ಕಾರಿಗಾಗಿ ಚಾಲಕನನ್ನು ಜೀವಂತವಾಗಿ ಸುಟ್ಟಿದ್ದ ಆರೋಪಿ ಮೇಲೆ ಫೈರಿಂಗ್
ಬೆಂಗಳೂರು, ಮೇ 21: ಇನ್ನೋವಾ ಕಾರಿಗಾಗಿ ಚಾಲಕನನ್ನು ಜೀವಂತವಾಗಿ ಸುಟ್ಟಿದ್ದ ಆರೋಪಿ ಮೇಲೆ ಪೊಲೀಸರು ಇಂದು ಬೆಳಗ್ಗೆ ಫೈರಿಂಗ್ ಮಾಡಿದ್ದಾರೆ.
ಸೋಮವಾರ ನೆಲಮಂಗಲ ತಾಲೂಕಿನ ಮಲ್ಲರಬಾಣವಾಡಿಯಲ್ಲಿ ಹೆಬ್ಬಗೋಡಿ ಮೂಲದ ಕೆಂಪೇಗೌಡನನ್ನು ಕೊಲೆ ಮಾಡಿದ್ದರು.
ಬನ್ನೇರುಘಟ್ಟ ರಸ್ತೆಯಲ್ಲಿ ರೌಡಿ ಶೀಟರ್ ಮೇಲೆ ಫೈರಿಂಗ್
ನೆಲಮಂಗಲ ಸಿಪಿಐ ಅನಿಲ್ ಕುಮಾರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಆರೋಪಿ ಹೇಮಂತ್ ಸಾಗರ್ ಹಾಗೂ ವಿನೋದ್ ಕುಮಾರ್ ನನ್ನು ಸೆರೆಹಿಡಿಯಲು ಹೋಗಿದ್ದಾರೆ. ಈ ವೇಳೆ ಆರೋಪಿಗಳು ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಆತ್ಮ ರಕ್ಷಣೆಗಾಗಿ ಫೈರಿಂಗ್ ಮಾಡಿದ್ದಾರೆ.
ರೌಡಿ ಲಕ್ಷ್ಮಣ ಕೊಲೆಯ ಪ್ರಮುಖ ಆರೋಪಿ ಮೇಲೆ ಪೊಲೀಸ್ ಫೈರಿಂಗ್
ಆರೋಪಿಗಳು ಶೋಕಿ ಮಾಡಲು ಓಲಾ ಕಂಪನಿ ಮೂಲಕ ಇನೋವಾ ಕಾರು ಬುಕ್ ಮಾಡಿದ್ದರು. ನಂತರ ಮೃತ ಕೆಂಪೇಗೌಡನ ಬಳಿ ಕಾರಿನ ಡಾಕ್ಯುಮೆಂಟ್ ಸಹಿ ಪಡೆದಿದ್ದರು. ಖಾಸಗಿ ಆಸ್ಪತ್ರೆಗೆ ಗ್ರಾಮಾಂತರ ಎಎಸ್ಪಿ ಸಜೀತ್ ಭೇಟಿ ನೀಡಿದ್ದಾರೆ. ಇಬ್ಬರು ಆರೋಪಿಗಳು ಇನೋವಾ ಕಾರು ಕಳ್ಳತನಕ್ಕೆ ಕೊಲೆ ಮಾಡಿದ್ದರು.