ರವೀಂದ್ರ ಕಲಾಕ್ಷೇತ್ರ ಬಂದ್ ಆಗುತ್ತಾ? ಸಮಸ್ಯೆ ಏನು?
ಬೆಂಗಳೂರು, ಮೇ 15: ರವೀಂದ್ರ ಕಲಾಕ್ಷೇತ್ರ ಬಂದ್ ಆಗಲಿದೆಯೇ ಎನ್ನುವ ಅನುಮಾನ ಎಲ್ಲರನ್ನು ಕಾಡುತ್ತಿದೆ ಅದಕ್ಕೆ ಕಾರಣವೂ ಇದೆ. ರವೀಂದ್ರ ಕಲಾಕ್ಷೇತ್ರ ಹಾಗೂ ಕನ್ನಡ ಭವನ ನವೀಕರಣ ಕಾರ್ಯ ಮುಗಿದು ಎರಡು ವರ್ಷವಾದರೂ ಗುತ್ತಿಗೆದಾರರಿಗೆ ಈವರೆಗೆ ಅನುದಾನ ಬಿಡುಗಡೆ ಮಾಡಿಲ್ಲ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿರುವ ನೊಂದ ಗುತ್ತಿಗೆದಾರರು ನಮಗೆ ಬಾಕಿ ಹಣ ಕೊಡಿ ಇಲ್ಲವೇ ಕಲಾಕ್ಷೇತ್ರ,ನಯನ ರಂಗ ಮಂದಿರಕ್ಕೆ ಬೀಗ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ರವೀಂದ್ರ ಕಲಾ ಕ್ಷೇತ್ರ ನ್ಯೂನತೆಗಳನ್ನು ಸರಿಪಡಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ತಜ್ಞರ ಸಮಿತಿ ರಚಿಸಿತು. ಸಮಿತಿ ಸಲಹೆ ಮೇರೆಗೆ 2016-17ರಲ್ಲಿ ಕಲಾಕ್ಷೇತ್ರದಲ್ಲಿ ಹಾಳಾದ ಆಸನಗಳನ್ನು ಸರಿಪಡಿಸುವುದು, ಗ್ರೀನ್ ರೂಮ್ ಮತ್ತು ವೇದಿಕೆಗಳಲ್ಲಿನ ಸ್ಕ್ರೀನ್ ಬದಲಾವಣೆ, ವೇದಿಕೆಯ ಸೈಡ್ವಿಂಗ್ಸ್ಗಳನ್ನು ದುರಸ್ತಿಪಡಿಸುವುದು, ಶೌಚಾಲಯ ಕಾಮಗಾರಿ, ಸುಣ್ಣ-ಬಣ್ಣ ಇದಷ್ಟು ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿಸಿದೆ.

ಕನ್ನಡ ಭವನದ ಅನುದಾನಕ್ಕೆ ಪ್ರಸ್ತಾವನೆಯನ್ನೇ ಸಲ್ಲಿಸಿಲ್ಲ. 2018ರಲ್ಲಿ ಕನ್ನಡ ಭವನ ನಾನಾ ಕಾಮಗಾರಿಗಳನ್ನು ಕೈಗೊಳ್ಳಲಾಯಿತು. ನಯನ ಸಭಾಂಗಣದಲ್ಲಿ ಬಾವಿಯಿದ್ದು, ಮಳೆ ಬಂದರೆ ನೀರು ಉಕ್ಕಿ ಹರಿದು ಸಭಾಂಗಣದೊಳಗೆ ಬರುತ್ತಿತ್ತು. ಅದನ್ನೂ ಕೂಡ ದುರಸ್ತಿಗೊಳಿಸಲಾಗಿದೆ. ಇಷ್ಟೆಲ್ಲಾ ಕಾಮಗಾರಿ ಮಾಡಿದರೂ ಕೂಡ ಹಣ ಮಾತ್ರ ಇನ್ನೂ ಬಿಡುಗಡೆ ಮಾಡಿಲ್ಲ. ಶೀಘ್ರಅನುದಾನ ಹಣ ಬಿಡುಗಡೆ ಮಾಡದಿದ್ದರೆ ರವೀಂದ್ರ ಕಲಾಕ್ಷೇತ್ರಕ್ಕೆ ಬೀಗ ಹಾಕುತ್ತೇವೆ ಎಂದು ಎಚ್ಚರಿಸಿದ್ದಾರೆ.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications