ಸರಗಳ್ಳನ ಬಳಿ ಚಿನ್ನಾಭರಣ ಲೂಟಿ, ಪೇದೆ ಜೈಲಿಗೆ!

ಕುಮಾರಸ್ವಾಮಿ ಲೇಔಟ್ ಠಾಣೆ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಿದ್ದಯ್ಯ ಬಂಧನಕ್ಕೆ ಒಳಗಾದವರು. ಜೆ.ಪಿ.ನಗರ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಸಿದ್ದಯ್ಯ ಕೆಲವು ದಿನಗಳ ಹಿಂದೆ ಕುಮಾರಸ್ವಾಮಿ ಲೇಔಟ್ ಠಾಣೆಗೆ ವರ್ಗಾವಣೆಯಾಗಿದ್ದರು. ಸಿದ್ದಯ್ಯ ಬಂಧನದ ಸಂಗತಿಯನ್ನು ದಕ್ಷಿಣ ವಿಭಾಗದ ಡಿಸಿಪಿ ರೇವಣ್ಣ ಖಚಿತ ಪಡಿಸಿದ್ದಾರೆ.
ಜೆ.ಪಿ.ನಗರ ಠಾಣೆ ವ್ಯಾಪ್ತಿಯಲ್ಲಿ ಒಂದು ವರ್ಷದ ಹಿಂದೆ ಮೂರು ಪ್ರತ್ಯೇಕ ಸರಗಳ್ಳತನ ಪ್ರಕರಣಗಳು ದಾಖಲಾಗಿದ್ದವು. ಸರ ದೋಚಿದ್ದ ಆರೋಪಿ ಮಹೇಶ ಎಂಬಾತನನ್ನು ಭೇಟಿ ಮಾಡಿದ್ದ ಸಿದ್ಧಯ್ಯ ಕದ್ದ ಸರಗಳನ್ನು ಪಡೆದಿದ್ದರು. ಯಾರಿಗೂ ಈ ವಿಷಯದ ಕುರಿತು ಮಾಹಿತಿ ನೀಡದಂತೆ ಬೆದರಿಸಿ, ಆಭರಣಗಳನ್ನು ಸ್ವಂತಕ್ಕೆ ಬಳಸಿಕೊಂಡಿದ್ದಾರೆ ಎಂಬುದು ಸಿದ್ಧಯ್ಯ ಅವರ ಮೇಲಿರುವ ಆರೋಪ.
ಬೆಳಕಿಗೆ ಬಂದಿದ್ದು ಹೇಗೆ : ಸಿದ್ದಯ್ಯ ಜೆ.ಪಿ.ನಗರ ಠಾಣೆಯಿಂದ ವರ್ಗಾವಣೆಯಾಗಿ ಬಂದರೂ, ಸರ ಅಪಹರಣ ಕುರಿತು ಜೆ.ಪಿ.ನಗರ ಪೊಲೀಸರು ತನಿಖೆ ಮುಂದುವರೆಸಿದ್ದರು. ಎರಡು ದಿನದ ಹಿಂದ ಮಹೇಶನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಸಮುಯದಲ್ಲಿ ದೋಚಿದ್ದ ಸರಗಳನ್ನು ಪೇದೆ ಸಿದ್ದಯ್ಯನಿಗೆ ನೀಡಿದ್ದಾಗಿ ಮಹೇಶ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ.'
ಈ ಕುರಿತು ಪೇದೆ ಸಿದ್ದಯ್ಯ ಅವರನ್ನು ವಿಚಾರಣೆಗೆ ಒಳಪಡಿಸಿದಾಗ, ಚಿನ್ನಾಭರಣ ಪಡೆದುಕೊಂಡಿದ್ದನ್ನು ಒಪ್ಪಿಕೊಂಡಿದ್ದಾರೆ. ಸಿದ್ದಯ್ಯನ ಬಳಿಯಿದ್ದ ಸರಗಳನ್ನು ವಶಪಡಿಸಿಕೊಂಡು ಕದ್ದ ಮಾಲನ್ನು ಅಕ್ರಮವಾಗಿ ಸ್ವೀಕರಿಸಿದ ಆರೋಪ ಹೊರಿಸಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸರಗಳನ್ನು ದೋಚಿದ್ದ ಮಹೇಶ್, ಪುರುಷೋತ್ತಮ್, ಶಿವಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಕುರಿತು ಜೆ.ಪಿನಗರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಕಳೆದ ವಾರ ಸಿದ್ಧಾಪುರದ ಪಿಎಸ್ಐ ಸೇರಿದಂತೆ ಮೂವರು ಕದ್ದ ಮಾಲನ್ನು ದುರುಪಯೋಗ ಪಡಿಸಿಕೊಂಡ ಆರೋಪದಡಿ ಬಂಧನಕ್ಕೆ ಒಳಗಾಗಿದ್ದರು. ಇನ್ನೊಂದು ಪ್ರಕರಣದಲ್ಲಿ ಇನ್ಸ್ಪೆಕ್ಟರ್ ವಿರುದ್ಧ ತನಿಖೆ ನಡೆಯುತ್ತಿದೆ. ಸದ್ಯ ಸಿದ್ದಯ್ಯ ಪ್ರಕರಣ ಪೊಲೀಸರೇ ಕಳ್ಳನನ್ನು ದೋಚಿದ ಮೂರನೇ ಪ್ರಕರಣವಾಗಿದೆ. (ಇನ್ಸ್ಪೆಕ್ಟರ್ ಮೇಲೆ ಕಳ್ಳನನ್ನೇ ದೋಚಿದ ದೂರು!)
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications