ಜೆಪಿ ನಗರದ ಗಣೇಶನಿಗೆ ಮುಸುಕಿನ ಜೋಳ, ಸೊಪ್ಪು ಅಲಂಕಾರ
ಬೆಂಗಳೂರು, ಸೆಪ್ಟೆಂಬರ್ 09: ಗಣೇಶ ಚತುರ್ಥಿಯ ಪ್ರಯುಕ್ತ ಜೆಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ ಮುಸುಕಿನ ಜೋಳ, ಸೊಪ್ಪುಗಳು ಹಾಗೂ ಹೂವುಗಳನ್ನು ಬಳಸಿಕೊಂಡು ವಿಶೇಷ ಆಲಂಕಾರವನ್ನು ಮಾಡಲಾಗಿದೆ ಎಂದು ಶ್ರೀ ಸತ್ಯ ಗಣಪತಿ ಶಿರಡಿ ಸಾಯಿ ಟ್ರಸ್ಟ್ನ ಟ್ರಸ್ಟಿ ರಾಮ್ ಮೋಹನ ರಾಜ್ ತಿಳಿಸಿದ್ದಾರೆ. ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಪ್ರತಿ ಬಾರಿಯೂ ವಿಶೇಷ ಆಲಂಕಾರ ಹಾಗೂ ವಿಶೇಷ ಸಾಮಗ್ರಿಗಳನ್ನು ಬಳಸಿಕೊಂಡು ಗಣೇಶ ಮೂರ್ತಿಯನ್ನು ತಯಾರಿಸುವ ಮೂಲಕ ದೇಶದ ಗಮನವನ್ನ ಈ ದೇವಸ್ಥಾನ ಸೆಳೆಯುತ್ತಿತ್ತು. ಕರೋನಾ ಸಾಂಕ್ರಾಮಿಕ ಕಾರಣ ಕಳೆದ ವರ್ಷವೂ ಹೆಚ್ಚಿನ ಆಲಂಕಾರವಿಲ್ಲದೆ ಹಬ್ಬವನ್ನು ಆಚರಿಸಲಾಗಿತ್ತು. ಈ ಬಾರಿ ಸ್ವಲ್ಪ ಮಟ್ಟಿಗೆ ಕರೋನಾ ಮಹಾಮಾರಿ ಕಡಿಮೆ ಆಗಿರುವ ನಿಟ್ಟಿನಲ್ಲಿ, ಹಾಗೂ ಲಸಿಕಾ ಕಾರ್ಯವೂ ನಡೆದಿರುವ ನಿಟ್ಟಿನಲ್ಲಿ ವಿಶೇಷ ಆಲಂಕಾರವನ್ನು ಏರ್ಪಡಿಸಲಾಗಿದೆ.

ದೇವಸ್ಥಾನದಲ್ಲಿ ಇರುವ ಮೂರ್ತಿಗೆ ವಿಶೇಷ ಆಲಂಕಾರ
ಪ್ರತ್ಯೇಕವಾಗಿ ಮೂರ್ತಿಯನ್ನು ಪ್ರತಿಷ್ಠಾಪಿಸದೇ ದೇವಸ್ಥಾನದಲ್ಲಿ ಇರುವ ಮೂರ್ತಿಗೆ ವಿಶೇಷ ಆಲಂಕಾರ ಮಾಡಲಾಗಿದೆ. ಮುಸುಕಿನ ಜೋಳ, ತರೇವಾರಿ ಹೂವುಗಳು ಹಾಗೂ ಸೊಪ್ಪುಗಳನ್ನು ಬಳಸಿಕೊಂಡು ಆಲಂಕಾರ ಮಾಡಲಾಗಿದೆ. ನಮ್ಮ ದೇವಸ್ಥಾನದ ಸಿಬ್ಬಂದಿಗಳು ಸಂಪೂರ್ಣ ಲಸಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ರಾಮ್ ಮೋಹನ ರಾಜ್ ತಿಳಿಸಿದರು.

ಪುಟ್ಟೇನ ಹಳ್ಳಿಯ ಶ್ರೀ ಸತ್ಯ ಗಣಪತಿ ಶಿರಡಿ ಸಾಯಿ ಟ್ರಸ್ಟ್
ಪ್ರತಿಬಾರಿಯೂ ಭಕ್ತರಿಗೆ ಹೊಸದನ್ನು ನೀಡಬೇಕು ಎನ್ನುವ ಉದ್ದೇಶ ಹೊಂದಿರುವ ಜೆಪಿ ನಗರದ ಪುಟ್ಟೇನ ಹಳ್ಳಿಯ ಶ್ರೀ ಸತ್ಯ ಗಣಪತಿ ಶಿರಡಿ ಸಾಯಿ ಟ್ರಸ್ಟ್, ಅದಕ್ಕೂ ಮುನ್ನ ಕಬ್ಬನ್ನು ಬಳಸಿ ಗಣಪನ ಮೂರ್ತಿಯನ್ನು ನಿರ್ಮಿಸಲಾಗಿತ್ತು ಹಾಗೂ ಅದಕ್ಕೂ ಹಿಂದಿನ ವರ್ಷ 400 ಕೆಜಿ ಹತ್ತಿ ಬಳಸಿ ಬೃಹತ್ ಗಣಪನ ಮೂರ್ತಿಯನ್ನು ನಿರ್ಮಿಸಲಾಗಿತ್ತು.

ತೆಂಗಿನ ಕಾಯಿ ಗಣೇಶ
ತೆಂಗಿನ ಕಾಯಿ ಗಣೇಶ: 2019ರಲ್ಲಿ30 ಅಡಿ ಎತ್ತರದ ಪರಿಸರ ಸ್ನೇಹಿ ತೆಂಗಿನ ಕಾಯಿಯಿಂದ ನಿರ್ಮಿಸಲಾಗುವ "ತೆಂಗಿನ ಕಾಯಿ ಗಣೇಶ" ಮೂರ್ತಿ ನಿರ್ಮಿಸಿತ್ತು. 9 ಸಾವಿರ ತೆಂಗಿನ ಕಾಯಿ ಹಾಗೂ 3 ಸಾವಿರ ಏಳನೀರು ಬಳಸಿ 30 ಎತ್ತರದ ಗಣಪತಿಯನ್ನು ನಿರ್ಮಿಸಲಾಗಿತ್ತು. ಗಣೇಶ ಮೂರ್ತಿ ನಿರ್ಮಾಣಕ್ಕೆ 50 ಮಂದಿ ಕಳೆದ 21 ದಿನಗಳಿಂದ ಕೆಲಸ ಮಾಡಿದ್ದರು.

ಪರಿಸರ ಸ್ನೇಹಿಯಾಗಿ ಆಚರಣೆ
ಕಬ್ಬು ಗಣೇಶ: ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ದೃಷ್ಟಿಯಿಂದ ಈ ಬಾರಿ 30 ಅಡಿ ಎತ್ತರದ ಕಬ್ಬಿನಲ್ಲಿಯೇ ನಿರ್ಮಿಸಲಾಗಿರುವ ಗಣೇಶ ಮೂರ್ತಿ ನಿರ್ಮಿಸಲಾಗಿತ್ತು. 50 ಟನ್ ಕಬ್ಬನ್ನು ಬಳಸಲಾಗಿದ್ದು, 50 ಕ್ಕೂ ಹೆಚ್ಚು ಕಾರ್ಮಿಕರು ಈ ಗಣಪತಿಯನ್ನು ನಿರ್ಮಿಸಲು ಹಗಲಿರುಳು ಶ್ರಮಿಸಿದ್ದರು. ಜೊತೆಗೆ ಪ್ರಪ್ರಥಮ ಬಾರಿಗೆ ಜೆಪಿ ನಗರದ ಪುಟ್ಟೇನಹಳ್ಳಿಯಲ್ಲಿರುವ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ 4 ಸಾವಿರ ಕೆಜಿ ತೂಕದ ಬೃಹದಾಕಾರದ ಲಾಡು ನಿರ್ಮಿಸಲಾಗಿತ್ತು.

