ಅಂಬೇಡ್ಕರ್ ಬಗ್ಗೆ ಅವಹೇಳನ: ವಿವರಣೆ ನೀಡುವಂತೆ ಕಾಲೇಜಿಗೆ ಬೆಂಗಳೂರು ಪೊಲೀಸರ ನೋಟಿಸ್
ಕಾಲೇಜು ಪ್ರಾಂಶುಪಾಲ ದಿನೇಶ್ ನೀಲಕಾಂತ್ ಸೇರಿದಂತೆ ಒಂಬತ್ತು ಮಂದಿಯನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿತ್ತು.
ಬೆಂಗಳೂರು, ಮಾರ್ಚ್ 07: ಫೆಬ್ರವರಿಯಲ್ಲಿ ಬೆಂಗಳೂರಿನ ಜೈನ್ ಕಾಲೇಜಿನ ವಿದ್ಯಾರ್ಥಿಗಳು ನಟಿಸಿದ್ದ ಕಿರುನಾಟಕದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತುದಲಿತ ಸಮುದಾಯವನ್ನು ಅವಮಾನ ಮಾಡಲಾಗಿತ್ತು. ಈ ಕಿರು ನಾಟಕ ಪ್ರದರ್ಶಿಸಿದ ಕುರಿತು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನಿಂದ ವಿವರಣೆ ಕೋರಿ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ.
ಕಾಲೇಜು ಪ್ರಾಂಶುಪಾಲ ದಿನೇಶ್ ನೀಲಕಾಂತ್ ಸೇರಿದಂತೆ ಒಂಬತ್ತು ಮಂದಿಯನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಫೆಬ್ರವರಿ 4 ರಂದು ಕಾಲೇಜಿನ 'ಕುಲ್-ಆಹ್!' ಫೆಸ್ಟ್ನಲ್ಲಿ ಬಿ. ಆರ್. ಅಂಬೇಡ್ಕರ್ ಮತ್ತು ದಲಿತ ಸಮುದಾಯವನ್ನು ಅವಹೇಳನ ಮಾಡುವ ಸ್ಕಿಟ್ ಅನ್ನು ಪ್ರದರ್ಶಿಸಲಾಗಿತ್ತು. ಜೈನ್ ವಿಶ್ವವಿದ್ಯಾನಿಲಯದ ಕಾಲೇಜಿನ ನಾಟಕ ತಂಡ ಡೆಲ್ರಾಯ್ಸ್ ಬಾಯ್ಸ್ ಈ ನಾಟಕ ಪ್ರದರ್ಶಿಸಿತ್ತು.

ದ ಡೆಲ್ರಾಯ್ಸ್ ಬಾಯ್ಸ್ ಎಂಬ ವಿದ್ಯಾರ್ಥಿಗಳ ಗುಂಪು ಪರಿಶಿಷ್ಟ ಜಾತಿ, ಮೀಸಲಾತಿ ಮತ್ತು ಸ್ವತಃ ಭಾರತೀಯ ಸಂವಿಧಾನದ ಪಿತಾಮಹ ಡಾ ಬಿ.ಆರ್ ಅಂಬೇಡ್ಕರ್ ಅವರನ್ನು ಅಣಕಿಸುವ ಸ್ಕಿಟ್ ಅನ್ನು ಪ್ರದರ್ಶಿಸಿದ್ದರು. ಅಸ್ಪೃಶ್ಯತ ಯಂತಹ ಗಂಭೀರ ವಿಷಯಗಳನ್ನು ಸಹ ಸ್ಕಿಟ್ನಲ್ಲಿ ಅಪಹಾಸ್ಯ ಮಾಡಲಾಗಿತ್ತು. ಈ ಬಗ್ಗೆ ಸಾರ್ವಜನಿಕರಿಂದ ಭಾರಿ ಆಕ್ರೋಶ ಉಂಟಾದ ನಂತರ ಜೈನ್ ವಿಶ್ವವಿದ್ಯಾಲಯ ಮತ್ತು ಪೊಲೀಸರು ಕ್ರಮ ಕೈಗೊಂಡಿದ್ದರು.
ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿ ತೀವ್ರ ಟೀಕೆ ವ್ಯಕ್ತವಾಗಿತ್ತು. ಸಾಮಾಜಿಕ ಹೋರಾಟಗಾರರು, ದಲಿಕತ ಸಂಘಟನೆಗಳು, ರಾಜಕೀಯ ನಾಯಕರು ಪಕ್ಷಾತೀತರಾಗಿ ಘಟನೆಯನ್ನು ಖಂಡಿಸಿದ್ದರು. ಆದರೂ ಕಿಎಉ ನಟಕ ಪ್ರದರ್ಶಿಸಿ ವಿವಾದಕ್ಕೆ ಒಳಗಾಗಿದ್ದ ಜೈನ್ ವಿಶ್ವವಿದ್ಯಾನಿಲಯದ ಕಾಲೇಜಿನ ಮ್ಯಾನೇಜ್ಮೆಂಟ್ ಸ್ಟಡೀಸ್ನ ನಾಟಕ ತಂಡ ಡೆಲ್ರಾಯ್ಸ್ ಬಾಯ್ಸ್ಗೆ ಪ್ರಥಮ ಬಹುಮಾನ ಲಭಿಸಿತ್ತು ಎಂದು ಮೂಲಗಳು ತಿಳಿಸಿವೆ.

ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿ ಸಂಘಗಳಲ್ಲಿ ಒಂದಾದ 25 ವರ್ಷದೊಳಗಿನವರು ಆಯೋಜಿಸಿದ್ದ ಮ್ಯಾಡ್ಆಡ್ಸ್ ಸ್ಪರ್ಧೆಯ ಭಾಗವಾಗಿ ಈ ನಾಟಕವನ್ನು ಪ್ರದರ್ಶಿಸಲಾಗಿತ್ತು. ಪ್ರಕರಣದಲ್ಲಿ ಚಾರ್ಜ್ಶೀಟ್ ಇನ್ನೂ ಸಲ್ಲಿಕೆಯಾಗದಿದ್ದರೂ, ಜೈನ್ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ಸ್ಟಡೀಸ್ನ ಪ್ರಿನ್ಸಿಪಾಲ್ ದಿನೇಶ್ ನೀಲಕಾಂತ್, ವಿದ್ಯಾರ್ಥಿಗಳು ಮತ್ತು ಯುವಜನೋತ್ಸವದ ಆಯೋಜಕರು ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಲಾಗಿತ್ತು. ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ












Click it and Unblock the Notifications