ಬಡವರಿಗೆ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಆಹಾರ ವಿತರಣೆ
ಬೆಂಗಳೂರು, ಮಾರ್ಚ್ 28: ಡೆಡ್ಲಿ ಕೊರೊನಾ ವೈರಸ್ ನ ತಡೆಗಟ್ಟಲು ಭಾರತವನ್ನು ಲಾಕ್ ಡೌನ್ ಮಾಡಲಾಗಿದೆ. ಏಪ್ರಿಲ್ 14 ರವರೆಗೂ ಭಾರತ ಲಾಕ್ ಡೌನ್ ಆಗಿರಲಿದ್ದು, ಬಡವರಿಗೆ, ಬೀದಿ ವ್ಯಾಪಾರಿಗಳಿಗೆ ಮತ್ತು ಕೂಲಿ ಕಾರ್ಮಿಕರಿಗೆ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಆಹಾರ ವ್ಯವಸ್ಥೆ ಮಾಡಲಾಗಿದೆ.
ಉಚಿತ ಆಹಾರ ವಿತರಣೆಯಿಂದ ಹೆಚ್ಚು ಜನ ಸೇರುತ್ತಾರೆ. ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುವ ಕಾರಣ ಇಂದಿರಾ ಕ್ಯಾಂಟೀನ್ ಬಂದ್ ಮಾಡುತ್ತೇವೆ ನಾಲ್ಕು ದಿನಗಳ ಹಿಂದೆಯಷ್ಟೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದರು.
ಆದ್ರೆ, ಲಾಕ್ ಡೌನ್ ನಿಂದಾಗಿ ಬಡವರು ಸಂಕಷ್ಟಕ್ಕೆ ಸಿಲುಕಿರುವ ಕಾರಣ, ಇಂದಿರಾ ಕ್ಯಾಂಟೀನ್ ತೆರೆಯಲು ಸಿಎಂ ಯಡಿಯೂರಪ್ಪ ಸಮ್ಮತಿ ಕೊಟ್ಟಿದ್ದಾರೆ.

ಇಂದಿರಾ ಕ್ಯಾಂಟೀನ್ ಟೈಮಿಂಗ್ಸ್
ಬೆಳಗ್ಗೆ 7.30 ರಿಂದ 10 ಗಂಟೆ, ಮಧ್ಯಾಹ್ನ 12.30 ರಿಂದ 3 ಗಂಟೆ, ರಾತ್ರಿ 7.30 ರಿಂದ 9 ಗಂಟೆವರೆಗೆ ಇಂದಿರಾ ಕ್ಯಾಂಟೀನ್ ತೆರೆದಿರುತ್ತದೆ. ಈ ಸಮಯದಲ್ಲಿ ಬೀದಿ ವ್ಯಾಪಾರಿಗಳು, ಕೂಲಿ ಕಾರ್ಮಿಕರು ಮತ್ತು ಬಡ ನಾಗರೀಕರು ಉಚಿತವಾಗಿ ಊಟ ಸೇವಿಸಬಹುದು.

ನಾಗರೀಕರಿಗೆ ಸೂಚನೆ
ಆಹಾರ ಸೇವಿಸಲು ಇಂದಿರಾ ಕ್ಯಾಂಟೀನ್ ಗೆ ಬರುವವರು ಸ್ವಚ್ಛತೆ ಮತ್ತು ನೈರ್ಮಲ್ಯತೆ ಕಾಪಾಡಿಕೊಳ್ಳಬೇಕು. ಆಹಾರದ ಕೂಪನ್ ಪಡೆಯುವ ಸಂದರ್ಭದಲ್ಲಿ ನಾಗರೀಕರು ಕನಿಷ್ಟ 1 ಮೀಟರ್ ಅಂತರ ಕಾಯ್ದುಕೊಂಡು ಸಾಲಿನಲ್ಲಿ ನಿಲ್ಲಬೇಕು. ಜೊತೆಗೆ ನಾಗರೀಕರು ಮಾಸ್ಕ್ ಧರಿಸಿರಬೇಕು ಎಂಬ ಸೂಚನೆ ನೀಡಲಾಗಿದೆ.

ಸಾಬೂನು, ಹ್ಯಾಂಡ್ ಸ್ಯಾನಿಟೈಸರ್ ಇರಲೇಬೇಕು
ಇಂದಿರಾ ಕ್ಯಾಂಟೀನ್ ನಲ್ಲಿ ಸಾಬೂನು ಮತ್ತು ಹ್ಯಾಂಡ್ ಸ್ಯಾನಿಟೈಸರ್ ಗಳನ್ನು ಇರಿಸುವಂತೆ ಆದೇಶಿಸಲಾಗಿದೆ. ಆಹಾರ ವಿತರಿಸುವ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಮತ್ತು ಗ್ಲೌಸ್ ಗಳನ್ನು ಧರಿಸುವಂತೆ ಸೂಚಿಸಲಾಗಿದೆ.

ಕರ್ನಾಟಕದಲ್ಲಿ ಕೊರೊನಾ
ಕರ್ನಾಟಕದಲ್ಲಿ ಇಲ್ಲಿಯವರೆಗೂ ಒಟ್ಟು 64 ಕೊರೊನಾ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಅದರಲ್ಲಿ 3 ಮಂದಿ ಈಗಾಗಲೇ ಸಾವನ್ನಪ್ಪಿದ್ದು, 5 ಮಂದಿ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications