ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆಎಸ್​ಆರ್​ಟಿಸಿ ಬಸ್‌ನಲ್ಲಿ ಪ್ರಯಾಣಿಸಿದ ಇಬ್ಬರಿಗೆ ಕೊರೊನಾ ಸೋಂಕು

|
Google Oneindia Kannada News

ಬೆಂಗಳೂರು, ಮಾರ್ಚ್ 28: ಕೊರೊನಾ ರಾಜ್ಯದಲ್ಲಿ ಮೂರನೇ ಹಂತಕ್ಕೆ ಬಂದು ತಲುಪಿದೆ. ಇಷ್ಟು ದಿನ ಕೇವಲ ವಿದೇಶದಿಂದ ಬಂದವರು ಅವರ ಕುಟುಂಬದವರಲ್ಲಿ ಕಾಣಿಸಿಕೊಳ್ಳುತ್ತಿದ್ದ ಸೋಂಕು ಇದೀಗ ವಿದೇಶದಿಂದ ಬಂದವರ ಸಂಪರ್ಕವಿಲ್ಲದೇ ಇರುವವರಲ್ಲೂ ಕಾಣಿಸಿಕೊಳ್ಳಲು ಆರಂಭಿಸಿದೆ.

ಕೇರಳದಲ್ಲಿ ಕೊರೊನಾ ವೈರಸ್‌ಗೆ ಮೊದಲ ಸಾವು ಕೇರಳದಲ್ಲಿ ಕೊರೊನಾ ವೈರಸ್‌ಗೆ ಮೊದಲ ಸಾವು

ಕೆಎಸ್‌ಆರ್‌ಟಿಸಿಯಲ್ಲಿ ಮಂಗಳೂರು ಹಾಗೂ ದಾವಣಗೆರೆಗೆ ಪ್ರಯಾಣಿಸಿದ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.ಮಾ. 18 ಮತ್ತು ಮಾ. 21ರಂದು ಬೆಂಗಳೂರಿನಿಂದ ದಾವಣಗೆರೆ ಮತ್ತು ಮಂಗಳೂರಿಗೆ ಪ್ರಯಾಣಿಸಿದ್ದ ಇಬ್ಬರಿಗೆ ಕೊರೋನಾ ಸೋಂಕು ತಗುಲಿರುವುದರಿಂದ ಆ ಬಸ್​ ನಂಬರ್ ನೀಡುವ ಮೂಲಕ ಅದರಲ್ಲಿ ಪ್ರಯಾಣಿಸಿರುವ ಜನರು ತಕ್ಷಣವೇ ಸ್ಥಳೀಯ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಳ್ಳಲು ಸಾರಿಗೆ ಸಂಸ್ಥೆ ಸೂಚಿಸಿದೆ.

ಮಾ. 18ರಂದು KA 57 F 3802 ಬಸ್ ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಿಂದ ದಾವಣಗೆರೆಗೆ ಹೊರಟಿತ್ತು. ಈ ಬಸ್​ನಲ್ಲಿ ಕೆಂಪೇಗೌಡ ಬಸ್ ನಿಲ್ದಾಣದಿಂದ ಹೊರಟಿದ್ದ ಪ್ರಯಾಣಿಕನಿಗೆ ಕೊರೋನಾ ಸೋಂಕು ತಗುಲಿದೆ.

Corona Confirmed Who Traveled In KSRTC Bus

ಮಾ. 21ರಂದು KA 19 F 3329 ಬಸ್​ನಲ್ಲಿ ಸಂಜೆ 4.30ಕ್ಕೆ ಬೆಂಗಳೂರಿನಿಂದ ಮಂಗಳೂರಿಗೆ ಹೊರಟಿದ್ದ ಪ್ರಯಾಣಿಕನಿಗೂ ಸೋಂಕು ದೃಢಪಟ್ಟಿದೆ. ಈ ಎರಡು ಬಸ್​ಗಳಲ್ಲಿ ಪ್ರಯಾಣಿಸಿದವರು ಕೂಡಲೇ ಹತ್ತಿರದ ಜಿಲ್ಲಾಸ್ಪತ್ರೆಗೆ ತೆರಳಿ, ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಲು ಸಾರಿಗೆ ನಿಗಮ ಸೂಚನೆ ನೀಡಿದೆ.

ಈ ಬಗ್ಗೆ ಕೆಎಸ್​ಆರ್​ಟಿಸಿ ತನ್ನ ಟ್ವಿಟ್ಟರ್​ ಖಾತೆಯಲ್ಲಿ ಟ್ವೀಟ್ ಕೂಡ ಮಾಡಿದೆ.

English summary
One Who Traveled Bengaluru To Mangaluru, another one Bengaluru To Davanagere In KSRTC bus Both are infected To Coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X