COTPA Violation: 13 ವ್ಯಾಪಾರಿ ಸಂಸ್ಥೆಗಳಿಗೆ ಬೀಗ ಜಡಿದ ಬಿಬಿಎಂಪಿ, 50 ನೋಟಿಸ್ ಜಾರಿ
ಬೆಂಗಳೂರು, ಅಕ್ಟೊಬರ್ 20: ಸಿಗರೇಟ್ ಮತ್ತು ಇನ್ನಿತರ ತಂಬಾಕು ಉತ್ಪನ್ನಗಳ ನಿಯಮ ಉಲ್ಲಂಘನೆ ಕುರಿತು ವಿವಿಧ ವ್ಯಾಪಾರ ಸಂಸ್ಥೆಗಳ ಮೇಲೆ ದಾಳಿ ನಡೆಸಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಅಧಿಕಾರಿಗಳು ಹಲವು ಮಳಿಗೆಗಳನ್ನು ಬಂದ್ ಮಾಡಿಸಿದ್ದಾರೆ. ನಿಯಮ ಉಲ್ಲಂಘಿಸಿದ್ದಕ್ಕಾಗಿ ಭಾರೀ ದಂಡ ಸಹ ವಿಧಿಸಿದ್ದಾರೆ.
ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯಿದೆ (COTPA) ಅಡಿಯಲ್ಲಿ ಬಿಬಿಎಂಪಿ ಅಧಿಕಾರಿಗಳು ನಗರದ ಎಲ್ಲ ಎಂಟು ವಲಯಗಳಲ್ಲಿನ 13 ವ್ಯಾಪಾರ ಸಂಸ್ಥೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡು ಮಾರಾಟ ಮಾಡದಂತೆ ಎಚ್ಚರಿಕೆ ವಹಿಸಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.

ಅಷ್ಟೇ ಅಲ್ಲದೇ ಕಾಯಿದೆ ಉಲ್ಲಂಘನೆ ಮಾಡಿದ್ದಕ್ಕಾಗಿ ಒಟ್ಟು 50 ಸಂಸ್ಥೆಗಳಿಗೆ ನೋಟಿಸ್ಗಳನ್ನು ಜಾರಿ ಮಾಡಲಾಗಿದೆ. ತಪ್ಪಿತಸ್ಥರಿಂದ ಸುಮಾರು 50,000 ರೂ.ಗಳ ದಂಡವನ್ನು ಸಂಗ್ರಹಿಸಲಾಗಿದೆ. ಕಾಯಿದೆ ಉಲ್ಲಂಘನೆ ಪತ್ತೆಗೆ ಸಿಒಟಿಪಿಎ ಉಲ್ಲಂಘನೆ ವಿರುದ್ಧ ನಗರ ಪೊಲೀಸರ ವಿಶೇಷ ಅಭಿಯಾನ ನಡೆಸಿದ್ದಾರೆ ಎಂದು ಬಿಬಿಎಂಪಿ ಆರೋಗ್ಯ ಆಯುಕ್ತ ಕೆ.ವಿ.ತ್ರಿಲೋಕ್ ಚಂದ್ರ ಅವರು ತಿಳಿಸಿದರು.
ಬಿಬಿಎಂಪಿಯಿಂದ 50 ವ್ಯಾಪಾರಿ ಸಂಸ್ಥೆಗಳಿಗೆ ನೋಟಿಸ್
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಈ 'ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯಿದೆ (COTPA)' ಕಾಯ್ದೆ ಉಲ್ಲಂಘಿಸಿದವರ ವಿರುದ್ಧ ಮೊದಲ ಬಾರಿಗೆ 50 ಸಂಸ್ಥೆಗೆ ನೋಟಿಸ್ ನೀಡಲಾಗಿದೆ ಎಂದರು.

ಬೆಂಗಳೂರಿನಲ್ಲಿ ವಾರಾಂತ್ಯ ಬಂತೆಂದರೆ ಸಾಕು ಪಬ್ಗಳು, ರೆಸ್ಟೋರೆಂಟ್ಗಳು ಮತ್ತು ಹೋಟೆಲ್ಗಳಲ್ಲಿ ಜನಸಂದಣಿ ಹೆಚ್ಚಿಸುತ್ತದೆ. ಈ ಕುರಿತು ದೀಢಿರ್ ತಪಾಸಣೆ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಕಾಯ್ದೆ ನಿಯಮಗಳ ಅನುಸರಣೆ ಆಗಿದೆಯೋ ಇಲ್ಲವೆ ಎಂದು ಅಧಿಕಾರಿಗಳು ಪರಿಶೀಲಿಸಿದರು.
ನಿಯಮ ಉಲ್ಲಂಘನೆ ಸಂಬಂಧ ಪೊಲೀಸರಿಗೆ ದೂರುಗಳು
ಇತ್ತೀಚೆಗೆ ಈ ಕಾಯಿದೆ ಉಲ್ಲಂಘನೆ ಮಾಡುತ್ತಿವೆ ಎಂದು ಕೆಲವು ರೆಸ್ಟೋರೆಂಟ್ಗಳು, ಪಬ್ಗಳು ಮತ್ತು ಕೆಫೆಗಳ ವಿರುದ್ಧ ಸಾಕಷ್ಟು ದೂರುಗಳ ಬಂದಿದ್ದವು. ಅದರ ಆಧಾರದಲ್ಲಿ ನಗರ ಪೊಲೀಸರು ನೂರಾರು ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.ಮತ್ತು ನಿಯಮ ಅನುಸರಿಸದ ಹಾಗೂ 'ಧೂಮಪಾನ ನಿಷೇಧ ವಲಯ' ಎಂಬ ಫಲಕಗಳನ್ನು ಹಾಕಿದ್ದಕ್ಕಾಗಿ ಐದು ಸಂಸ್ಥೆಗಳನ್ನು ಮುಚ್ಚಲಾಯಿತು. ಜೊತೆಗೆ ಗೊತ್ತುಪಡಿಸಿದ ಧೂಮಪಾನ ಪ್ರದೇಶಗಳು ಮಾರ್ಗಸೂಚಿಗಳಿಗೆ ಬದ್ಧವಾಗಿದೆಯೇ ಎಂದು ಪೊಲೀಸರು ಖದ್ದು ಪರಿಶೀಲಿಸಿದ್ದಾರೆ. ಈ ಮೂಲಕ ಪಾಲಿಕೆ ಮತ್ತು ಪೊಲೀಸರು ಇಬ್ಬರು ಸೂಕ್ತ ಕ್ರಮ ಜರುಗಿಸಿದ್ದಾರೆ.
ಪೊಲೀಸ್ ಆಯುಕ್ತರಿಂದ ಜಾಗೃತಿ-ಎಚ್ಚರಿಕೆ
ಇತ್ತೀಚೆಗೆ ಬೆಂಗಳುರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುವ ಎಚ್ಚರಿಕೆ ನೀಡಿದ್ದರು. ಧೂಮಪಾನದ ದುಷ್ಪರಿಣಾಮಗಳ ಕುರಿತು ಕೈಪಿಡಿ ಬಿಡುಗಡೆ ಮಾಡಿ ಕಾಯಿದೆ (COTPA) ನಿಯಮಗಳ ಕುರಿತು ಜಾಗೃತಿ ಮೂಡಿಸಿದ್ದರು. ಇದರ ಬೆನ್ನಲ್ಲೆ ಪೊಲೀಸರು ನಗರದಾದ್ಯಂತ 1,000 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಪೈಕಿ 900ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಂಡಿದ್ದಾರೆ.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications