ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಮನ್ಸ್ ಜಾರಿ, ಏನಿದು ಪ್ರಕರಣ?
ಬೆಂಗಳೂರು, ಆಗಸ್ಟ್ 23: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜನಪ್ರತಿನಿಧಿಗಳ ಕೋರ್ಟ್ ಶುಕ್ರವಾರ ಸಮನ್ಸ್ ಜಾರಿ ಮಾಡಿದೆ.
ಮೈಸೂರಿನ ಹೀಕಲ್ ಗ್ರಾಮ ಪಂಚಾಯ್ತಿಯ 10 ಗುಂಟೆ ಜಮೀನು ಡಿನೋಟಿಫಿಕೇಷನ್ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ.
Recommended Video
ದೇವೇಗೌಡರು ತುಳಿದ ರಾಜಕಾರಣಿಗಳ ಪಟ್ಟಿ ನೀಡಿದ ಸಿದ್ದರಾಮಯ್ಯ | Oneindia Kannada

ಆ ಜಾಗದಲ್ಲಿ ಸಿದ್ದರಾಮಯ್ಯ ಅವರು ಮನೆಯನ್ನು ನಿರ್ಮಿಸಿ ಬಳಿಕ ಅದನ್ನು ಮಾರಾಟ ಮಾಡಿದ್ದರು ಎನ್ನುವ ಆರೋಪ ಕೂಡ ಕೇಳಿಬಂದಿತ್ತು. ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿಯಾಗಿದ್ದ ಸಂದರ್ಭ ಅಂದರೆ 1997ರಲ್ಲಿ ಡಿ ನೋಟಿಫಿಕೇಷನ್ ಮಾಡಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿತ್ತು.

ಈ ಪ್ರಕರಣವನ್ನು ಮೈಸೂರು ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಇದನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಗಂಗರಾಜು ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ನ್ಯಾಯಾಲಯ ಸೆಪ್ಟೆಂಬರ್ 23ರಂದು ಸಿದ್ದರಾಮಯ್ಯ ಅವರು ಕೋರ್ಟ್ಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.












Click it and Unblock the Notifications