ಏಪ್ರೀಲ್ 14 ರವರೆಗೂ ನಮ್ಮ ಮೆಟ್ರೋ ಸಂಚಾರ ಇರುವುದಿಲ್ಲ
ಬೆಂಗಳೂರು, ಮಾರ್ಚ್ 22: ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಅವರು ಜನತಾ ಕರ್ಪ್ಯೂ ಗೆ ಕರೆ ನೀಡಿದ್ದಾರೆ.
ಇದಕ್ಕೆ ಬೆಂಬಲ ನೀಡುವ ನಿಟ್ಟಿನಲ್ಲಿ ಬೆಂಗಳೂರಿನ ನಮ್ಮ ಮೆಟ್ರೋ ಕೂಡ ಏಪ್ರೀಲ್ 14 ರವೆರೆಗೆ ಮಟ್ರೋ ಓಡಿಸದಿರಲು ಬಿಎಂಆರ್ಸಿಎಲ್ ನಿರ್ಧರಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಎಂಆರ್ಸಿಎಲ್, ಕೋವಿಡ್ 19 ಹರಡುವುದನ್ನು ತಡೆಗಟ್ಟುವ ಸಲುವಾಗಿ, ಏಪ್ರೀಲ್ 14 ರವೆರೆಗೆ ಮೆಟ್ರೋ ಸಂಚಾರ ಇರುವುದಿಲ್ಲ. ಜನ ಇದಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದೆ.
ಕೊರೊನಾ ಭೀತಿ; ಇಡೀ ಕರ್ನಾಟಕ ಲಾಕ್ಡೌನ್ ಮಾಡಲು ಸಿಎಂ ಆದೇಶ
ಕೋವಿಡ್ 19 ಹರಡುವುದನ್ನು ತಡೆಗಟ್ಟಲು ಸರ್ಕಾರ ಸೂಚಿಸಿದ ನಿಯಮಗಳನ್ನು ಅನುಸರಿಸಿ ಎಂದು ಪ್ರಯಾಣಿಕರಿಗೆ ಬಿಎಂಆರ್ಸಿಎಲ್ ಮನವಿ ಮಾಡಿದೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 55 ಕ್ಕೆ ಏರಿದ್ದು ಮಾರಕ ರೋಗಕ್ಕೆ ಇದುವರೆಗೆ ರಾಜ್ಯದಲ್ಲಿ 2 ಜನ ಮೃತಪಟ್ಟಿದ್ದಾರೆ. ಸೋಂಕು ಹರಡುವುದನ್ನು ತಡೆಗಟ್ಟಲು ಮಾರ್ಚ್ 23 ರಂದೇ ಬಿಎಂಆರ್ಸಿಎಲ್ ಮೆಟ್ರೋ ಸಂಚಾರವನ್ನು ಸಂಪೂರ್ಣ ರದ್ದು ಮಾಡಿತ್ತು.