ಬೆಂಗಳೂರಿನಲ್ಲಿ ಮೊದಲ ಅಂತಾರಾಷ್ಟ್ರೀಯ ಪ್ರವಾಸಿ ಮೇಳ
ಬೆಂಗಳೂರು, ಜನವರಿ 3 : ದೇಶದ ಮೊದಲ ಅತಿದೊಡ್ಡ ಪ್ರವಾಸೋದ್ಯಮ ಮೇಳ 'ಕರ್ನಾಟಕ ಅಂತಾರಾಷ್ಟ್ರೀಯ ಪ್ರವಾಸಿ ಎಕ್ಸ್ ಪೋ 2018' ಫೆಬ್ರವರಿ 28 ರಿಂದ ಮಾರ್ಚ್ 2 ರವರೆಗೆ ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಡೆಯಲಿದೆ.
ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಮೂರು ದಿನಗಳ ಅತಿದೊಡ್ಡ ಪ್ರವಾಸಿ ಮೇಳವನ್ನು ಏರ್ಪಡಿಸಲಾಗುತ್ತಿದೆ. ಮೇಳದಲ್ಲಿ 25ಕ್ಕೂ ಹೆಚ್ಚು ದೇಶಗಳ 400 ಕ್ಕೂ ಹೆಚ್ಚಿನ ನೋಂದಾಯಿತ ಖರೀದಿದಾರರು ಮತ್ತು ಮಾಧ್ಯಮಗಳು ಪಾಲ್ಗೊಳ್ಳಲಿದ್ದಾರೆ ಎಂದು ಪ್ರವಾಸೋದ್ಯಮ ಮತ್ತು ಐಟಿ,ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

12 ಸಾವಿರಕ್ಕೂ ಹೆಚ್ಚಿನ ಬಿ2ಬಿ ಸಂದರ್ಶನಗಳು ನಡೆಯಲಿದೆ. ರಾಜ್ಯದಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ಇನ್ನಷ್ಟು ಅಭಿವೃದ್ಧಿಪಡಿಸುವುದು, ಪ್ರವಾಸಿ ತಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಪರಿಚಯಿಸುವುದು ಹಾಗೂ ಪ್ರವಾಸೋದ್ಯಮ ಕ್ಷೇತ್ರದ ಉದ್ಯಮಗಳ ಮೂಲಕ ಬಂಡವಾಳ ಹೂಡಿಕೆಗೆ ಒತ್ತು ನೀಡುವುದು ಈ ಮೇಳದ ಉದ್ದೇಶವಾಗಿದೆ.
ಮಾಸ್ಟರ್ ಪ್ಲ್ಯಾನ್: ರಾಜ್ಯದ 20 ಪ್ರಮುಖ ಪ್ರವಾಸಿ ತಾಣಗಳಲ್ಲಿ ಮೂಲಸೌಕರ್ಯ ಇನ್ನಿತರೆ ಸೌಲಭ್ಯಗಳ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಲಾಗಿದೆ. ಪ್ರಮುಖವಾಗಿ ಯಾದಗಿರಿ ಕೋಟೆ, ಕಲಬುರಗಿ ಕೋಟೆ, ತಲಕಾವೇರಿ, ಬೇಲೂರು, ಹಳೆಬೀಡು, ಹಂಪಿ ಸೇರಿದಂತೆ ಪ್ರಮುಖ 20 ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಈಗಾಗಲೇ 7 ತಾಣಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿಸೃತ ಯೋಜನಾ ವರದಿ ಸಿದ್ಧಪಡಿಸಲಾಗಿದೆ ಎಂದು ಹೇಳಿದರು.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ












Click it and Unblock the Notifications