ನಾಲ್ಕು ವರ್ಷ ಸಚಿವನಾಗಿ ಕೆಲಸ ಮಾಡುತ್ತೇನೆ
ಬೆಂಗಳೂರು, ಮೇ 23 : "ಮುಂದಿನ ನಾಲ್ಕು ವರ್ಷ ನಾನು ಸಚಿವನಾಗಿ ಮುಂದುರೆಯುತ್ತೇನೆ. ಸರಿಯಾಗಿ ಕೆಲಸ ಮಾಡಿಲ್ಲ ಎಂದು ಯಾರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಸಾಧ್ಯವಿಲ್ಲ, ಹಾಗೆ ತೆಗೆದರೆ ಎಲ್ಲಾ ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ" ಎಂದು ತೋಟಗಾರಿಕಾ ಸಚಿವ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಶುಕ್ರವಾರ ಮಾವು ಮತ್ತು ಹಲಸಿನ ಮೇಳಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಸಚಿವ ಶಾಮನೂರು ಶಿವಶಂಕರಪ್ಪ, ನನ್ನನ್ನು ಸಚಿವ ಸಂಪುಟದಿಂದ ಕೈ ಬಿಡುತ್ತಾರೆ ಎಂಬುದು ಕೇವಲ ವದಂತಿ. ಮುಂದಿನ ನಾಲ್ಕು ವರ್ಷ ನಾನು ಸಚಿವನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಸರಿಯಾಗಿ ಕೆಲಸ ಮಾಡಿಲ್ಲ ಎಂದು ಸಚಿವರ ರಾಜೀನಾಮೆ ಪಡೆಯುವುದಾದದರೆ ಎಲ್ಲಾ ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿದರು. ಒಂದು ವೇಳೆ ಸಚಿವ ಸ್ಥಾನದಿಂದ ತಮ್ಮನ್ನು ವಜಾಗೊಳಿಸಿದರು ತಲೆ ಕೆಡಿಸಿಕೊಳ್ಳದೆ ಸೀದಾ ದಾವಣಗೆರೆಗೆ ಮರಳುತ್ತೇನೆ ಎಂದು ಅವರು ತಿಳಿಸಿದರು.
ಲೋಕಸಭೆ ಚುನಾವಣೆಯ ಫಲಿತಾಂಶವನ್ನು ಹೊಣೆ ಮಾಡಿ ಸಚಿವರ ರಾಜೀನಾಮೆ ನೀಡುವ ಯಾವ ನಿರ್ಧಾರವನ್ನು ಪಕ್ಷದ ಮುಂದಿಲ್ಲ. ಮಾಧ್ಯಮಗಳು ಇಂತಹ ಸುದ್ದಿಯನ್ನು ಹುಟ್ಟು ಹಾಕಿವೆ. ನಾಲ್ಕು ವರ್ಷಗಳ ಕಾಲ ನಾನು ಸಚಿವನಾಗಿಯೇ ಮುಂದುರೆಯುತ್ತೇನೆ ಎಂದರು. [ಚುನಾವಣೆ ನಂತರವೂ ನಾನೇ ಸಿಎಂ : ಸಿದ್ದರಾಮಯ್ಯ]
ದಾವಣಗೆರೆ ಕ್ಷೇತ್ರದಲ್ಲಿ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಸೋಲಿಗೆ ನರೇಂದ್ರ ಮೋದಿ ಅವರ ಅಲೆ ಕಾರಣವಾಗಿದೆ. ಹರಪನಹಳ್ಳಿ, ಹೊನ್ನಾಳಿ, ಚನ್ನಗಿರಿಯಲ್ಲಿ ಮತಗಳಿಕೆ ಕಡಿಮೆ ಆಗಿದೆ. ಆದ್ದರಿಂದ ಚುನಾವಣೆಯಲ್ಲಿ ಸೋಲಾಯಿತು ಎಂದು ಶಾಮನೂರು ಶಿವಶಂಕರಪ್ಪ ವಿಶ್ಲೇಷಿಸಿದರು. [ಮಲ್ಲಿಕಾರ್ಜುನ ಕೈತಪ್ಪಿದ ಗೆಲುವು]
ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಸರಿಯಾಗಿ ಕೆಲಸ ಮಾಡದ ಸಚಿವರಿಗೆ ಕೋಕ್ ನೀಡಿ ಹೊಸಬರಿಗೆ ಮಂತ್ರಿಸ್ಥಾನ ನೀಡಲಾಗುತ್ತದೆ ಎಂಬ ಮಾತುಗಳಿವೆ. ಸಚಿವರಾದ ಶಾಮನೂರು ಶಿವಶಂಕರಪ್ಪ, ಅಂಬರೀಶ್, ಕಿಮ್ಮನೆ ರತ್ನಾಕರ್ ಮುಂತಾದವರು ಸಚಿಸ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂಬ ಮಾತುಗಳಿವೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications