Coronavirus; ಕರ್ನಾಟಕದಲ್ಲೂ ಬಯೋಮೆಟ್ರಿಕ್ ಹಾಜರಾತಿಗೆ ವಿನಾಯಿತಿ
ಬೆಂಗಳೂರು, ಮಾರ್ಚ್ 7: ಕೊರೊನಾ ವೈರಸ್ ಸೋಂಕಿನ ಭಯದ ಹಿನ್ನೆಲೆಯಲ್ಲಿ ಉದ್ಯೋಗಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ವಿನಾಯಿತಿ ನೀಡಲು ಕೇಂದ್ರ ಸರ್ಕಾರ ಶುಕ್ರವಾರ ನಿರ್ಧರಿಸಿದ ಬೆನ್ನಲ್ಲೇ ಕರ್ನಾಟಕ ಸರ್ಕಾರವೂ ಈ ಕ್ರಮ ಕೈಗೊಂಡಿದೆ.
ರಾಜ್ಯ ಸರ್ಕಾರದ ಕಚೇರಿಗಳಿಗೆ, ಕಾರ್ಪೊರೇಟ್ ಹಾಗೂ ಐಟಿ ಕಂಪನಿಗಳಿಗೆ ಈ ತಾತ್ಕಾಲಿಕ ಬದಲಾವಣೆ ಅನ್ವಯವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.
ಕರೋನಾ ವೈರಸ್ ಹರಡದಂತೆ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಲಲಾಗಿದೆ. ಐಟಿ ಸಂಸ್ಥೆಗಳೊಂದಿಗೆ ನಮ್ಮ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಕರೋನಾ ತಡೆಗಟ್ಟುವುದಕ್ಕೆ ಮಾರ್ಗಸೂಚಿಗಳ ಬಗ್ಗೆ ಮಾತನಾಡಿದ್ದಾರೆ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ತಾತ್ಕಾಲಿಕವಾಗಿ ನಿಲ್ಲಿಸುವುದೂ ಸಹ ಇವುಗಳ ಪೈಕಿ ಒಂದು ಎಂದು ಅವರು ಹೇಳಿದ್ದಾರೆ.

ಕರ್ನಾಟಕದಲ್ಲಿ ಈ ವರೆಗೂ ಒಂದೇ ಒಂದು ಕರೋನಾ ವೈರಸ್ ಪ್ರಕರಣವೂ ಪತ್ತೆಯಾಗಿಲ್ಲ. ವೈರಸ್ ಹರಡದಂತೆ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಸುಧಾಕರ್ ಹೇಳಿದ್ದಾರೆ.












Click it and Unblock the Notifications