ಶಾಸಕ ಹ್ಯಾರಿಸ್ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ
Recommended Video

ಬೆಂಗಳೂರು, ಜೂನ್ 8: ರಾಜ್ಯ ಸಚಿವ ಸಂಪುಟದಲ್ಲಿ ಅವಕಾಶ ಸಿಗದ ಹಲವಾರು ಶಾಸಕರ ಬೆಂಬಲಿಗರು ಶುಕ್ರವಾರ ನಗರದ ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರಾಜ್ಯ ಸಚಿವ ಸಂಪುಟದಲ್ಲಿ ಕುರುಬರಿಗೆ ಅವಕಾಶ ಸಿಕ್ಕಿಲ್ಲ ಎಂದು ಆರೋಪಿಸಿ ರಾಜ್ಯ ಕುರುಬರ ಸಂಘ ಕರೆ ನೀಡಿದ್ದ ಸಂಘದ ಸದಸ್ಯರು ಕೆಪಿಸಿ ಕಚೇರಿ ಮುಂದೆ ಧರಣಿ ನಡೆಸಿದರು. ಮತ್ತೊಂದೆಡೆ ಶಾಂತಿನಗರ ಶಾಸಕ ಎನ್ಎ ಹ್ಯಾರಿಸ್ ಬೆಂಬಲಿಗರು ತಮ್ಮ ಕ್ಷೇತ್ರದ ಶಾಸಕರಿಗೆ ಸಚಿವ ಸ್ಥಾನ ನೀಡದಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು.
ಇದೇ ವೇಳೆ ಮೂವರು ವ್ಯಕ್ತಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆಯಿತು. ಪೊಲೀಸರು ಸಾಕಷ್ಟು ಮುಂಜಾಗ್ರತಾ ಕ್ರಮವಾಗಿ ಭದ್ರತೆ ಕೈಗೊಂಡಿದ್ದರೂ ಮೂವರು ಕಾರ್ಯಕರ್ತರು ಆತ್ಮಹತ್ಯೆಗೆ ಯತ್ನಿಸಿದರಾದರೂ ಪೊಲೀಸರು ಅದನ್ನು ವಿಫಲಗೊಳಿಸಿದರು. ಇದೇ ವೇಳೆ ಕೆಲವು ಬೆಂಬಲಿಗರು ತಲೆ ಬೋಳಿಸಿಕೊಳ್ಳುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ಪಕ್ಷದ ಮುಖಂಡರು ಹಾಗೂ ಹೈಕಮಾಂಡ್ನ ಗಮನ ಸೆಳೆಯಲು ಪ್ರಯತ್ನಿಸಿದರು. ಕಳೆದ ಮೂರು ದಿನಗಳಿಂದ ಸಚಿವ ಸಂಪುಟ ವಿಸ್ತರಣೆ ಬಳಿಕ ನಡೆಯುತ್ತಿರುವ ಧರಣಿ ಪ್ರತಿಭಟನೆಗಳು ಇಂದೂ ಕೂಡ ಮುಂದುವರೆದಿದ್ದು, ಭಿನ್ನಮತ ಶಮನಕ್ಕೆ ಪಕ್ಷದ ಮುಖಂಡರು ತೆರೆ ಮರೆಯ ಪ್ರಯತ್ನ ನಡೆಸಿದ್ದಾರೆ. ಆದರೆ ಸ್ಥಾನ ಕಳೆದುಕೊಂಡ ಶಾಸಕರ ಬೆಂಬಲಿಗರು ಮಾತ್ರ ಕೆಪಿಸಿಸಿ ಕಚೇರಿ ಎದುರು ಬಹಿರಂಗವಾಗಿಯೇ ಪ್ರತಿಭಟನೆ ನಡೆಸುವ ಮೂಲಕ ಅಸಮಾಧಾನವನ್ನು ಹೊರಹಾಕಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications