CoronaVirus Effect: ಬೆಂಗಳೂರಲ್ಲಿ ಡ್ರಿಂಕ್ ಆಂಡ್ ಡ್ರೈವ್ ಪರೀಕ್ಷೆ ಸ್ಥಗಿತ!
Recommended Video
ಬೆಂಗಳೂರು, ಫೆಬ್ರವರಿ.09: ಚೀನಾದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಕೊರೊನಾ ವೈರಸ್ ಭೀತಿ ರಾಜ್ಯ ರಾಜಧಾನಿ ಬೆಂಗಳೂರಿನವರೆಗೂ ಬಂದು ತಲುಪಿದೆ. ಸಿಲಿಕಾನ್ ಸಿಟಿಯಲ್ಲಿ ಮಾರಕ ರೋಗದ ಅಪಾಯ ಜನರನ್ನು ಆತಂಕಕ್ಕೆ ದೂಡಿದೆ.
ಬೆಂಗಳೂರಿನಲ್ಲಿ ಕೊರೊನಾ ವೈರಸ್ ಹರಡುವಿಕೆಯ ಭೀತಿಯಿಂದಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸೋಂಕು ಹರಡುವ ಸಾಧ್ಯತೆಗಳು ಹೆಚ್ಚಾಗಿದ್ದರಿಂದ ಪೊಲೀಸರು ತಾತ್ಕಾಲಿಕವಾಗಿ ಡ್ರಿಂಕ್ ಆಂಡ್ ಡ್ರೈವ್ ತಪಾಸಣೆಯನ್ನೇ ನಿಲ್ಲಿಸಿದ್ದಾರೆ.
ಮನುಷ್ಯರ ಉಸಿರಾಟ, ಸ್ಪರ್ಶದಿಂದ ಕೊರೊನಾ ವೈರಸ್ ಸೋಂಕು ಹರಡುವ ಅಪಾಯವಿದೆ. ಈ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ಎಚ್ಚರಿಕೆ ವಹಿಸಲು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಹೊಸ ಆದೇಶ ಹೊರಡಿಸಿದೆ.

ಸೋಂಕು ಹರಡುವಿಕೆ ತಪ್ಪಿಸಲು ಪೊಲೀಸರ ಕ್ರಮ
ಸಿಲಿಕಾನ್ ಸಿಟಿಯಲ್ಲಿ ಸೋಂಕು ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯೂ ಕೂಡಾ ಕ್ರಮ ತೆಗೆದುಕೊಂಡಿದೆ. ಸಾಮಾನ್ಯ ದಿನಗಳಷ್ಟೇ ಅಲ್ಲದೇ ವೀಕೆಂಡ್ ನಲ್ಲೂ ಕೂಡಾ ಡ್ರಿಂಕ್ ಆಂಡ್ ಡ್ರೈವ್ ತಪಾಸಣೆಗೆ ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ ಎಂದು ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ರವಿಕಾಂತೇಗೌಡರು ಆದೇಶ ಹೊರಡಿಸಿದ್ದಾರೆ.

ತಪಾಸಣೆಗೆ ಒಂದೇ ಯಂತ್ರ ಬಳಸುವುದೇ ಡೇಂಜರ್
ಒಂದೇ ಯಂತ್ರವನ್ನು ಬಳಸಿ ಡ್ರಿಂಕ್ ಆಂಡ್ ಡ್ರೈವ್ ತಪಾಸಣೆಯನ್ನು ನಡೆಸಲಾಗುತ್ತದೆ. ಇದರಿಂದ ಸೋಂಕು ಹರಡುವ ಅಪಾಯ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಮುಂದಿನ ಆದೇಶ ನೀಡುವವರೆಗೂ ತಪಾಸಣೆಗೆ ತಡೆ ನೀಡಲಾಗಿದೆ. ಮುಂದಿನ ಆದೇಶ ನೀಡುವವರೆಗೂ ಯಾವುದೇ ರೀತಿ ತಪಾಸಣೆ ನಡೆಸದಂತೆ ಸೂಚನೆ ನೀಡಲಾಗಿದೆ.

ವೈದ್ಯಕೀಯ ಪರೀಕ್ಷೆ ನಡೆಸಿ ದಂಡ ವಿಧಿಸಲು ಅನುಮತಿ
ಡ್ರಿಂಕ್ ಆಂಡ್ ಡ್ರೈವ್ ತಪಾಸಣೆ ಇರೋದಿಲ್ಲ ಎಂದು ವಾಹನ ಸವಾರರು ರಿಲ್ಯಾಕ್ಸ್ ಆಗುವ ಹಾಗಿಲ್ಲ. ಏಕೆಂದರೆ ಅನುಮಾನ ವ್ಯಕ್ತವಾದಲ್ಲಿ ವಾಹನ ಸವಾರರನ್ನು ವೈದ್ಯಕೀಯ ಪರೀಕ್ಷೆ ನಡೆಸಿ ದಂಡ ವಿಧಿಸಲು ಸಂಚಾರಿ ಪೊಲೀಸ್ ಆಯುಕ್ತರು ಅನುಮತಿ ನೀಡಿದ್ದಾರೆ.

ಚೀನಾದಲ್ಲಿ ಸಾವಿನ ಸಂಖ್ಯೆ 811ಕ್ಕೆ ಏರಿಕೆ
ಸಾರ್ಸ್ ರೋಗದ ದಾಖಲೆಯನ್ನೂ ಹಿಂದಿಕ್ಕಿ ಕೊರೊನಾ ವೈರಸ್ ರೋಗಕ್ಕೆ ಚೀನಾದಲ್ಲಿ ಇದುವರೆಗೂ 811ಕ್ಕೂ ಅಧಿಕ ಮಂದಿ ಪ್ರಾಣ ಬಿಟ್ಟಿದ್ದಾರೆ. ಇನ್ನು, 40 ಸಾವಿರಕ್ಕೂ ಅಧಿಕ ಜನರಲ್ಲಿ ಶಂಕಿತ ಸೋಂಕು ತಗಲಿರುವ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications