವಿಡಿಯೋ ಕಳುಹಿಸಿದ್ದಾರೆ.
ಅಂಬರೀಷ್ ಅವರು ತಮ್ಮ ಸಚಿವ ಹಾಗೂ ಶಾಸಕ ಸ್ಥಾನದ ಜವಾಬ್ದಾರಿ ನಿಭಾಯಿಸುವಂತೆ ಸೂಚನೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಪತ್ರದಲ್ಲಿ ಒಟ್ಟು 83 ಜನರ ಸಹಿ ಇದೆ. [ಬೆಳಗಾವಿಯಲ್ಲಿ ಹೇಳಿದ್ದು, ಕೇಳಿದ್ದು]

ಪಕ್ಷದಲ್ಲಿ ಏನೇನು ಬರೆದಿದೆ?:
- ಅಂಬರೀಷ್ ಅವರು ಬಾರ್ನಲ್ಲಿ ಕುಳಿತು ಮದ್ಯ ಸೇವಿಸುತ್ತ ಬೆಂಬಲಿಗರೊಂದಿಗೆ ನರ್ತಿಸಿದ್ದಾರೆ. ಅಪರಿಚಿತ ಮಹಿಳೆಯರಿಗೆ ಚುಂಬಿಸಿದ್ದಾರೆ
- ಕಲಬುರ್ಗಿಯಲ್ಲಿ ನಡೆದ ಸಂಪುಟ ಸಚಿವರ ಸಭೆಗೆ ಗೈರಾಗಿ ಬೆಂಗಳೂರಿನಲ್ಲಿ ಬೇರೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು
- ಕೆಪಿಸಿಸಿ ಅಥವಾ ಕಾಂಗ್ರೆಸ್ ಜಿಲ್ಲಾ ಕಚೇರಿಗೆ ಬರುವುದಿಲ್ಲ
- ಕುದುರೆ ರೇಸ್ನಲ್ಲಿ ಪಾಲ್ಗೊಂಡಿದ್ದ ಅಂಬರೀಷ್ರನ್ನು ಹಿಂದಿನ ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಬಹಿರಂಗವಾಗಿ ಟೀಕಿಸಿದ್ದರು
- ಸಿಂಗಪುರದಲ್ಲಿ ಚಿಕಿತ್ಸೆ ಪಡೆದ ನಂತರವೂ ದುಶ್ಚಟ ಮುಂದುವರಿಸಿದ್ದಾರೆ
- ಶಾಸಕರಾಗಿ, ಸಚಿವರಾಗಿ ತಮ್ಮ ಕರ್ತವ್ಯ ನಿರ್ವಹಿಸುತ್ತಿಲ್ಲ
- ನಿಗಮ-ಮಂಡಳಿಗೆ ನೇಮಕ ಸಂದರ್ಭ ತಮ್ಮನ್ನು ನಿರ್ಲಕ್ಷಿಸಲಾಗಿದೆ ಎಂದು ಬಹಿರಂಗವಾಗಿ ಆರೋಪಿಸಿದ್ದರು
- ಅಂಬರೀಷ್ ಅವರ ಚಟುವಟಿಕೆಗಳು ಪಕ್ಷದ ವರ್ಚಸ್ಸಿಗೆ ಧಕ್ಕೆ ತರುತ್ತಿವೆ. ವರ್ತನೆ ತಿದ್ದಿಕೊಳ್ಳುವಂತೆ ಅವರಿಗೆ ಸೂಚನೆ ನೀಡಬೇಕು.
ಅಂಬರೀಷ್ ಪ್ರತಿಕ್ರಿಯೆ: ತಮ್ಮ ಮೇಲಿನ ದೂರಿಗೆ ಸಚಿವ ಅಂಬರೀಷ್ ಬೆಳಗಾವಿಯ ವಿಧಾನಸಭೆ ಅಧಿವೇಶನದಲ್ಲಿ ಹೀಗೆ ಪ್ರತಿಕ್ರಿಯೆ ನೀಡಿದ್ದಾರೆ. [ಮಂಡ್ಯದಲ್ಲಿ ಅಂಬರೀಷ್ ರಹಸ್ಯ ಸಭೆ]
"ನಾನು ಖಾಸಗಿ ಜೀವನದಲ್ಲಿ ಡ್ಯಾನ್ಸ್ ಮಾಡಿದ್ದೇನೆ. ಸಿನಿಮಾದಲ್ಲಿ ಡ್ಯಾನ್ಸ್ ಮಾಡಿದ್ದೇನೆ, ವೇದಿಕೆ ಮೇಲೆ ಡ್ಯಾನ್ಸ್ ಮಾಡಿದ್ದೇನೆ. ನನ್ನಿಂದ ಯಾರಿಗೂ ತೊಂದರೆಯಾಗಿಲ್ಲ. 3 ಅಲ್ಲ 350 ಜತೆ ಹುಡುಗಿಯರ ಜತೆ ಓಡಾಡಿದ್ದೇನೆ".
-
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ











Click it and Unblock the Notifications