ಆನ್ಲೈನ್ನಲ್ಲಿ ನಿಶ್ಚಿತಾರ್ಥ: ಹೊಸ ಟ್ರೆಂಡ್ ಸೃಷ್ಟಿಸಿದ ಜೋಡಿ
ಬೆಂಗಳೂರು, ಫೆಬ್ರವರಿ 12: ಆನ್ಲೈನ್ನಲ್ಲಿ ಊಟ ಆರ್ಡರ್ ಮಾಡೋದು ಗೊತ್ತು, ಬಟ್ಟೆ, ಮೊಬೈಲ್ಗಳನ್ನೂ ಆರ್ಡರ್ ಮಾಡುತ್ತೇವೆ ಆದರೆ ನಿಶ್ಚಿತಾರ್ಥವನ್ನು ಮಾಡಿಕೊಂಡಿರುವುದನ್ನು ಎಲ್ಲಿಯೂ ನೋಡಿರಲು ಸಾಧ್ಯವಿಲ್ಲ.
ಹೌದು ಇದು ಆನ್ಲೈನ್ ನಿಶ್ಚಿತಾರ್ಥ, ಉಂಗುರವನ್ನು ಬದಲಾಯಿಸಿಕೊಳ್ಳದೆ ಮೊಬೈಲ್ನಲ್ಲಿ ಒಬ್ಬರಮುಖವನ್ನೊಬ್ಬರು ನೋಡಿಕೊಂಡು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇದರಿಂದ ಆನ್ಲೈನ್ ನಿಶ್ಚಿತಾರ್ಥದ ಟ್ರೆಂಡ್ ಆರಂಭವಾಗಿದೆ.
ವಧು-ವರರು ವಿಡಿಯೋ ಕಾಲ್ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮನೆ ಮಂದಿಯೆಲ್ಲ ಸೇರಿಕೊಂಡು ಮೊಬೈಲ್ನಲ್ಲಿ ವಿಡಿಯೋ ಕಾಲ್ನಲ್ಲಿದ್ದ ವಧು-ವರರಿಗೆ ನಿಶ್ಚಿತಾರ್ಥದ ಶಾಸ್ತ್ರ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಆನ್ಲೈನ್ ನಿಶ್ಚಿತಾರ್ಥದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಮುಂದೆ ಇದು ಹೊಸ ಟ್ರೆಂಡ್ ಕೂಡ ಆಗುವುದರಲ್ಲಿ ಯಾವುದೇ ಸಂದೇಹವಿಲ್ಲ.

ಇಬ್ಬರೂ ಕೆಲಸದಲ್ಲಿ ಬಿಜಿಯಾಗಿದ್ದಾರೆ, ಇಬ್ಬರಿಗೂ ಒಂದು ಊರಿನಲ್ಲಿ ಬಂದು ಸೇರಲು ಸಾಧ್ಯವಾಗಿಲ್ಲ, ನಿಶ್ಚಿತಾರ್ಥ ನಡೆಯಲೇಬೇಕು ಹೀಗಾಗಿ ಈ ಉಪಾಯ ಮಾಡಿದ್ದಾರೆ, ವಧುವಿನ ನೆಂಟರಿಷ್ಟರು ಅವರ ಮನೆಯಲ್ಲಿ, ವರನ ನೆಂಟರು ಅವರ ಮನೆಯಲ್ಲಿ ಇಬ್ಬರೂ ಮೊಬೈಲ್ ಹಿಡಿದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಕೈಬೆರಳ ತುದಿಯಲ್ಲಿರುವ ಇಂಟರ್ನೆಟ್ನಿಂದ ಎಷ್ಟೆಲ್ಲಾ ಉಪಯೋಗವಿದೆ ಎನ್ನುವುದು ಕೂಡ ಇದರಿಂದ ತಿಳಿದಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ











Click it and Unblock the Notifications