ಅಂಬೇಡ್ಕರ್ ಬಗ್ಗೆ ಅವಹೇಳನ: ವಿವರಣೆ ನೀಡುವಂತೆ ಕಾಲೇಜಿಗೆ ಬೆಂಗಳೂರು ಪೊಲೀಸರ ನೋಟಿಸ್
ಕಾಲೇಜು ಪ್ರಾಂಶುಪಾಲ ದಿನೇಶ್ ನೀಲಕಾಂತ್ ಸೇರಿದಂತೆ ಒಂಬತ್ತು ಮಂದಿಯನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿತ್ತು.
ಬೆಂಗಳೂರು, ಮಾರ್ಚ್ 07: ಫೆಬ್ರವರಿಯಲ್ಲಿ ಬೆಂಗಳೂರಿನ ಜೈನ್ ಕಾಲೇಜಿನ ವಿದ್ಯಾರ್ಥಿಗಳು ನಟಿಸಿದ್ದ ಕಿರುನಾಟಕದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತುದಲಿತ ಸಮುದಾಯವನ್ನು ಅವಮಾನ ಮಾಡಲಾಗಿತ್ತು. ಈ ಕಿರು ನಾಟಕ ಪ್ರದರ್ಶಿಸಿದ ಕುರಿತು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನಿಂದ ವಿವರಣೆ ಕೋರಿ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ.
ಕಾಲೇಜು ಪ್ರಾಂಶುಪಾಲ ದಿನೇಶ್ ನೀಲಕಾಂತ್ ಸೇರಿದಂತೆ ಒಂಬತ್ತು ಮಂದಿಯನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಫೆಬ್ರವರಿ 4 ರಂದು ಕಾಲೇಜಿನ 'ಕುಲ್-ಆಹ್!' ಫೆಸ್ಟ್ನಲ್ಲಿ ಬಿ. ಆರ್. ಅಂಬೇಡ್ಕರ್ ಮತ್ತು ದಲಿತ ಸಮುದಾಯವನ್ನು ಅವಹೇಳನ ಮಾಡುವ ಸ್ಕಿಟ್ ಅನ್ನು ಪ್ರದರ್ಶಿಸಲಾಗಿತ್ತು. ಜೈನ್ ವಿಶ್ವವಿದ್ಯಾನಿಲಯದ ಕಾಲೇಜಿನ ನಾಟಕ ತಂಡ ಡೆಲ್ರಾಯ್ಸ್ ಬಾಯ್ಸ್ ಈ ನಾಟಕ ಪ್ರದರ್ಶಿಸಿತ್ತು.

ದ ಡೆಲ್ರಾಯ್ಸ್ ಬಾಯ್ಸ್ ಎಂಬ ವಿದ್ಯಾರ್ಥಿಗಳ ಗುಂಪು ಪರಿಶಿಷ್ಟ ಜಾತಿ, ಮೀಸಲಾತಿ ಮತ್ತು ಸ್ವತಃ ಭಾರತೀಯ ಸಂವಿಧಾನದ ಪಿತಾಮಹ ಡಾ ಬಿ.ಆರ್ ಅಂಬೇಡ್ಕರ್ ಅವರನ್ನು ಅಣಕಿಸುವ ಸ್ಕಿಟ್ ಅನ್ನು ಪ್ರದರ್ಶಿಸಿದ್ದರು. ಅಸ್ಪೃಶ್ಯತ ಯಂತಹ ಗಂಭೀರ ವಿಷಯಗಳನ್ನು ಸಹ ಸ್ಕಿಟ್ನಲ್ಲಿ ಅಪಹಾಸ್ಯ ಮಾಡಲಾಗಿತ್ತು. ಈ ಬಗ್ಗೆ ಸಾರ್ವಜನಿಕರಿಂದ ಭಾರಿ ಆಕ್ರೋಶ ಉಂಟಾದ ನಂತರ ಜೈನ್ ವಿಶ್ವವಿದ್ಯಾಲಯ ಮತ್ತು ಪೊಲೀಸರು ಕ್ರಮ ಕೈಗೊಂಡಿದ್ದರು.
ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿ ತೀವ್ರ ಟೀಕೆ ವ್ಯಕ್ತವಾಗಿತ್ತು. ಸಾಮಾಜಿಕ ಹೋರಾಟಗಾರರು, ದಲಿಕತ ಸಂಘಟನೆಗಳು, ರಾಜಕೀಯ ನಾಯಕರು ಪಕ್ಷಾತೀತರಾಗಿ ಘಟನೆಯನ್ನು ಖಂಡಿಸಿದ್ದರು. ಆದರೂ ಕಿಎಉ ನಟಕ ಪ್ರದರ್ಶಿಸಿ ವಿವಾದಕ್ಕೆ ಒಳಗಾಗಿದ್ದ ಜೈನ್ ವಿಶ್ವವಿದ್ಯಾನಿಲಯದ ಕಾಲೇಜಿನ ಮ್ಯಾನೇಜ್ಮೆಂಟ್ ಸ್ಟಡೀಸ್ನ ನಾಟಕ ತಂಡ ಡೆಲ್ರಾಯ್ಸ್ ಬಾಯ್ಸ್ಗೆ ಪ್ರಥಮ ಬಹುಮಾನ ಲಭಿಸಿತ್ತು ಎಂದು ಮೂಲಗಳು ತಿಳಿಸಿವೆ.

ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿ ಸಂಘಗಳಲ್ಲಿ ಒಂದಾದ 25 ವರ್ಷದೊಳಗಿನವರು ಆಯೋಜಿಸಿದ್ದ ಮ್ಯಾಡ್ಆಡ್ಸ್ ಸ್ಪರ್ಧೆಯ ಭಾಗವಾಗಿ ಈ ನಾಟಕವನ್ನು ಪ್ರದರ್ಶಿಸಲಾಗಿತ್ತು. ಪ್ರಕರಣದಲ್ಲಿ ಚಾರ್ಜ್ಶೀಟ್ ಇನ್ನೂ ಸಲ್ಲಿಕೆಯಾಗದಿದ್ದರೂ, ಜೈನ್ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ಸ್ಟಡೀಸ್ನ ಪ್ರಿನ್ಸಿಪಾಲ್ ದಿನೇಶ್ ನೀಲಕಾಂತ್, ವಿದ್ಯಾರ್ಥಿಗಳು ಮತ್ತು ಯುವಜನೋತ್ಸವದ ಆಯೋಜಕರು ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಲಾಗಿತ್ತು. ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications