ಶಾಲಾ ಮಕ್ಕಳಿಗೆ ಬೈಸಿಕಲ್, ಶೂ ಮತ್ತು ಸಾಕ್ಸ್ ನೀಡುವಂತೆ ಸಮನ್ವಯ ವೇದಿಕೆ ಮನವಿ
ಬೆಂಗಳೂರು ಜುಲೈ 6: ಸರಕಾರೀ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಬೈಸಿಕಲ್, ಶೂ ಮತ್ತು ಸಾಕ್ಸ್ ನೀಡಬೇಕು ಎಂದು ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಒತ್ತಾಯಿಸಿದೆ. ಸರಕಾರೀ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಬೈಸಿಕಲ್, ಶೂ ಮತ್ತು ಸಾಕ್ಸ್ ನ್ನು ಆಯವ್ಯದಲ್ಲಿ ಮುಂಜೂರು ಮಾಡದೇ, 2022-23 ನೇ ಸಾಲಿಗೆ ಈ ಉಚಿತ ಸೌಲಭ್ಯವನ್ನು ಒದಗಿಸಲು ಸರಕಾರಕ್ಕೆ ಸಾಧ್ಯವಾಗದಿರುವುದು ನಿಜಕ್ಕೂ ವಿಷಾದನೀಯ ಹಾಗು ಖಂಡನೀಯ ಎಂದು ಸಮನ್ವಯ ವೇದಿಕೆ ಹೇಳಿದೆ.
ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯು ಸರಕಾರದ ಈ ಬೇಜವಾಬ್ದಾರಿ ನಡೆಯನ್ನು ಖಂಡಿಸಿದೆ.

ಇದು ನಮ್ಮ ಮಕ್ಕಳಿಗಾದ ಘೋರ ಅನ್ಯಾಯ. ಮಕ್ಕಳು ಗೌರವ ಮತ್ತು ಆತ್ಮಾಭಿಮಾನದಿಂದ ಸಮವಸ್ತ್ರ ಧರಿಸಿ, ಶೂ ಮತ್ತು ಸಾಕ್ಸ್ ಹಾಕಿಕೊಂಡು ಸಂವಿಧಾನ ಕೊಡಮಾಡಿದ ಉಚಿತ ಹಾಗು ಕಡ್ಡಾಯ ಶಿಕ್ಷಣದ ಹಕ್ಕನ್ನು ಪಡೆದ ಹೆಮ್ಮೆಯಲ್ಲಿ ತಲೆಯೆತ್ತಿ ಶಾಲೆಗೆ ಹೋಗುತ್ತಿದ್ದರು. ಆ ಮೂಲಕ ಕನ್ನಡ ಶಾಲೆಗಳಲ್ಲಿ ಮಕ್ಕಳು ಉಳಿದ ಖಾಸಗಿ ಶಾಲೆಗಳ ಮಕ್ಕಳಂತೆಯೇ ಸ್ವಾಭಿಮಾನದ ಗೌರವಯುತ ಕಲಿಕಾ ವಾತಾವರಣದಲ್ಲಿ ಕಲಿಯುವ ಭೂಮಿಕೆಯನ್ನು ಸಂವಿಧಾನದ ಮೂಲಭೂತ ಹಕ್ಕು ಒದಗಿಸಿತ್ತು. ಅವರ ಶೂ ಮತ್ತು ಸಾಕ್ಸ್ ಹಾಗೂ ಬೈಸಿಕಲ್ ಹಕ್ಕನ್ನು ಕಸಿದಿರುವ ಸರ್ಕಾರ, ಮಕ್ಕಳು ಬರಿಗಾಲಿನಲ್ಲಿ ಹೋಗುವಂತೆ ಮಾಡಿದೆ.
ಇದು ನಮ್ಮ ಸಂವಿಧಾನಬದ್ಧ ಹಕ್ಕಿನ ಉಲ್ಲಂಘನೆ. ಮಕ್ಕಳ ಸ್ವಾಭಿಮಾನ ಮತ್ತು ಆತ್ಮಸ್ಥೈರ್ಯ ಕುಗ್ಗಿಸುವ ನಡೆ. ಇದು ಸರಕಾರೀ ಶಾಲೆಗಳ ಮಕ್ಕಳಲ್ಲಿ ಮತ್ತಷ್ಟು ಕೀಳಿರಿಮೆ ಬೆಳೆಸಿ ಶಿಕ್ಷಣದ ಆಸಕ್ತಿಯನ್ನು ತಗ್ಗಿಸುತ್ತದೆ. ಸರಕಾರೀ ಶಾಲೆಗಳು ಮತ್ತಷ್ಟು ದುರ್ಬಲವಾಗುತ್ತವೆ.

ಕೂಡಲೇ ಸರಕಾರ ಮಕ್ಕಳಿಗೆ ಸಂವಿಧಾನ ದತ್ತವಾಗಿ ಸಿಕ್ಕಿರುವ ಮೂಲಭೂತ ಹಕ್ಕನ್ನು ಗೌರವಿಸಿ, ಉಚಿತ ಶೂ ಮತ್ತು ಸಾಕ್ಸ್ ಹಾಗು ಬೈಸಿಕಲ್ ವಿತರಣೆಗೆ ಕ್ರಮವಹಿಸಬೇಕೆಂದು ಸಮನ್ವಯ ವೇದಿಕೆಯ ಮಹಾ ಪೋಷಕರಾದ ನಿರಂಜನಾರಾಧ್ಯ.ವಿ.ಪಿ. ಅವರು ಆಗ್ರಹಪೂರ್ವಕವಾಗಿ ಒತ್ತಾಯಿಸಿದ್ದಾರೆ.
Recommended Video
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications