'ಜೋಕೆ ಸರಗಳ್ಳರಿದ್ದಾರೆ ಜೋಕೆ' ಪೇದೆಯ ಯೂಟ್ಯೂಬ್ ಸಾಂಗ್ ವೈರಲ್
ಬೆಂಗಳೂರು, ಆಗಸ್ಟ್ 18: ನಗರದಲ್ಲಿ ಹೆಚ್ಚಾಗಿರುವ ಸರಗಳ್ಳರ ಹಾವಳಿ ತಡೆಯಲು ಬೈಯಪ್ಪನಹಳ್ಳಿ ಪೊಲೀಸ್ ಕಾನ್ಸ್ಟೇಬಲ್ ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದಾರೆ.
ಬೈಯಪ್ಪನಹಳ್ಳಿ ಠಾಣೆ ಪೋಲೀಸ್ ಕಾನ್ಸ್ಟೇಬಲ್ ಸುಬ್ರಹ್ಮಣ್ಯ ಶಾನುಭೋಗ ಸರಗಳ್ಳರ ಬಗೆಗೆ ಜನರಲ್ಲಿ ಜಾಗೃತಿ ಮೂಡಿಸಲು ತಾವು ಖುದ್ದು ಹಾಡೊಂದನ್ನು ರಚಿಸಿ ಹಾಡಿರುವುದಲ್ಲದೆ ಅದನ್ನು ಯುಟ್ಯೂಬ್ ನಲ್ಲಿ ಅಪ್ ಮಾಡಿದ್ದಾರೆ.
ಅವರು ಹಾಡಿರುವ 'ಜೋಕೆ ಸರಗಳ್ಳರಿದ್ದಾರೆ ಜೋಕೆ' ಎನ್ನುವ ಹಾಡು ಯೂಟ್ಯೂಬ್ಗೆ ಅಪ್ಲೋಡ್ ಆಗಿದ್ದು, ಎರಡನೇ ದಿನದಲ್ಲಿ ಸುಮಾರು 17 ಸಾವಿರ ಮಂದಿ ವೀಕ್ಷಿಸಿದ್ದಾರೆ.
ನೀವು ಹುಷಾರಾಗಿದ್ರೆ ಓಕೆ, ಆದರೆ ಸರಗಳ್ಳತನದ ಬಗ್ಗೆ ಮುಂಜಾಗ್ರತೆ ಇಲ್ಲ ಯಾಕೆ?
— BengaluruCityPolice (@BlrCityPolice) August 17, 2018
ಕೇಳಿರಿ, ನಮ್ಮ ಪೊಲೀಸ್ ಸಿಬ್ಬಂದಿಯ ಹಾಡು...ನಿಮ್ಮೆಲ್ಲರ ಸರಗಳ ಜೋಪಾನಕೆ!
Chain Snatching Awareness song https://t.co/ssGqvaK5ZJ via @YouTube
ಬೆಂಗಳೂರಿನಲ್ಲಿ ಇತ್ತೀಚೆಗೆ ಸರಗಳ್ಳರ ಹಾವಳಿ ವಿಪರೀತವಾಗಿದೆ. ಇದು ಪೋಲೀಸ್ ಇಲಾಖೆಗೆ ಸಹ ತಲೆನೋವಾಗಿದ್ದು ಕಳ್ಳರ ಹಿಡಿಯಲು ಅವರು ನಾನಾ ರೀತಿಯಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಇದೊಂದು ನೂತನ ಪ್ರಯತ್ನವಾಗಿದೆ.

ಸುಬ್ರಹ್ಮಣ್ಯ ಈ ಹಾಡನ್ನು ತಾವೇ ರಚಿಸಿ ಆಗಸ್ಟ್ 15ರಂದು ಯೂಟ್ಯೂಬ್ನಲ್ಲಿ ಹಾಕಿದ್ದರು. ಅಂಗಡಿಗೆ ಹೋದ ಮಹಿಳೆಯರು, ವಿಹಾರಕ್ಕೆ ತೆರಳುವವರು, ಮನೆಮುಂದೆ ರಂಗೋಲಿ ಹಾಕುವವರು ಪ್ರಮುಖರು ಗುರಿಗಳು, ಪೊಲೀಸರು ಜಾಹೀರಾತು ಮೂಲಕ ಜಾಗೃತಿ ಮೂಡಿಸುತ್ತಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಅಂತೆಯೇ ಜನರು ತಮ್ಮ ಆಭರಣಗಳ ಪ್ರದರ್ಶನವನ್ನೂ ಕಡಿಮೆ ಮಾಡಿಲ್ಲ.
ಚಲನಚಿತ್ರ ಗೀತೆ ಸಂಯೋಕ ಬಿ.ಆರ್. ಹೇಮಂತ್ ಕುಮಾರ್ ಸಂಗೀತ ನೀಡಿದ್ದಾರೆ, ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ವೆಂಕಟೇಶ್, ರೇವಣ್ಣ, ಆಂಜಿನಪ್ಪ, ವಿಕ್ರಂ, ಮುರಳಿ, ಕುಮಾರ್ ಸರ್ಕಾರಿ ಶಾಲೆಯ ಮಕ್ಕಳು ಈ ಹಾಡಿಗೆ ನೃತ್ಯ ಮಾಡಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications