ಕೊರೋನಾ ನೆಪದಲ್ಲಿ 10 ಸಾವಿರ ಕೋಟಿಯ ಬೃಹತ್ ಹಗರಣ: ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ

ಬೆಂಗಳೂರು, ಅ. 22: ಕೊರೊನಾ ನೆಪದಲ್ಲಿ ಸುಮಾರು 10 ಸಾವಿರ ಕೋಟಿಗಳಷ್ಟು ಬೃಹತ್ ಹಗರಣವನ್ನು ರಾಜ್ಯ ಬಿಜೆಪಿ ಸರ್ಕಾರ ನಡೆಸಿದೆ. ಅಲ್ಲದೇ ಹೋಮ್ ಐಸೋಲೇಷನ್ ಇರುವವರಿಗೆ ಕಿಟ್ ನೀಡಲಾಗುವುದು ಎಂದು ಹೇಳಿ ಯಾವುದೇ ಕಿಟ್ ನೀಡಿಲ್ಲ ಆದರೆ ಕಿಟ್ ನೀಡಲಾಗಿದೆ ಎಂದು ಸುಮಾರು ₹150 ಕೋಟಿ ಹಣ ದೋಚಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಆರೋಪಿಸಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ, ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ, ಮುಖ್ಯ ವಕ್ತಾರ ಶರತ್ ಖಾದ್ರಿ ಇದ್ದರು.

ಗುರುವಾರ ನಗರದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಕಾಲ್ ಸೆಂಟರ್‌ಗಳ ಮೂಲಕ ಸೋಂಕಿತರಿಗೆ ಕರೆ ಮಾಡಲು ಸರ್ಕಾರವೇ ತಿಳಿಸಿರುವಂತೆ ₹69 ನೀಡಲಾಗುತ್ತಿದೆ. ಸುಮ್ಮನೆ ಅಂದಾಜು ಲೆಕ್ಕ ಹಾಕಿದರೂ 8 ಲಕ್ಷ ಜನರಿಗೆ 5 ಬಾರಿ ಕರೆ ಮಾಡಲು ನೂರಾರು ಕೋಟಿ ವ್ಯಯಿಸಲಾಗಿದೆ. ಹೆಚ್ಚುವರಿಯಾಗಿ 50 ರೂ ನೀಡಿ ಹಣ ದೋಚಲಾಗಿದೆ ಎಂದು ಹೇಳಿದರು.

Corona pandemic Scam of ₹ 10,000 cr By BJP govt: Prithvi Reddy,

ದೀಪಾವಳಿ ಮತ್ತು ದಸರಾ ಹಬ್ಬಕ್ಕೆ ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಂಪರ್ ಕೊಡುಗೆ ನೀಡುತ್ತಿದ್ದು 3 ನೇ ಸ್ಥಾನದಿಂದ 2 ನೇ ಸ್ಥಾನಕ್ಕೆ ಕೊಂಡೊಯ್ಯಲಿದ್ದಾರೆ ಎಂದು ವ್ಯಂಗ್ಯವಾಡಿದರು.

Recommended Video

      CSK ತಂಡದ DJ Bravo ಇನ್ನುಳಿದ ಪಂದ್ಯದಲ್ಲಿ ಆಗೋದಿಲ್ಲ , ಏಕೆ | Oneindia Kannada

      ದೆಹಲಿ ಮಾದರಿಯನ್ನು ಅನುಸರಿಸಿ ಎಂದು ಸ್ವತಃ ಪ್ರಧಾನಿಗಳೇ ಹೇಳಿದ್ದರೂ ನಮ್ಮ ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡಿತು. ವೈಯಕ್ತಿಕವಾಗಿ ನಾನೇ ನಮ್ಮ ರಾಜ್ಯದ ಆರೋಗ್ಯ ಮಂತ್ರಿಗಳಿಗೆ ಕರೆ ಮಾಡಿ, ವಾಟ್ಸ್‌ಆ್ಯಪ್ ಸಂದೇಶ ಕಳುಹಿಸಿದರು ಸ್ಪಂದಿಸಲಿಲ್ಲ ಎಂದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+