ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು; ಕೋವಿಡ್ ನಿಯಂತ್ರಣಕ್ಕೆ ಯೋಜನೆ ಸಿದ್ಧ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 08 : ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸತತ ಎರಡು ದಿನಗಳಿಂದ ನಗರದಲ್ಲಿ ಐದು ಸಾವಿರ ಹೊಸ ಪ್ರಕರಣಗಳು ದಾಖಲಾಗುತ್ತಿವೆ. ಬಿಬಿಎಂಪಿ ಅಧಿಕಾರಿಗಳು ವಲಯವಾರು ಸಭೆಗಳನ್ನು ನಡೆಸಿ, ಸೋಂಕಿನ ನಿಯಂತ್ರಣಕ್ಕೆ ಸಲಹೆಗಳನ್ನು ನೀಡುತ್ತಿದ್ದಾರೆ.

ಬಿಬಿಎಂಪಿಯ ಪೂರ್ವ ವಲಯದ ವ್ಯಾಪ್ತಿಯಲ್ಲಿ ಕೋವಿಡ್ ನಿಯಂತ್ರಣ ಹಾಗೂ ಸೋಂಕಿತರ ಆರೈಕೆಗೆ ಸಂಬಂಧಿಸಿದಂತೆ ಸಚಿವ ವಿ. ಸೋಮಣ್ಣ ನೇತೃತ್ವದಲ್ಲಿ ಸಭೆ ನಡೆಯಿತು. ಸೋಂಕಿನ ನಿಯಂತ್ರಣಕ್ಕೆ ಬಿಬಿಎಂಪಿ ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಲಾಯಿತು.

ಭಾರತ; 24 ಗಂಟೆಯಲ್ಲಿ 78,524 ಹೊಸ ಕೋವಿಡ್ ಪ್ರಕರಣ ಭಾರತ; 24 ಗಂಟೆಯಲ್ಲಿ 78,524 ಹೊಸ ಕೋವಿಡ್ ಪ್ರಕರಣ

ಜನಸಂದಣಿ ಹೆಚ್ಚು ಇರುವ ಕಡೆ ಹೆಚ್ಚು ಕೋವಿಡ್-19 ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಪೂರ್ವ ವಲಯದಲ್ಲಿ ಮರಣ ಪ್ರಮಾಣ ಕಳೆದ 14 ದಿನಗಳಲ್ಲಿ 0.99 ಹಾಗೂ ಒಂದು ವಾರದಲ್ಲಿ ಶೇ 0.61ಕ್ಕೆ ಇಳಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಕೋವಿಡ್ ಪರೀಕ್ಷೆ; ಹೊಸ ದಾಖಲೆ ಬರೆದ ಬಿಬಿಎಂಪಿಕೋವಿಡ್ ಪರೀಕ್ಷೆ; ಹೊಸ ದಾಖಲೆ ಬರೆದ ಬಿಬಿಎಂಪಿ

 Control Covid 19 In East Zone V Somanna Chaired The Meeting

ಸೋಂಕು ಕಾಣಿಸಿಕೊಂಡ ತಕ್ಷಣ ಸೂಕ್ತ ಆರೈಕೆಗೆ ಕ್ರಮ ಕೈಗೊಂಡರೆ ಸಾವಿನ ಪ್ರಮಾಣವನ್ನು ಕಡಿಮೆ ಮಾಡಬಹುದಾಗಿದೆ. ಇದುವರೆಗೆ ಯಾವುದೇ ಲಸಿಕೆ ಲಭ್ಯವಾಗಿಲ್ಲದ ಕಾರಣ ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ಸಭೆಯಲ್ಲಿ ಚರ್ಚೆ ನಡೆಯಿತು.

ತಲೆನೋವು ಇದೆಯೇ? ಅದು ಕೋವಿಡ್ ಲಕ್ಷಣವಾಗಿರಬಹುದು: ಹೊಸ ಅಧ್ಯಯನ ವರದಿತಲೆನೋವು ಇದೆಯೇ? ಅದು ಕೋವಿಡ್ ಲಕ್ಷಣವಾಗಿರಬಹುದು: ಹೊಸ ಅಧ್ಯಯನ ವರದಿ

ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಕುರಿತು ಜನರಿಗೆ ಅರಿವು ಮೂಡಿಸಲು ಮಾರ್ಷಲ್‌ಗಳನ್ನು ನಿಯೋಜನೆ ಮಾಡಬೇಕು. ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ವಿಧಿಸಬೇಕು ಎಂದು ಚರ್ಚೆ ನಡೆಸಲಾಯಿತು.

ಬೆಂಗಳೂರು ನಗರದ ಪೂರ್ವ, ಪಶ್ಚಿಮ ಮತ್ತು ದಕ್ಷಿಣ ವಲಯಗಳಲ್ಲಿ ಪ್ರತಿದಿನ ಹೆಚ್ಚು ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ಆದ್ದರಿಂದ, ಬಿಬಿಎಂಪಿ ಆಯುಕ್ತರು ವಲಯವಾರು ಸಭೆಗಳನ್ನು ನಡೆಸುತ್ತಿದ್ದಾರೆ.

ಬಿಬಿಎಂಪಿ ನಗರದಲ್ಲಿ ಕೋವಿಡ್ ನಿಯಂತ್ರಣಕ್ಕೆ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಿದೆ. ಬುಧವಾರ ಒಂದೇ ದಿನ ನಗರದಲ್ಲಿ 35,183 ಮಂದಿಗೆ ಪರೀಕ್ಷೆ ನಡೆಸಲಾಗಿದೆ. 5 ಸಾವಿರ ಹೊಸ ಪ್ರಕರಣಗಳು ನಗರದಲ್ಲಿ ದಾಖಲಾಗಿವೆ.

Recommended Video

Devdutt Padikkal ಆಟದ ಬಗ್ಗೆ ನನಗೆ ಗೊತ್ತಿರಲಿಲ್ಲ , ಇವನು RCBಗೆ ಸಿಕ್ಕ ವರ | Oneindia Kannada

ಬೆಂಗಳೂರು ನಗರದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 2,62,241. ಸಕ್ರಿಯ ಪ್ರಕರಣಗಳ ಸಂಖ್ಯೆ 58,624. ನಗರದಲ್ಲಿ ಇದುವರೆಗೂ 3190 ಜನರು ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ ಅತಿ ಹೆಚ್ಚು ಸೋಂಕಿತರು ಇರುವುದು ಬೆಂಗಳೂರಿನಲ್ಲಿಯೇ.

English summary
Minister V.Somanna chaired the meeting with BBMP officials of east zone to contraol Covid-19. Discussed about preparedness & strategies to contain the spread of the infection.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X