ಕೊರೊನಾ ತಡೆಗೆ ಸಿಎಂ ಪರಿಹಾರ ನಿಧಿಗೆ ಗಾಯಕ ವಿಜಯ ಪ್ರಕಾಶ್ ನೆರವು
ಬೆಂಗಳೂರು, ಏಪ್ರಿಲ್ 04: ಕೊರೊನಾ ತಡೆಗೆ ಕನ್ನಡ ಚಿತ್ರರಂಗದ ಕೆಲವರು ಸಹಾಯ ಹಸ್ತಾ ಚಾಚಿದ್ದಾರೆ ಇದೀಗ ಗಾಯಕ ವಿಜಯ್ ಮುಖ್ಯಮಂತ್ರಿ ಪರಿಹಾರ ನಿಧಿಗೆ 10 ಲಕ್ಷ ಪರಿಹಾರ ಮೊತ್ತ ಹಸ್ತಾಂತರಿಸಿದ್ದಾರೆ.
''ಕೆರೆಯ ನೀರನು ಕೆರೆಗೆ ಚೆಲ್ಲಿ ವರವ ಪಡೆದವರಂತೆ ಕಾಣಿರೋ' ಅಂತ ಪುರಂದರ ದಾಸರು ಹೇಳಿರುವಂತ ಮಾತು, ನನ್ನ ಜೀವನದಲ್ಲಿ ಸಮಸ್ತ ಕನ್ನಡ ಜನತೆ ಆ ಪ್ರೀತಿಯ ಬೊಗಸೆಯನ್ನ ತುಂಬಿಸಿ ಕೊಟ್ಟಿದ್ದಾರೆ. ಆ ಬೊಗಸೆಯಿಂದ ಒಂದು ಚಿಕ್ಕ ಕಾಣಿಕೆ ಜನರಿಗಾಗಿ ಮಾಡೋದು ನನ್ನ ಸೌಭಾಗ್ಯ, ನನ್ನ ಕರ್ತವ್ಯ, ಇದು ಭಗವಂತನ ಕೃಪೆ ಎಂದು ಭಾವಿಸುತ್ತೇನೆ.'' ಎಂದು ವಿಜಯ್ ಪ್ರಕಾಶ್ ಸಂತಸ ಹಂಚಿಕೊಂಡಿದ್ದಾರೆ.
''ಕರೋನಾ ಮಹಾಮಾರಿಯನ್ನ ನಾವೆಲ್ಲರೂ ಮನೆಯೊಳಗಿದ್ದು ಎದುರಿಸುತ್ತಿದ್ದರೆ, ಹೊರಗಡೆ ನಮ್ಮ ರಾಜ್ಯದ ಮುಖ್ಯಮಂತ್ರಿಗಳು, ನಮ್ಮ ಸರ್ಕಾರದ ಎಲ್ಲ ಅಧಿಕಾರಿಗಳು, ಡಾಕ್ಟರ್ಸ್ ಹಾಗೂ ಅವರ ತಂಡ, ಪೊಲೀಸರು ಹೀಗೆ ಹಗಲು ರಾತ್ರಿ ನಮ್ಮನ್ನ ಈ ಒಂದು ಮಹಾಮಾರಿಯಿಂದ ರಕ್ಷಿಸಲು ಕೆಲಸ ಮಾಡ್ತಾ ಇದ್ದಾರೆ. ಇಂಥ ಒಂದು ಸಂದರ್ಭದಲ್ಲಿ ನಾವೆಲ್ಲರೂ ನಮ್ಮ ಕೈಯಲ್ಲಿ ಆದಷ್ಟು ಪರಿಹಾರ ನಿಧಿಗೆ ಕೊಟ್ಟರೆ ಅದು ಎಲ್ಲಿಯೋ ಯಾರೋ ಒಬ್ಬರ ಪ್ರಾಣವನ್ನ ಉಳಿಸಲು ಅನುಕೂಲವಾಗಬಹುದು ಎಂದು ಭಾವಿಸುತ್ತೇನೆ. ನನ್ನ ಪ್ರಾರ್ಥನೆ, ನಿಮ್ಮ ಕೈಯಲ್ಲಿ ಆದಷ್ಟು ಕೊಡುಗೆಯನ್ನ ಈ ಪರಿಹಾರ ನಿಧಿಗೆ ಮಾಡಿ. ನಿಮ್ಮಿಂದ ಯಾರೋ ಒಬ್ಬರ ಜೀವ ಉಳಿಯಲಿಕ್ಕೆ ಸಾಧ್ಯವಾಗುತ್ತೆ'' ಎಂದು ಮನವಿ ಮಾಡಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿಗೆ ಮಾತ್ರವಲ್ಲದೆ, ಪ್ರಧಾನಮಂತ್ರಿಗಳ ಪರಿಹಾರ ನಿಧಿಗೆ ಹಾಗೂ ಕೆಲವು ರಾಜ್ಯಗಳ ಪರಿಹಾರ ನಿಧಿಗೆ ಕೂಡ ದೇಣಿಗೆಯನ್ನ ವಿಜಯ್ ಪ್ರಕಾಶ್ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ''ಇಂಥ ಸಮಯದಲ್ಲಿ ನಾವೆಲ್ಲರೂ ಕೈಜೋಡಿಸಿ ನಿಂತರೆ, ಖಂಡಿತವಾಗಿಯೂ ಈ ಕರೋನಾ ಅನ್ನುವ ಮಹಾಮಾರಿಯನ್ನ ಗೆದ್ದು ಮೊದಲಿನಂತೆಯೇ ಸಮಾಜದಲ್ಲಿ ಸುಖವಾಗಿ, ಸಂತೋಷವಾಗಿ ಬದುಕುತ್ತೇವೆ ಅನ್ನುವ ಭರವಸೆ ನನಗಿದೆ.'' ಎಂದು ಜನರಿಗೆ ಧೈರ್ಯ ತುಂಬಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications