ಬಿಬಿಎಂಪಿಗೆ 49 ಕೋಟಿ ನಾಮ ಹಾಕಿದವರಿಗೆ ಬಂಧನದ ಭೀತಿ
ಬೆಂಗಳೂರು, ಫೆ. 25 : ಬಿಬಿಎಂಪಿಯಲ್ಲಿ ನಡೆದ 49 ಕೋಟಿ ಅವ್ಯವಹಾರ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಪಾಲಿಕೆಯ ಅಧಿಕಾರಿಗಳು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಲೆಕ್ಕಪತ್ರ ವಿಭಾಗದಲ್ಲಿ ನಡೆದಿದ್ದ 49 ಕೋಟಿ ಅವ್ಯವಹಾರ ಪ್ರಕರಣವನ್ನು ಬಿಬಿಎಂಪಿ ಸದಸ್ಯ ಎನ್.ಆರ್.ರಮೇಶ್ ಬಯಲಿಗೆಳೆದಿದ್ದರು. ಇದರಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ 17 ಮಂದಿ ಬಿಬಿಎಂಪಿ ಅಧಿಕಾರಿಗಳು ಮತ್ತು 12 ಗುತ್ತಿಗೆದಾರರು ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.

ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿದ ನಗರದ 9ನೇ ತ್ವರಿತ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಕೋಟ್ಯಂತರ ರೂ. ಅವ್ಯವಹಾರ ನಡೆದಿರುವ ಕಾರಣ ಜಾಮೀನು ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. [ಅಧಿಕಾರಿಗಳಿಂದಲೇ ಬಿಬಿಎಂಪಿಗೆ 49 ಕೋಟಿ ನಾಮ]
ಏನಿದು ಹಗರಣ : 39 ಲಕ್ಷ ರೂ. ಹಣ ಬಿಡುಗಡೆಯ ಟಿಪ್ಪಣಿಯನ್ನು ದುರ್ಬಳಕೆ ಮಾಡಿಕೊಂಡು 49 ಕೋಟಿ ರೂ. ಬಿಡುಗಡೆ ಮಾಡಿರುವ ಹಗರಣ ಇದಾಗಿದ್ದು, ಪಾಲಿಕೆ ಲೆಕ್ಕಪತ್ರ ವಿಭಾಗದ ಅಧಿಕಾರಿ ಸಂಜೀವಮೂರ್ತಿಯನ್ನು ಬಿಎಂಟಿಎಫ್ ಪೊಲೀಸರು ಬಂಧಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ.
ಪಾಲಿಕೆ ಲೆಕ್ಕಪತ್ರ ವಿಭಾಗದ ಕಚೇರಿ ಸಹಾಯಕ ಸಂಜೀವಮೂರ್ತಿ, ಮುಖ್ಯ ಹಣಕಾಸು ಅಧಿಕಾರಿ ವೀರಗೌಡ ಪಾಟೀಲ್ ಹಾಗೂ ಲೆಕ್ಕಪತ್ರ ಅಧಿಕಾರಿ ರಾಜಶೇಖರ್ ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಬಿಬಿಎಂಪಿ ಆಯುಕ್ತರು 110 ಹಳ್ಳಿಗಳಲ್ಲಿ ಕಾಮಗಾರಿಗಳಿಗೆ ಸಂಬಂಧಪಟ್ಟಂತೆ 39 ಲಕ್ಷ ರೂ. ಬಿಲ್ ಪಾವತಿಸುವಂತೆ ಆದೇಶ ನೀಡಿದ್ದರು. ಈ ಟಿಪ್ಪಣಿ ಹಾಳೆಯನ್ನು ತೆಗೆದು 147 ಕಾಮಗಾರಿಗಳ ಕಡತಕ್ಕೆ ಸೇರಿಸಿ 49 ಕೋಟಿ ರೂ. ಬಿಡುಗಡೆ ಮಾಡಿಕೊಂಡು ಅವ್ಯವಹಾರ ಮಾಡಲಾಗಿದೆ ಎಂಬುದು ಆರೋಪ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications