ವಿಮಾನ ನಿಲ್ದಾಣಕ್ಕೆ ಸುಳ್ಳು ಬಾಂಬ್ ಕರೆ, ನಿಶ್ಚಿತಾರ್ಥದ ಜೋಡಿಯ ಕಿಲಾಡಿ ಐಡಿಯಾ
ಕೊಚ್ಚಿಗೆ ತೆರಳಬೇಕಿದ್ದ ವಿಮಾನ ತಪ್ಪಿಸಿಕೊಳ್ತೀವಿ ಎಂಬ ಕಾರಣಕ್ಕೆ ನಿಶ್ಚಿತಾರ್ಥವಾಗಬೇಕಿದ್ದ ಜೋಡಿಯೊಂದು ತಮ್ಮ ಸ್ನೇಹಿತನ ಮೂಲಕ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕರೆ ಮಾಡಿಸಿ, ಹುಸಿ ಬಾಂಬ್ ಬೆದರಿಕೆ ಹಾಕಿಸಿದ್ದಾರೆ.
ಬೆಂಗಳೂರು, ಫೆಬ್ರವರಿ 10: ನಿಶ್ಚಿತಾರ್ಥ ಮಾಡಿಕೊಂಡು ಖುಷಿಯಾಗಿರಬೇಕಿದ್ದ ಜೋಡಿಯೊಂದು ಪೊಲೀಸರ ಅತಿಥಿಯಾಗಿರುವ ವರದಿ ಇದು. ಬೆಂಗಳೂರಿನ ಈ ಜೋಡಿ ತಮ್ಮ ನಿಶ್ಚಿತಾರ್ಥ ಗುರುವಾರ ರಾತ್ರಿ ಕೊಚ್ಚಿಯಲ್ಲಿತ್ತು. ಅದಕ್ಕಾಗಿ ಬುಧವಾರ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಹೋಗಬೇಕಾಗಿತ್ತು.
ಅದರೆ, ಕೊಚ್ಚಿ ವಿಮಾನವನ್ನು ಸರಿಯಾದ ಸಮಯಕ್ಕೆ ಹಿಡಿಯಲಾರೆವು ಅಂತ ಇಬ್ಬರಿಗೂ ಅನ್ನಿಸಿ, ಏರ್ ಪೋರ್ಟ್ ನಲ್ಲಿ ಬಾಂಬ್ ಇದೆ ಅಂತ ಕಾಗೆ ಹಾರಿಸಿ, ವಿಮಾನ ನಿಲ್ದಾಣದ ಅಧಿಕಾರಿಗಳಿದೆ ಕರೆ ಹೋಗುವಂತೆ ಮಾಡಿದ್ದಾರೆ. ಈ ಕಾರಣದಿಂದ ವಿಮಾನ ಏಳು ಗಂಟೆ ತಡವಾಗಿ ಹೊರಟಿದೆ.[ಬೆಂಗಳೂರು: ಅಪ್ರಾಪ್ತ ಯುವತಿ ಮೇಲೆ ಇವೆಂಟ್ ಮ್ಯಾನೇಜರ್ ಅತ್ಯಾಚಾರ]
ಬೆಂಗಳೂರು ಬಿಟಿಎಂ ಲೇಔಟ್ ನ ಅರ್ಜುನ್- ನೇಹಾ ಗೋಪಿನಾಥ್ ಸುಳ್ಳು ಕರೆ ಮಾಡಿಸಿದವರು. ತಾವು ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದೀವಿ ಎಂದು ಅಂಗಲಾಚಿದ ನಂತರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಿಡುಗಡೆ ಮಾಡಿದ್ದಾರೆ. "ಕೆಲ ದಿನಗಳ ನಂತರ ವಾಪಸ್ ಬರ್ತೀವಿ ಎಂದು ಮುಚ್ಚಳಿಕೆ ಬರೆದುಕೊಟ್ಟ ನಂತರ ಬಿಟ್ಟು ಕಳಿಸಿದ್ದೇವೆ" ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರೂ ತಮ್ಮ ಸ್ನೇಹಿತನೊಬ್ಬನಿಗೆ ಹೇಳಿ ಟರ್ಮಿನಲ್ ಮ್ಯಾನೇಜರ್ ಗೆ ಕರೆ ಮಾಡಿಸಿ, ಕೊಚ್ಚಿ ವಿಮಾನದಲ್ಲಿ ಬಾಂಬ್ ಇರುವುದಾಗಿ ಹೇಳುವಂತೆ ತಿಳಿಸಿದ್ದಾರೆ. ಅರ್ಜುನ್ ಹಾಗೂ ನೇಹಾ ಏರ್ ಏಷ್ಯಾ ವಿಮಾನದಲ್ಲಿ ರಾತ್ರಿ 8.45ಕ್ಕೆ ಬುಧವಾರ ರಾತ್ರಿ ಬೆಂಗಳೂರಿನಿಂದ ಕೊಚ್ಚಿಗೆ ಹೋಗಬೇಕಾಗಿತ್ತು.
ಅಲಪುಳದಲ್ಲಿ ಗುರುವಾರ ಅವರಿಬ್ಬರ ನಿಶ್ಚಿತಾರ್ಥವಿತ್ತು. ರಾತ್ರಿ 8 ಗಂಟೆಗೆ ಟ್ರಾಫಿಕ್ ನಲ್ಲಿ ಸಿಲುಕಿಕೊಂಡಿದ್ದರು. ಯಾವಾಗ ತಾವು ಸರಿಯಾದ ಸಮಯಕ್ಕೆ ವಿಮಾನ ನಿಲ್ದಾಣ ತಲುಪುವುದಿಲ್ಲ ಎಂದು ಗೊತ್ತಾಯಿತೋ ಅಗ ಹುಸಿ ಬಾಂಬ್ ಬೆದರಿಕೆಯ ಕರೆ ಮಾಡಿಸಿದ್ದಾರೆ ಎಂದು ಇನ್ ಸ್ಪೆಕ್ಟರ್ ತಿಳಿಸಿದ್ದಾರೆ.[ಸಿಡ್ನಿ ಟೆಕ್ಕಿ ಪ್ರಭಾ ಕೊಲೆ ಪ್ರಕರಣ: ಸಂಬಂಧಿಕರಿಂದಲೇ ಹತ್ಯೆ?]
8.35-8.40ರ ಮಧ್ಯೆ ಟರ್ಮಿನಲ್ ಮ್ಯಾನೇಜರ್ ಗೆ ಕರೆ ಮಾಡಿದ್ದ ವ್ಯಕ್ತಿ, ಕೊಚ್ಚಿ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ತಿಳಿಸಿದ್ದ. ತಕ್ಷಣವೇ ಬಾಂಬ್ ನಿಷ್ಕ್ರಿಯ ದಳದವರು ಬಂದು, ಪರಿಶೀಲನೆ ಮಾಡಿ, ಬಾಂಬ್ ಇಲ್ಲ ಎಂದು ಖಾತ್ರಿ ಪಡಿಸಿ, ವಿಮಾನ ಹೊರಡುವಷ್ಟರಲ್ಲಿ ಮಧ್ಯರಾತ್ರಿ 3 ಗಂಟೆ ಆಗಿತ್ತು.
ಬಾಂಬ್ ಹುಡೂಕುವ ವೇಳೆಯಲ್ಲಿ ಪೊಲೀಸರು ಕರೆ ಮಾಡಿದ ವ್ಯಕ್ತಿಯ ಮೂಲ ಪತ್ತೆ ಹಚ್ಚಲು ತೊಡಗಿದ್ದಾರೆ. ಅದು ಅಲಪುಳದಿಂದ ಬಂದಿರುವುದು ಗೊತ್ತಾಗಿದೆ. ಮತ್ತು ಇವರಿಬ್ಬರು ಅಲ್ಲಿಯವರೇ ಎಂದು ಗೊತ್ತಾಗಿದೆ. ತಾವು ಟ್ರಾಫಿಕ್ ನಲ್ಲಿ ಸಿಲುಕಿಕೊಂಡಿದ್ದೇವೆ. ಬರುವುದು ತಡವಾಗುತ್ತದೆ. ಸ್ವಲ್ಪ ಸಮಯ ಕಾಯಬಹುದಾ? ಎಂದು ಇವರಿಬ್ಬರು ಟರ್ಮಿನಲ್ ಮ್ಯಾನೇಜರ್ ಗೆ ಮನವಿ ಮಾಡಿದ್ದಾರೆ. ಆದ್ದರಿಂದ ಇಬ್ಬರನ್ನೂ ವಶಕ್ಕೆ ಪಡೆದು, ಪೊಲೀಸರು ವಿಚಾರಣೆ ನಡೆಸಿದಾಗ ಸತ್ಯ ಗೊತ್ತಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು












Click it and Unblock the Notifications