ದೇವಸ್ಥಾನದಲ್ಲಿ ಮಾತ್ರೆ ಅಲಂಕಾರ
ಮಾತ್ರೆ ಅಲಂಕಾರ: ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ದ ಹೋರಾಟದಲ್ಲಿ ಪ್ರಮುಖವಾಗಿ ಬಳಕೆ ಆಗಿರುವಂತಹ ವಸ್ತುಗಳಾದ ಮಾಸ್ಕ್, ಪ್ಯಾರಾಸಿಟಮಾಲ್, ವಿಟಮಿನ್ ಸಿ, ಆಲ್ಕಾಫ್, ಬಿ ಕಾಂಫ್ಲೆಕ್ಸ್ ನಂತಹ ಮಾತ್ರೆಗಳನ್ನೇ ಬಳಸಿಕೊಂಡು ಬೇರೆ ಯಾರೂ ಮಾಡದಂತಹ ವಿಶಿಷ್ಟವಾದ ಆಲಂಕಾರವನ್ನು ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ ಮಾಡಲಾಗಿತ್ತು. ಜುಲೈ 24, 2021ರಿಂದ ಒಂದು ವಾರಗಳ ಕಾಲ ಈ ಆಲಂಕಾರ ದರ್ಶನಕ್ಕೆ ಮುಕ್ತವಾಗಿತ್ತು. ನಂತರ ಬಡಜನರಿಗೆ ಉಚಿತವಾಗಿ ಹಂಚಲಾಯಿತು ಎಂದು ಶ್ರೀ ಸತ್ಯ ಗಣಪತಿ ಶಿರಡಿ ಸಾಯಿ ಟ್ರಸ್ಟ್ನ ಟ್ರಸ್ಟಿ ರಾಮ್ ಮೋಹನ ರಾಜ್ ತಿಳಿಸಿದರು.

ಬಡಜನರಿಗೆ ಉಚಿತವಾಗಿ ಹಂಚಲಾಯಿತು
ಅಪಾರ ವೆಚ್ಚ ಮಾಡಿ ಮಾಡುವ ಆಲಂಕಾರ ಜನರಿಗೆ ಉಪಯೋಗವಾಗುವಂತಿರಬೇಕು ಹಾಗೂ ವಿಭಿನ್ನವಾಗಿರಬೇಕು ಎನ್ನುವ ಉದ್ದೇಶದಿಂದ ಕರೋನಾ ವಿರುದ್ದದ ಹೋರಾಟದಲ್ಲಿ ಪ್ರಮುಖವಾಗಿ ಬಳಸಲಾಗುತ್ತಿರುವ ವಸ್ತುಗಳನ್ನು ಬಳಸಿಕೊಂಡು ಆಲಂಕಾರ ಮಾಡಲಾಗಿದೆ. ಈ ಆಲಂಕಾರದಲ್ಲಿ ಬಳಸಿಕೊಂಡಿರುವ ಎಲ್ಲಾ ಔಷಧ ಹಾಗೂ ರೇಷನ್ ಕಿಟ್ನ ಪದಾರ್ಥಗಳನ್ನು ಮಾನವರು, ಹಸುಗಳು ಹಾಗೂ ನಾಯಿಗಳಿಗೆ ದಾನದ ರೂಪದಲ್ಲಿ ನೀಡಲಾಗಿದೆ. ರೇಷನ್ ಕಿಟ್ ವಸ್ತುಗಳಾದ ಅಕ್ಕಿ, ಬೇಳೆ ಗೋಧಿ ಹಿಟ್ಟು, ಮೈದಾ ಹಿಟ್ಟು, ಸಕ್ಕರೆ, ಉಪ್ಪು, ರವೆ, ಎಣ್ಣೆ, ಈರುಳ್ಳಿ, ಮೆಕ್ಕೆ ಜೋಳ, ಬಿಸ್ಕತ್, ತೆಂಗಿನಕಾಯಿ ಎಲ್ಲವನ್ನು ದಾನವಾಗಿ ನೀಡಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications